ಬ್ರೇಕಿಂಗ್ ನ್ಯೂಸ್
18-03-22 06:17 pm Bengaluru Correspondent ಕ್ರೈಂ
ಬೆಂಗಳೂರು, ಮಾ.18: 23 ವರ್ಷದ ದಲಿತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಇಟ್ಟುಕೊಂಡಿದ್ದಲ್ಲದೆ, ಬಳಿಕ ಯುವತಿಯನ್ನು ಜಾತಿ ವಿಚಾರದಲ್ಲಿ ಮದುವೆಯಾಗಲು ನಿರಾಕರಿಸಿ ಪ್ರಿಯಕರನೇ ಬೆಂಕಿ ಹಚ್ಚಿ ಸುಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮೃತ ಯುವತಿಯನ್ನು ವಿಜಯಪುರ ಜಿಲ್ಲೆಯ ಮೂಲದ ದಾನೇಶ್ವರಿ (23) ಎಂದು ಗುರುತಿಸಲಾಗಿದೆ. ಆರೋಪಿ ಶಿವಕುಮಾರ್ ಚಂದ್ರಶೇಖರ್ ಹರೇಹಾಳ ವಿರುದ್ಧ ಯುವತಿಯ ತಂಗಿ ಬೆಂಗಳೂರಿನಲ್ಲಿ ಪೊಲೀಸ್ ದೂರು ನೀಡಿದ್ದು ಜಾತಿ ನಿಂದನೆ ಮತ್ತು ಕೊಲೆ ಪ್ರಕರಣ ದಾಖಲಾಗಿದೆ.
ದಾನೇಶ್ವರಿ ಮತ್ತು ಶಿವಕುಮಾರ್ ವಿಜಯಪುರ ಜಿಲ್ಲೆಯ ನಿವಾಸಿಗಳಾಗಿದ್ದು ಅಲ್ಲಿ ಒಂದೇ ಕಾಲೇಜಿನಲ್ಲಿ ಜೊತೆಯಾಗಿ ಇಂಜಿನಿಯರಿಂಗ್ ಮುಗಿಸಿದ್ದರು. ಅಲ್ಲಿದ್ದಾಗಲೇ ಪ್ರೀತಿ ನೆಪದಲ್ಲಿ ಇಬ್ಬರೂ ಸಂಬಂಧ ಇಟ್ಟುಕೊಂಡಿದ್ದರು. ಆಬಳಿಕ ಇಬ್ಬರು ಕೂಡ ಬೆಂಗಳೂರಿನಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದು ಅಲ್ಲಿಯೂ ಸಂಬಂಧ ಮುಂದುವರಿಸಿದ್ದರು. ಆರೋಪಿ ಶಿವಕುಮಾರ್ ಮದುವೆಯಾಗುವುದಾಗಿ ಹೇಳಿ ದೈಹಿಕ ಸಂಬಂಧ ಬೆಳೆಸಿಕೊಂಡಿದ್ದ.
ಇತ್ತೀಚೆಗೆ ಮದುವೆಯ ಬಗ್ಗೆ ದಾನೇಶ್ವರಿ, ಹುಡುಗನ ಬಳಿ ಚರ್ಚೆ ನಡೆಸಿದ್ದು ತಂದೆ, ತಾಯಿ ಬಳಿ ಕೇಳಿಕೊಂಡು ಬರುವುದಾಗಿ ಹೇಳಿ ಆರೋಪಿ ಊರಿಗೆ ತೆರಳಿದ್ದ. ಆನಂತರ, ಮರಳಿ ಬಂದಿದ್ದ ಶಿವಕುಮಾರ್, ಹುಡುಗಿ ಕೆಳ ಜಾತಿಯವಳು, ಮದುವೆಯಾಗಲು ಹೆತ್ತವರು ನಿರಾಕರಿಸಿದ್ದಾರೆ ಎಂದು ಹೇಳಿದ್ದ. ಇದರಿಂದ ಚಿಂತೆಗೆ ಒಳಗಾಗಿದ್ದ ದಾನೇಶ್ವರಿ, ಶಿವಕುಮಾರ್ ಕೆಲಸ ಮಾಡುತ್ತಿದ್ದ ಕಚೇರಿಗೆ ತೆರಳಿ ತನ್ನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಳು.
ಆದರೆ ಶಿವಕುಮಾರ್, ಹುಡುಗಿಯನ್ನು ನಿಂದಿಸಿದ್ದಲ್ಲದೆ ಜಾತಿ ಹೆಸರೇಳಿ ಅವಾಚ್ಯ ಪದಗಳಿಂದ ಬೈದು ಕಳಿಸಿದ್ದ. ಆನಂತರ ಆರೋಪಿ, ಮಾತುಕತೆಗೆಂದು ನಿರ್ಜನ ಪ್ರದೇಶಕ್ಕೆ ಬರಹೇಳಿದ್ದು ಅಲ್ಲಿರುವಾಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ದೂರಿನಲ್ಲಿ ದೂರಲಾಗಿದೆ. ಅರೆಬರೆ ಸುಟ್ಟು ಹೋಗಿದ್ದ ಯುವತಿಯನ್ನು ಬಳಿಕ ಆತನೇ ಆಸ್ಪತ್ರೆಗೆ ಒಯ್ದು ದಾಖಲಿಸಿದ್ದು ಬಳಿಕ ಎಸ್ಕೇಪ್ ಆಗಿದ್ದ. ಮಾರ್ಚ್ 15 ರಂದು ಯುವತಿ ದಾನೇಶ್ವರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಪೊಲೀಸರು ಆರೋಪಿ ಯುವಕನ ವಿರುದ್ಧ ಜಾತಿ ನಿಂದನೆ ಕೇಸು ಮತ್ತು ಕೊಲೆ ಪ್ರಕರಣ ದಾಖಲಿಸಿದ್ದಾರೆ.
In a shocking development, a man has allegedly torched his partner belonging to the Dalit community, to death in Bengaluru, police said on Friday.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm