ಬ್ರೇಕಿಂಗ್ ನ್ಯೂಸ್
18-03-22 06:17 pm Bengaluru Correspondent ಕ್ರೈಂ
ಬೆಂಗಳೂರು, ಮಾ.18: 23 ವರ್ಷದ ದಲಿತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಇಟ್ಟುಕೊಂಡಿದ್ದಲ್ಲದೆ, ಬಳಿಕ ಯುವತಿಯನ್ನು ಜಾತಿ ವಿಚಾರದಲ್ಲಿ ಮದುವೆಯಾಗಲು ನಿರಾಕರಿಸಿ ಪ್ರಿಯಕರನೇ ಬೆಂಕಿ ಹಚ್ಚಿ ಸುಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮೃತ ಯುವತಿಯನ್ನು ವಿಜಯಪುರ ಜಿಲ್ಲೆಯ ಮೂಲದ ದಾನೇಶ್ವರಿ (23) ಎಂದು ಗುರುತಿಸಲಾಗಿದೆ. ಆರೋಪಿ ಶಿವಕುಮಾರ್ ಚಂದ್ರಶೇಖರ್ ಹರೇಹಾಳ ವಿರುದ್ಧ ಯುವತಿಯ ತಂಗಿ ಬೆಂಗಳೂರಿನಲ್ಲಿ ಪೊಲೀಸ್ ದೂರು ನೀಡಿದ್ದು ಜಾತಿ ನಿಂದನೆ ಮತ್ತು ಕೊಲೆ ಪ್ರಕರಣ ದಾಖಲಾಗಿದೆ.
ದಾನೇಶ್ವರಿ ಮತ್ತು ಶಿವಕುಮಾರ್ ವಿಜಯಪುರ ಜಿಲ್ಲೆಯ ನಿವಾಸಿಗಳಾಗಿದ್ದು ಅಲ್ಲಿ ಒಂದೇ ಕಾಲೇಜಿನಲ್ಲಿ ಜೊತೆಯಾಗಿ ಇಂಜಿನಿಯರಿಂಗ್ ಮುಗಿಸಿದ್ದರು. ಅಲ್ಲಿದ್ದಾಗಲೇ ಪ್ರೀತಿ ನೆಪದಲ್ಲಿ ಇಬ್ಬರೂ ಸಂಬಂಧ ಇಟ್ಟುಕೊಂಡಿದ್ದರು. ಆಬಳಿಕ ಇಬ್ಬರು ಕೂಡ ಬೆಂಗಳೂರಿನಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದು ಅಲ್ಲಿಯೂ ಸಂಬಂಧ ಮುಂದುವರಿಸಿದ್ದರು. ಆರೋಪಿ ಶಿವಕುಮಾರ್ ಮದುವೆಯಾಗುವುದಾಗಿ ಹೇಳಿ ದೈಹಿಕ ಸಂಬಂಧ ಬೆಳೆಸಿಕೊಂಡಿದ್ದ.
ಇತ್ತೀಚೆಗೆ ಮದುವೆಯ ಬಗ್ಗೆ ದಾನೇಶ್ವರಿ, ಹುಡುಗನ ಬಳಿ ಚರ್ಚೆ ನಡೆಸಿದ್ದು ತಂದೆ, ತಾಯಿ ಬಳಿ ಕೇಳಿಕೊಂಡು ಬರುವುದಾಗಿ ಹೇಳಿ ಆರೋಪಿ ಊರಿಗೆ ತೆರಳಿದ್ದ. ಆನಂತರ, ಮರಳಿ ಬಂದಿದ್ದ ಶಿವಕುಮಾರ್, ಹುಡುಗಿ ಕೆಳ ಜಾತಿಯವಳು, ಮದುವೆಯಾಗಲು ಹೆತ್ತವರು ನಿರಾಕರಿಸಿದ್ದಾರೆ ಎಂದು ಹೇಳಿದ್ದ. ಇದರಿಂದ ಚಿಂತೆಗೆ ಒಳಗಾಗಿದ್ದ ದಾನೇಶ್ವರಿ, ಶಿವಕುಮಾರ್ ಕೆಲಸ ಮಾಡುತ್ತಿದ್ದ ಕಚೇರಿಗೆ ತೆರಳಿ ತನ್ನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಳು.
ಆದರೆ ಶಿವಕುಮಾರ್, ಹುಡುಗಿಯನ್ನು ನಿಂದಿಸಿದ್ದಲ್ಲದೆ ಜಾತಿ ಹೆಸರೇಳಿ ಅವಾಚ್ಯ ಪದಗಳಿಂದ ಬೈದು ಕಳಿಸಿದ್ದ. ಆನಂತರ ಆರೋಪಿ, ಮಾತುಕತೆಗೆಂದು ನಿರ್ಜನ ಪ್ರದೇಶಕ್ಕೆ ಬರಹೇಳಿದ್ದು ಅಲ್ಲಿರುವಾಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ದೂರಿನಲ್ಲಿ ದೂರಲಾಗಿದೆ. ಅರೆಬರೆ ಸುಟ್ಟು ಹೋಗಿದ್ದ ಯುವತಿಯನ್ನು ಬಳಿಕ ಆತನೇ ಆಸ್ಪತ್ರೆಗೆ ಒಯ್ದು ದಾಖಲಿಸಿದ್ದು ಬಳಿಕ ಎಸ್ಕೇಪ್ ಆಗಿದ್ದ. ಮಾರ್ಚ್ 15 ರಂದು ಯುವತಿ ದಾನೇಶ್ವರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಪೊಲೀಸರು ಆರೋಪಿ ಯುವಕನ ವಿರುದ್ಧ ಜಾತಿ ನಿಂದನೆ ಕೇಸು ಮತ್ತು ಕೊಲೆ ಪ್ರಕರಣ ದಾಖಲಿಸಿದ್ದಾರೆ.
In a shocking development, a man has allegedly torched his partner belonging to the Dalit community, to death in Bengaluru, police said on Friday.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am