ಬ್ರೇಕಿಂಗ್ ನ್ಯೂಸ್
17-03-22 07:32 pm HK Desk news ಕ್ರೈಂ
ತಿರುವನಂತಪುರಂ, ಮಾ.17 : 17 ವರ್ಷದ ಅಪ್ರಾಪ್ತ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪತ್ತನಂತಿಟ್ಟ ಜಿಲ್ಲೆಯ ಮಲಂಕರ ಆರ್ಥೋಡೋಕ್ಸ್ ಸಿರಿಯನ್ ಚರ್ಚ್ ಒಂದರ ಪಾದ್ರಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೂಡಲ್ ಎಂಬಲ್ಲಿನ ಚರ್ಚ್ ಪಾದ್ರಿ ಪಾಂಡ್ಸನ್ ಜಾನ್ (35) ಬಂಧಿತ ವ್ಯಕ್ತಿ. ಕಲಿಯುವುದರಲ್ಲಿ ನಿರಾಸಕ್ತಿ ತೋರುತ್ತಿದ್ದ ಯುವತಿಯನ್ನು ಆಕೆಯ ಹೆತ್ತವರು ಚರ್ಚ್ ಪಾದ್ರಿಯ ಮನೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ, ಯುವತಿಗೆ ಕೌನ್ಸಿಲಿಂಗ್ ಕೊಡುವ ನೆಪದಲ್ಲಿ ಚರ್ಚ್ ಪಾದ್ರಿ ಯುವತಿಯನ್ನು ಕೋಣೆಗೆ ಕರೆದೊಯ್ದು ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ.
ಮಾರ್ಚ್ 12 ಮತ್ತು 13ರಂದು ಎರಡು ಬಾರಿ ಅಸಭ್ಯವಾಗಿ ವರ್ತಿಸಿದ್ದಾನೆ. ಮೊದಲ ಬಾರಿಗೆ ಚರ್ಚ್ ನಲ್ಲಿ ಕೊಠಡಿ ಒಂದಕ್ಕೆ ಕರೆದೊಯ್ದು ಅಸಭ್ಯವಾಗಿ ವರ್ತಿಸಿದ್ದ. ಆನಂತರ, ಮರುದಿನವೂ ಕೌನ್ಸಿಲಿಂಗ್ ನೀಡಲು ಚರ್ಚ್ ಗೆ ಬರಲು ಪಾದ್ರಿ ತಿಳಿಸಿದ್ದ. ಆದರೆ ಚರ್ಚ್ ಗೆ ಬರಲು ನಿರಾಕರಿಸಿದ್ದರಿಂದ ಪಾಂಡ್ಸನ್ ಜಾನ್ ನೇರವಾಗಿ ಯುವತಿ ಮನೆಗೆ ಬಂದಿದ್ದು, ಅಲ್ಲಿ ಆಕೆಯನ್ನು ಕೋಣೆಯಲ್ಲಿ ಕೂಡಿ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ.
ಈ ಬಗ್ಗೆ ಸಂತ್ರಸ್ತ ಹುಡುಗಿ ಶಾಲೆಯಲ್ಲಿ ತನ್ನ ಗೆಳತಿಯ ಬಳಿ ಹೇಳಿಕೊಂಡಿದ್ದಾಳೆ. ಆಕೆಯ ಗೆಳತಿ ವಿಚಾರವನ್ನು ಶಾಲಾಡಳಿತದ ಗಮನಕ್ಕೆ ತಂದಿದ್ದು, ಅವರು ಚೈಲ್ಡ್ ಲೈನ್ ಸೆಂಟರಿಗೆ ಮಾಹಿತಿ ನೀಡಿದ್ದಾರೆ. ಚೈಲ್ಡ್ ಲೈನ್ ಸಿಬಂದಿ ನೀಡಿದ ದೂರಿನಂತೆ ಮಹಿಳಾ ಠಾಣೆ ಪೊಲೀಸರು ಆರೋಪಿ ಪಾದ್ರಿಯನ್ನು ಬಂಧಿಸಿದ್ದಾರೆ. ಮುನ್ನಾ ದಿನ ರಾತ್ರಿ ತನ್ನ ಜೊತೆ ಅಸಭ್ಯವಾಗಿ ವರ್ತಿಸಿದ್ದರಿಂದ ಯುವತಿ ಮರುದಿನ ಚರ್ಚ್ ಗೆ ತೆರಳಿರಲಿಲ್ಲ. ಆದರೆ ಮರುದಿನ ಮನೆಗೇ ಬಂದು ಕಿರುಕುಳ ಕೊಟ್ಟಿದ್ದಾನೆ ಎಂದು ಯುವತಿ ಹೇಳಿಕೆ ನೀಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
A priest with Malankara Orthodox Syrian Church in Koodal in Kerala's Pathanamthitta district was arrested in a POCSO case on Thursday after he allegedly sexually misbehaved with a 17-year-old girl, who was brought to him for counseling by her mother. The suspect Pondson John, 35, a priest of Koodal Orthodox Church was arrested based on the information shared by the Childline team.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm