ಬ್ರೇಕಿಂಗ್ ನ್ಯೂಸ್
17-03-22 06:54 pm Mangalore Correspondent ಕ್ರೈಂ
ಕೊಣಾಜೆ, ಮಾ.17: ಅಂಗನವಾಡಿಯ ಗ್ಯಾಸ್ ಸ್ಟೌವ್ ರಿಪೇರಿಗೆಂದು ಬಂದಾತ ಅಂಗನವಾಡಿ ಸಹಾಯಕಿ ಮಹಿಳೆಯ ಕೈ ಎಳೆದು ಮಾನಭಂಗಕ್ಕೆ ಯತ್ನಿಸಿದ್ದು ಆರೋಪಿಯನ್ನ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಹರೇಕಳ ಗ್ರಾಮದ ಅಂಗನವಾಡಿಯ ಸಹಾಯಕಿ ಅವಿವಾಹಿತ ಮಹಿಳೆಗೆ ಅದೇ ಗ್ರಾಮದ ಆಲಡ್ಕ ನಿವಾಸಿ ನಿಝಾಮುದ್ದೀನ್(31) ಎಂಬಾತ ಕೈ ಎಳೆದು ಮಾನಭಂಗಕ್ಕೆ ಯತ್ನಿಸಿದ್ದಾನೆ. ಈ ಬಗ್ಗೆ ಪೊಲೀಸ್ ದೂರು ದಾಖಲಾಗಿದ್ದರಿಂದ ಆರೋಪಿಯನ್ನ ಕೊಣಾಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಅಂಗನವಾಡಿಯಲ್ಲಿದ್ದ ಗ್ಯಾಸ್ ಸ್ಟೌವ್ ಕೆಟ್ಟು ದುರಸ್ತಿಗೆ ಬಂದ ಕಾರಣ ಅಂಗನವಾಡಿ ಟೀಚರ್ ಸಲಹೆಯಂತೆ ಸಹಾಯಕಿ ಗ್ಯಾಸ್ ಸ್ಟೌವ್ ರಿಪೇರಿ ಮಾಡುವ ಪರಿಚಯದ ಯುವಕ ನಿಝಾಮ್ ಅಂಗಡಿಗೆ ಕರೆ ಮಾಡಿ ತಿಳಿಸಿದ್ದರು. ಅದರಂತೆ ಬುಧವಾರ ಮಧ್ಯಾಹ್ನ ಆತ ಅಂಗನವಾಡಿಗೆ ಬಂದಿದ್ದಾನೆ. ಶಿಕ್ಷಕಿ ಆತನಿಗೆ ಅಡುಗೆ ಕೊಣೆಯಲ್ಲಿದ್ದ ಗ್ಯಾಸ್ ಸ್ಟೌವ್ ತೋರಿಸಿ ದುರಸ್ತಿ ಮಾಡಿ ತಾ ಎಂದು ಹೇಳಿ ಮಕ್ಕಳಿರುವ ಕೊಠಡಿಗೆ ತೆರಳಿದ್ದಾರೆ. ಆರೋಪಿ ನಿಝಾಮ್ ಚೀಲದಲ್ಲಿ ಗ್ಯಾಸ್ ಸ್ಟೌವ್ ತುಂಬಿಸುವಾಗ ಪಕ್ಕದಲ್ಲಿದ್ದ ಅಡುಗೆ ಸಹಾಯಕಿಯ ಕೈ ಹಿಡಿದು ಎಳೆದಿದ್ದು ಆಕೆ ಆತನ ಕೈಯಿಂದ ತಪ್ಪಿಸಿಕೊಂಡಿದ್ದಾರೆ. ಆಬಳಿಕ ಬೇಸರ ಮಾಡಬೇಡ ಎಂದು ಹೇಳಿದ್ದಾಗಿ ಯುವತಿ ದೂರಿದ್ದಾರೆ. ಆತ ತೆರಳಿದ ತಕ್ಷಣ ನಡೆದ ವಿಷಯವನ್ನು ಸಂತ್ರಸ್ತೆ ಶಿಕ್ಷಕಿಯ ಗಮನಕ್ಕೆ ತಂದಿದ್ದು ಶಿಕ್ಷಕಿ ಅಣ್ಣಂದಿರಿಗೆ ತಿಳಿಸುವಂತೆ ಸೂಚಿಸಿದ್ದರು. ಇಂದು ಸಂತ್ರಸ್ತೆ ಅಂಗನವಾಡಿ ಸಹಾಯಕಿ ಕೊಣಾಜೆ ಠಾಣೆಗೆ ತೆರಳಿ ದೂರು ನೀಡಿದ್ದು ಆರೋಪಿಯನ್ನ ಕೊಣಾಜೆ ಠಾಣೆ ಪೊಲೀಸರು ಕ್ಷಿಪ್ರವಾಗಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
A government teacher from Konaje in Mangalore was sexually harassed by a Gas repair guy who came to the house to repair the gas has been arrested by Konaje Police. The arrested has been identified as Nizamuddin (31).
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm