ಬ್ರೇಕಿಂಗ್ ನ್ಯೂಸ್
17-03-22 07:32 pm HK Desk news ಕ್ರೈಂ
ತಿರುವನಂತಪುರಂ, ಮಾ.17 : 17 ವರ್ಷದ ಅಪ್ರಾಪ್ತ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪತ್ತನಂತಿಟ್ಟ ಜಿಲ್ಲೆಯ ಮಲಂಕರ ಆರ್ಥೋಡೋಕ್ಸ್ ಸಿರಿಯನ್ ಚರ್ಚ್ ಒಂದರ ಪಾದ್ರಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೂಡಲ್ ಎಂಬಲ್ಲಿನ ಚರ್ಚ್ ಪಾದ್ರಿ ಪಾಂಡ್ಸನ್ ಜಾನ್ (35) ಬಂಧಿತ ವ್ಯಕ್ತಿ. ಕಲಿಯುವುದರಲ್ಲಿ ನಿರಾಸಕ್ತಿ ತೋರುತ್ತಿದ್ದ ಯುವತಿಯನ್ನು ಆಕೆಯ ಹೆತ್ತವರು ಚರ್ಚ್ ಪಾದ್ರಿಯ ಮನೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ, ಯುವತಿಗೆ ಕೌನ್ಸಿಲಿಂಗ್ ಕೊಡುವ ನೆಪದಲ್ಲಿ ಚರ್ಚ್ ಪಾದ್ರಿ ಯುವತಿಯನ್ನು ಕೋಣೆಗೆ ಕರೆದೊಯ್ದು ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ.
ಮಾರ್ಚ್ 12 ಮತ್ತು 13ರಂದು ಎರಡು ಬಾರಿ ಅಸಭ್ಯವಾಗಿ ವರ್ತಿಸಿದ್ದಾನೆ. ಮೊದಲ ಬಾರಿಗೆ ಚರ್ಚ್ ನಲ್ಲಿ ಕೊಠಡಿ ಒಂದಕ್ಕೆ ಕರೆದೊಯ್ದು ಅಸಭ್ಯವಾಗಿ ವರ್ತಿಸಿದ್ದ. ಆನಂತರ, ಮರುದಿನವೂ ಕೌನ್ಸಿಲಿಂಗ್ ನೀಡಲು ಚರ್ಚ್ ಗೆ ಬರಲು ಪಾದ್ರಿ ತಿಳಿಸಿದ್ದ. ಆದರೆ ಚರ್ಚ್ ಗೆ ಬರಲು ನಿರಾಕರಿಸಿದ್ದರಿಂದ ಪಾಂಡ್ಸನ್ ಜಾನ್ ನೇರವಾಗಿ ಯುವತಿ ಮನೆಗೆ ಬಂದಿದ್ದು, ಅಲ್ಲಿ ಆಕೆಯನ್ನು ಕೋಣೆಯಲ್ಲಿ ಕೂಡಿ ಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ.
ಈ ಬಗ್ಗೆ ಸಂತ್ರಸ್ತ ಹುಡುಗಿ ಶಾಲೆಯಲ್ಲಿ ತನ್ನ ಗೆಳತಿಯ ಬಳಿ ಹೇಳಿಕೊಂಡಿದ್ದಾಳೆ. ಆಕೆಯ ಗೆಳತಿ ವಿಚಾರವನ್ನು ಶಾಲಾಡಳಿತದ ಗಮನಕ್ಕೆ ತಂದಿದ್ದು, ಅವರು ಚೈಲ್ಡ್ ಲೈನ್ ಸೆಂಟರಿಗೆ ಮಾಹಿತಿ ನೀಡಿದ್ದಾರೆ. ಚೈಲ್ಡ್ ಲೈನ್ ಸಿಬಂದಿ ನೀಡಿದ ದೂರಿನಂತೆ ಮಹಿಳಾ ಠಾಣೆ ಪೊಲೀಸರು ಆರೋಪಿ ಪಾದ್ರಿಯನ್ನು ಬಂಧಿಸಿದ್ದಾರೆ. ಮುನ್ನಾ ದಿನ ರಾತ್ರಿ ತನ್ನ ಜೊತೆ ಅಸಭ್ಯವಾಗಿ ವರ್ತಿಸಿದ್ದರಿಂದ ಯುವತಿ ಮರುದಿನ ಚರ್ಚ್ ಗೆ ತೆರಳಿರಲಿಲ್ಲ. ಆದರೆ ಮರುದಿನ ಮನೆಗೇ ಬಂದು ಕಿರುಕುಳ ಕೊಟ್ಟಿದ್ದಾನೆ ಎಂದು ಯುವತಿ ಹೇಳಿಕೆ ನೀಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
A priest with Malankara Orthodox Syrian Church in Koodal in Kerala's Pathanamthitta district was arrested in a POCSO case on Thursday after he allegedly sexually misbehaved with a 17-year-old girl, who was brought to him for counseling by her mother. The suspect Pondson John, 35, a priest of Koodal Orthodox Church was arrested based on the information shared by the Childline team.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm