ಬ್ರೇಕಿಂಗ್ ನ್ಯೂಸ್
16-03-22 05:02 pm Bengaluru Correspondent ಕ್ರೈಂ
ಬೆಂಗಳೂರು, ಮಾ.16 : ನಕಲಿ ಛಾಪಾ ಕಾಗದ ಹಾಗು ಸಬ್ ರಿಜಿಸ್ಟ್ರಾರ್ ಕಚೇರಿಯ ನಕಲಿ ಸೀಲು ಬಳಸಿ ಕೋಟಿ ಬೆಲೆಯ ಸೈಟ್ ಗಳ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಯಲಹಂಕ ಉಪನಗರ ಪೊಲೀಸರು ಪತ್ತೆಹಚ್ಚಿದ್ದು ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರದೀಪ್, ಧರ್ಮಲಿಂಗಂ, ಮಂಜುನಾಥ್, ಯಾರಬ್, ವೈ. ಆರ್ ಮಂಜುನಾಥ್, ಅಬ್ದುಲ್ ಹಾಗೂ ಶಬಾನ ಬಂಧಿತರು. ಇವರು ಗ್ಯಾಂಗ್ ಕಟ್ಟಿಕೊಂಡು ನಕಲಿ ಸೀಲ್ ಮತ್ತು ದಾಖಲಾತಿಗಳನ್ನು ಸೃಷ್ಟಿಸಿ ಸೈಟ್ ಗಳನ್ನು ಅದರ ಅಸಲಿ ಮಾಲೀಕರಿಗೆ ತಿಳಿಯದಂತೆ ಮಾರಾಟ ಮಾಡ್ತಿದ್ದರು. ಬಂಧಿತರಿಂದ ಒಟ್ಟು ಎಂಟು ಪ್ರಕರಣಗಳು ಬಯಲಿಗೆ ಬಂದಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಆರೋಪಿಗಳು ರಾಜಾರೋಷವಾಗಿ ಹಗಲು ದರೋಡೆ ನಡೆಸಲು ಇವರಿಗೆ ಬೆಂಗಾವಲಾಗಿ ನಟೋರಿಯಸ್ ರೌಡಿ ಶೀಟರ್ ರಾಮಯ್ಯ ಅಲಿಯಾಸ್ ಆಟೋ ರಾಮ ಬೆನ್ನಿಗೆ ನಿಂತಿದ್ದ. ಆರೋಪಿಗಳ ವಿಚಾರಣೆಯಲ್ಲಿ ಎರಡು ಕೋಟಿ ಹಣದ ವ್ಯವಹಾರ ಬೆಳಕಿಗೆ ಬಂದಿದೆ. ವಿದೇಶದಲ್ಲಿ ಇರುವ ಸೈಟ್ ಮಾಲೀಕರನ್ನು ಗುರುತಿಸುತ್ತಿದ್ದ ಗ್ಯಾಂಗ್, ಅದಕ್ಕೆ ಸಂಬಂಧಿಸಿದ 50 ವರ್ಷದ ಹಿಂದಿನ ಹಳೆ ದಾಖಲೆ, ಛಾಪಾ ಕಾಗದಗಳನ್ನು ತಯಾರಿಸುತ್ತಿದ್ದರು. ಸೈಟ್ ಯಾರ ಹೆಸರಿನಲ್ಲಿ ಇದೆ, ಅವರಿಗೆ ಯಾರ ಹೆಸರಿನಿಂದ ಸೈಟ್ ಬಂದಿತ್ತು ಎಂಬುದನ್ನು ಗುರುತಿಸಿ, ಬಳಿಕ ಈ ಸೈಟ್ ಅನ್ನು ಮೂಲ ಮಾಲೀಕರು ನಮಗೆ ವೀಲು ಮಾಡಿದ್ದಾರೆ ಎಂದು ಹೇಳಿ ಯಾಮಾರಿಸುತ್ತಿದ್ದರು. ನಕಲಿ ದಾಖಲೆಗಳನ್ನೇ ಇಟ್ಟುಕೊಂಡು ಸೈಟ್ ಮಾರಾಟ ಮಾಡುತ್ತಿದ್ದರು. ನಕಲಿ ದಾಖಲೆಗಳನ್ನೇ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅಸಲಿ ಎಂದು ಬಿಂಬಿಸಿ, ಹಣ ಕೊಟ್ಟು ಅಧಿಕೃತವಾಗಿ ರಿಜಿಸ್ಟರ್ ಮಾಡಿಸುತ್ತಿದ್ದರು. ಇವೆಲ್ಲ ದಲ್ಲಾಳಿ ಕೆಲಸಗಳಿಗೆ ರೌಡಿ ಆಟೋ ರಾಮ ಬೆಂಬಲ ನೀಡುತ್ತಿದ್ದ.
Bangalore Eighth arrested for creating fake government seal and selling properties. The operation was lead by Yelankha police.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
30-10-25 11:28 am
Udupi Correspondent
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm