ಬ್ರೇಕಿಂಗ್ ನ್ಯೂಸ್
18-03-22 06:17 pm Bengaluru Correspondent ಕ್ರೈಂ
ಬೆಂಗಳೂರು, ಮಾ.18: 23 ವರ್ಷದ ದಲಿತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಇಟ್ಟುಕೊಂಡಿದ್ದಲ್ಲದೆ, ಬಳಿಕ ಯುವತಿಯನ್ನು ಜಾತಿ ವಿಚಾರದಲ್ಲಿ ಮದುವೆಯಾಗಲು ನಿರಾಕರಿಸಿ ಪ್ರಿಯಕರನೇ ಬೆಂಕಿ ಹಚ್ಚಿ ಸುಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮೃತ ಯುವತಿಯನ್ನು ವಿಜಯಪುರ ಜಿಲ್ಲೆಯ ಮೂಲದ ದಾನೇಶ್ವರಿ (23) ಎಂದು ಗುರುತಿಸಲಾಗಿದೆ. ಆರೋಪಿ ಶಿವಕುಮಾರ್ ಚಂದ್ರಶೇಖರ್ ಹರೇಹಾಳ ವಿರುದ್ಧ ಯುವತಿಯ ತಂಗಿ ಬೆಂಗಳೂರಿನಲ್ಲಿ ಪೊಲೀಸ್ ದೂರು ನೀಡಿದ್ದು ಜಾತಿ ನಿಂದನೆ ಮತ್ತು ಕೊಲೆ ಪ್ರಕರಣ ದಾಖಲಾಗಿದೆ.
ದಾನೇಶ್ವರಿ ಮತ್ತು ಶಿವಕುಮಾರ್ ವಿಜಯಪುರ ಜಿಲ್ಲೆಯ ನಿವಾಸಿಗಳಾಗಿದ್ದು ಅಲ್ಲಿ ಒಂದೇ ಕಾಲೇಜಿನಲ್ಲಿ ಜೊತೆಯಾಗಿ ಇಂಜಿನಿಯರಿಂಗ್ ಮುಗಿಸಿದ್ದರು. ಅಲ್ಲಿದ್ದಾಗಲೇ ಪ್ರೀತಿ ನೆಪದಲ್ಲಿ ಇಬ್ಬರೂ ಸಂಬಂಧ ಇಟ್ಟುಕೊಂಡಿದ್ದರು. ಆಬಳಿಕ ಇಬ್ಬರು ಕೂಡ ಬೆಂಗಳೂರಿನಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದು ಅಲ್ಲಿಯೂ ಸಂಬಂಧ ಮುಂದುವರಿಸಿದ್ದರು. ಆರೋಪಿ ಶಿವಕುಮಾರ್ ಮದುವೆಯಾಗುವುದಾಗಿ ಹೇಳಿ ದೈಹಿಕ ಸಂಬಂಧ ಬೆಳೆಸಿಕೊಂಡಿದ್ದ.
ಇತ್ತೀಚೆಗೆ ಮದುವೆಯ ಬಗ್ಗೆ ದಾನೇಶ್ವರಿ, ಹುಡುಗನ ಬಳಿ ಚರ್ಚೆ ನಡೆಸಿದ್ದು ತಂದೆ, ತಾಯಿ ಬಳಿ ಕೇಳಿಕೊಂಡು ಬರುವುದಾಗಿ ಹೇಳಿ ಆರೋಪಿ ಊರಿಗೆ ತೆರಳಿದ್ದ. ಆನಂತರ, ಮರಳಿ ಬಂದಿದ್ದ ಶಿವಕುಮಾರ್, ಹುಡುಗಿ ಕೆಳ ಜಾತಿಯವಳು, ಮದುವೆಯಾಗಲು ಹೆತ್ತವರು ನಿರಾಕರಿಸಿದ್ದಾರೆ ಎಂದು ಹೇಳಿದ್ದ. ಇದರಿಂದ ಚಿಂತೆಗೆ ಒಳಗಾಗಿದ್ದ ದಾನೇಶ್ವರಿ, ಶಿವಕುಮಾರ್ ಕೆಲಸ ಮಾಡುತ್ತಿದ್ದ ಕಚೇರಿಗೆ ತೆರಳಿ ತನ್ನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಳು.
ಆದರೆ ಶಿವಕುಮಾರ್, ಹುಡುಗಿಯನ್ನು ನಿಂದಿಸಿದ್ದಲ್ಲದೆ ಜಾತಿ ಹೆಸರೇಳಿ ಅವಾಚ್ಯ ಪದಗಳಿಂದ ಬೈದು ಕಳಿಸಿದ್ದ. ಆನಂತರ ಆರೋಪಿ, ಮಾತುಕತೆಗೆಂದು ನಿರ್ಜನ ಪ್ರದೇಶಕ್ಕೆ ಬರಹೇಳಿದ್ದು ಅಲ್ಲಿರುವಾಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ದೂರಿನಲ್ಲಿ ದೂರಲಾಗಿದೆ. ಅರೆಬರೆ ಸುಟ್ಟು ಹೋಗಿದ್ದ ಯುವತಿಯನ್ನು ಬಳಿಕ ಆತನೇ ಆಸ್ಪತ್ರೆಗೆ ಒಯ್ದು ದಾಖಲಿಸಿದ್ದು ಬಳಿಕ ಎಸ್ಕೇಪ್ ಆಗಿದ್ದ. ಮಾರ್ಚ್ 15 ರಂದು ಯುವತಿ ದಾನೇಶ್ವರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಪೊಲೀಸರು ಆರೋಪಿ ಯುವಕನ ವಿರುದ್ಧ ಜಾತಿ ನಿಂದನೆ ಕೇಸು ಮತ್ತು ಕೊಲೆ ಪ್ರಕರಣ ದಾಖಲಿಸಿದ್ದಾರೆ.
In a shocking development, a man has allegedly torched his partner belonging to the Dalit community, to death in Bengaluru, police said on Friday.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am