ಬ್ರೇಕಿಂಗ್ ನ್ಯೂಸ್
18-03-22 06:17 pm Bengaluru Correspondent ಕ್ರೈಂ
ಬೆಂಗಳೂರು, ಮಾ.18: 23 ವರ್ಷದ ದಲಿತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಇಟ್ಟುಕೊಂಡಿದ್ದಲ್ಲದೆ, ಬಳಿಕ ಯುವತಿಯನ್ನು ಜಾತಿ ವಿಚಾರದಲ್ಲಿ ಮದುವೆಯಾಗಲು ನಿರಾಕರಿಸಿ ಪ್ರಿಯಕರನೇ ಬೆಂಕಿ ಹಚ್ಚಿ ಸುಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮೃತ ಯುವತಿಯನ್ನು ವಿಜಯಪುರ ಜಿಲ್ಲೆಯ ಮೂಲದ ದಾನೇಶ್ವರಿ (23) ಎಂದು ಗುರುತಿಸಲಾಗಿದೆ. ಆರೋಪಿ ಶಿವಕುಮಾರ್ ಚಂದ್ರಶೇಖರ್ ಹರೇಹಾಳ ವಿರುದ್ಧ ಯುವತಿಯ ತಂಗಿ ಬೆಂಗಳೂರಿನಲ್ಲಿ ಪೊಲೀಸ್ ದೂರು ನೀಡಿದ್ದು ಜಾತಿ ನಿಂದನೆ ಮತ್ತು ಕೊಲೆ ಪ್ರಕರಣ ದಾಖಲಾಗಿದೆ.
ದಾನೇಶ್ವರಿ ಮತ್ತು ಶಿವಕುಮಾರ್ ವಿಜಯಪುರ ಜಿಲ್ಲೆಯ ನಿವಾಸಿಗಳಾಗಿದ್ದು ಅಲ್ಲಿ ಒಂದೇ ಕಾಲೇಜಿನಲ್ಲಿ ಜೊತೆಯಾಗಿ ಇಂಜಿನಿಯರಿಂಗ್ ಮುಗಿಸಿದ್ದರು. ಅಲ್ಲಿದ್ದಾಗಲೇ ಪ್ರೀತಿ ನೆಪದಲ್ಲಿ ಇಬ್ಬರೂ ಸಂಬಂಧ ಇಟ್ಟುಕೊಂಡಿದ್ದರು. ಆಬಳಿಕ ಇಬ್ಬರು ಕೂಡ ಬೆಂಗಳೂರಿನಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದು ಅಲ್ಲಿಯೂ ಸಂಬಂಧ ಮುಂದುವರಿಸಿದ್ದರು. ಆರೋಪಿ ಶಿವಕುಮಾರ್ ಮದುವೆಯಾಗುವುದಾಗಿ ಹೇಳಿ ದೈಹಿಕ ಸಂಬಂಧ ಬೆಳೆಸಿಕೊಂಡಿದ್ದ.
ಇತ್ತೀಚೆಗೆ ಮದುವೆಯ ಬಗ್ಗೆ ದಾನೇಶ್ವರಿ, ಹುಡುಗನ ಬಳಿ ಚರ್ಚೆ ನಡೆಸಿದ್ದು ತಂದೆ, ತಾಯಿ ಬಳಿ ಕೇಳಿಕೊಂಡು ಬರುವುದಾಗಿ ಹೇಳಿ ಆರೋಪಿ ಊರಿಗೆ ತೆರಳಿದ್ದ. ಆನಂತರ, ಮರಳಿ ಬಂದಿದ್ದ ಶಿವಕುಮಾರ್, ಹುಡುಗಿ ಕೆಳ ಜಾತಿಯವಳು, ಮದುವೆಯಾಗಲು ಹೆತ್ತವರು ನಿರಾಕರಿಸಿದ್ದಾರೆ ಎಂದು ಹೇಳಿದ್ದ. ಇದರಿಂದ ಚಿಂತೆಗೆ ಒಳಗಾಗಿದ್ದ ದಾನೇಶ್ವರಿ, ಶಿವಕುಮಾರ್ ಕೆಲಸ ಮಾಡುತ್ತಿದ್ದ ಕಚೇರಿಗೆ ತೆರಳಿ ತನ್ನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಳು.
ಆದರೆ ಶಿವಕುಮಾರ್, ಹುಡುಗಿಯನ್ನು ನಿಂದಿಸಿದ್ದಲ್ಲದೆ ಜಾತಿ ಹೆಸರೇಳಿ ಅವಾಚ್ಯ ಪದಗಳಿಂದ ಬೈದು ಕಳಿಸಿದ್ದ. ಆನಂತರ ಆರೋಪಿ, ಮಾತುಕತೆಗೆಂದು ನಿರ್ಜನ ಪ್ರದೇಶಕ್ಕೆ ಬರಹೇಳಿದ್ದು ಅಲ್ಲಿರುವಾಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ದೂರಿನಲ್ಲಿ ದೂರಲಾಗಿದೆ. ಅರೆಬರೆ ಸುಟ್ಟು ಹೋಗಿದ್ದ ಯುವತಿಯನ್ನು ಬಳಿಕ ಆತನೇ ಆಸ್ಪತ್ರೆಗೆ ಒಯ್ದು ದಾಖಲಿಸಿದ್ದು ಬಳಿಕ ಎಸ್ಕೇಪ್ ಆಗಿದ್ದ. ಮಾರ್ಚ್ 15 ರಂದು ಯುವತಿ ದಾನೇಶ್ವರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಪೊಲೀಸರು ಆರೋಪಿ ಯುವಕನ ವಿರುದ್ಧ ಜಾತಿ ನಿಂದನೆ ಕೇಸು ಮತ್ತು ಕೊಲೆ ಪ್ರಕರಣ ದಾಖಲಿಸಿದ್ದಾರೆ.
In a shocking development, a man has allegedly torched his partner belonging to the Dalit community, to death in Bengaluru, police said on Friday.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm