ಬ್ರೇಕಿಂಗ್ ನ್ಯೂಸ್
17-03-22 06:54 pm Mangalore Correspondent ಕ್ರೈಂ
ಕೊಣಾಜೆ, ಮಾ.17: ಅಂಗನವಾಡಿಯ ಗ್ಯಾಸ್ ಸ್ಟೌವ್ ರಿಪೇರಿಗೆಂದು ಬಂದಾತ ಅಂಗನವಾಡಿ ಸಹಾಯಕಿ ಮಹಿಳೆಯ ಕೈ ಎಳೆದು ಮಾನಭಂಗಕ್ಕೆ ಯತ್ನಿಸಿದ್ದು ಆರೋಪಿಯನ್ನ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಹರೇಕಳ ಗ್ರಾಮದ ಅಂಗನವಾಡಿಯ ಸಹಾಯಕಿ ಅವಿವಾಹಿತ ಮಹಿಳೆಗೆ ಅದೇ ಗ್ರಾಮದ ಆಲಡ್ಕ ನಿವಾಸಿ ನಿಝಾಮುದ್ದೀನ್(31) ಎಂಬಾತ ಕೈ ಎಳೆದು ಮಾನಭಂಗಕ್ಕೆ ಯತ್ನಿಸಿದ್ದಾನೆ. ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದ್ದರಿಂದ ಆರೋಪಿಯನ್ನ ಕೊಣಾಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಅಂಗನವಾಡಿಯಲ್ಲಿದ್ದ ಗ್ಯಾಸ್ ಸ್ಟೌವ್ ಕೆಟ್ಟು ದುರಸ್ತಿಗೆ ಬಂದ ಕಾರಣ ಅಂಗನವಾಡಿ ಟೀಚರ್ ಸಲಹೆಯಂತೆ ಸಹಾಯಕಿ ಗ್ಯಾಸ್ ಸ್ಟೌವ್ ರಿಪೇರಿ ಮಾಡುವ ಪರಿಚಯದ ಯುವಕ ನಿಝಾಮ್ ಅಂಗಡಿಗೆ ಕರೆ ಮಾಡಿ ತಿಳಿಸಿದ್ದರು. ಅದರಂತೆ ಬುಧವಾರ ಮಧ್ಯಾಹ್ನ ಆತ ಅಂಗನವಾಡಿಗೆ ಬಂದಿದ್ದಾನೆ. ಶಿಕ್ಷಕಿ ಆತನಿಗೆ ಅಡುಗೆ ಕೊಣೆಯಲ್ಲಿದ್ದ ಗ್ಯಾಸ್ ಸ್ಟೌವ್ ತೋರಿಸಿ ದುರಸ್ತಿ ಮಾಡಿ ತಾ ಎಂದು ಹೇಳಿ ಮಕ್ಕಳಿರುವ ಕೊಠಡಿಗೆ ತೆರಳಿದ್ದಾರೆ. ಆರೋಪಿ ನಿಝಾಮ್ ಚೀಲದಲ್ಲಿ ಗ್ಯಾಸ್ ಸ್ಟೌವ್ ತುಂಬಿಸುವಾಗ ಪಕ್ಕದಲ್ಲಿದ್ದ ಅಡುಗೆ ಸಹಾಯಕಿಯ ಕೈ ಹಿಡಿದು ಎಳೆದಿದ್ದು ಆಕೆ ಆತನ ಕೈಯಿಂದ ತಪ್ಪಿಸಿಕೊಂಡಿದ್ದಾರೆ. ಆಬಳಿಕ ಬೇಸರ ಮಾಡಬೇಡ ಎಂದು ಹೇಳಿದ್ದಾಗಿ ಯುವತಿ ದೂರಿದ್ದಾರೆ. ಆತ ತೆರಳಿದ ತಕ್ಷಣ ನಡೆದ ವಿಷಯವನ್ನು ಸಂತ್ರಸ್ತೆ ಶಿಕ್ಷಕಿಯ ಗಮನಕ್ಕೆ ತಂದಿದ್ದು ಶಿಕ್ಷಕಿ ಅಣ್ಣಂದಿರಿಗೆ ತಿಳಿಸುವಂತೆ ಸೂಚಿಸಿದ್ದರು. ಇಂದು ಸಂತ್ರಸ್ತೆ ಅಂಗನವಾಡಿ ಸಹಾಯಕಿ ಕೊಣಾಜೆ ಠಾಣೆಗೆ ತೆರಳಿ ದೂರು ನೀಡಿದ್ದು ಆರೋಪಿಯನ್ನ ಕೊಣಾಜೆ ಠಾಣೆ ಪೊಲೀಸರು ಕ್ಷಿಪ್ರವಾಗಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
A government teacher from Konaje in Mangalore was sexually harassed by a Gas repair guy who came to the house to repair the gas has been arrested by Konaje Police. The arrested has been identified as Nizamuddin (31).
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm