ಬ್ರೇಕಿಂಗ್ ನ್ಯೂಸ್
18-03-22 10:52 pm HK Desk news ಕ್ರೈಂ
ನವದೆಹಲಿ, ಮಾ.18: ಪ್ರಾಥಮಿಕ ಶಾಲೆಯಲ್ಲಿದ್ದಾಗ ಶಿಕ್ಷಕಿ ಅವಮಾನಿಸಿದ್ದನ್ನೇ ಸೇಡು ಇರಿಸಿಕೊಂಡಿದ್ದ ವ್ಯಕ್ತಿಯೊಬ್ಬ 30 ವರ್ಷಗಳ ನಂತರ ಆಕೆಯನ್ನು ಇರಿದು ಕೊಂದಿರುವ ಘಟನೆ ಬೆಲ್ಜಿಯಂನಲ್ಲಿ ನಡೆದಿದೆ.
1990ರಲ್ಲಿ ಶಿಕ್ಷಕಿಯಾಗಿದ್ದ ಮಾರಿಯಾ ವೆರ್ಲಿಂಡೆನ್ ಏಳು ವರ್ಷದ ಶಾಲಾ ಬಾಲಕ ಗುಂಟರ್ ಉವೆಂಟ್ಸ್ ಎಂಬಾತನ ಬಗ್ಗೆ ಮಾಡಿದ್ದ ಕಾಮೆಂಟ್ಗಳನ್ನು ಸೇಡು ಆಗಿ ಇರಿಸಿಕೊಂಡಿದ್ದ ಆತ ಮೂರು ದಶಕದ ಬಳಿಕ ಅದನ್ನು ತೀರಿಸಿಕೊಂಡಿದ್ದಾನೆ.
2020ರ ನವೆಂಬರ್ ನಲ್ಲಿ ಆಂಟ್ವರ್ಪ್ ನಗರದ ಹೆರೆಂಟಲ್ಸ್ ಎಂಬಲ್ಲಿನ ತನ್ನ ಮನೆಯಲ್ಲಿ 59 ವರ್ಷದ ವೆರ್ಲಿಂಡೆನ್ ಎಂಬ ಶಿಕ್ಷಕಿಯ ಘೋರ ಹತ್ಯೆ ನಡೆದಿತ್ತು. ಘಟನೆ ಬಗ್ಗೆ ಬೆಲ್ಜಿಯಂ ಪೊಲೀಸರು ತನಿಖೆ ನಡೆಸಿದ್ದು ನೂರಾರು ಡಿಎನ್ಎ ಮಾದರಿಗಳನ್ನು ಪಡೆದು ತನಿಖೆ ಕೈಗೊಂಡರೂ ಕೊಲೆಗಾರನನ್ನು ಹುಡುಕಲು ಸಾಧ್ಯವಾಗಿರಲಿಲ್ಲ. ಕೊನೆಗೆ, ಆಕೆಯ ಪತಿ ಸಾಕ್ಷಿಗಳಿಗಾಗಿ ಸಾರ್ವಜನಿಕ ಮನವಿಯನ್ನು ಮಾಡಿದ್ದರು.
ಆಕೆಯ ದೇಹದ ಮೇಲೆ 101 ಬಾರಿ ಇರಿಯಲಾಗಿದ್ದು ಭೀಭತ್ಸ ರೀತಿಯಲ್ಲಿ ಕೊಲೆ ಮಾಡಲಾಗಿತ್ತು. ಶವದ ಪಕ್ಕದಲ್ಲಿದ್ದ ಡೈನಿಂಗ್ ಟೇಬಲ್ ಮೇಲಿದ್ದ ಹಣದ ಪರ್ಸ್ ಮುಟ್ಟದೆ ಇದ್ದದ್ದು ನೋಡಿದರೆ ಹಣಕ್ಕಾಗಿ ನಡೆದ ಕೊಲೆ ಅಲ್ಲ ಎಂಬುದು ಪೊಲೀಸರಿಗೆ ತಿಳಿದುಬಂದಿತ್ತು. 2020ರ ನವೆಂಬರ್ 20ರಂದು ಕೊಲೆ ನಡೆದಿತ್ತು. ಹದಿನಾರು ತಿಂಗಳ ನಂತರ ಇತ್ತೀಚೆಗೆ ಆರೋಪಿ ಗುಂಟರ್ ಉವೆಂಟ್ಸ್ ತನ್ನ ಸ್ನೇಹಿತರ ಬಳಿ ಕೊಲೆ ವಿಚಾರವನ್ನು ಹೇಳಿಕೊಂಡು ಸಾಧನೆ ಎಂಬಂತೆ ಬಿಂಬಿಸಿದ್ದ.
ಅತ್ಯಂತ ನಿಗೂಢವಾಗಿದ್ದ ಕೊಲೆ ಪ್ರಕರಣದ ಬಗ್ಗೆ ತಿಳಿಯುತ್ತಲೇ ಆತನ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ, ತನಿಖೆ ಕೈಗೊಂಡ ಪೊಲೀಸರು ಆರೋಪಿ ಉವೆಂಟ್ಸ್ ನನ್ನು ಬಂಧಿಸಿದ್ದಾರೆ. ಕೊಲೆಯಾದ ಸ್ಥಳದಲ್ಲಿ ಪತ್ತೆಯಾದ ಕುರುಹುಗಳೊಂದಿಗೆ ಹೋಲಿಸಲು ಉವೆಂಟ್ಸ್ ಡಿಎನ್ಎ ಮಾದರಿಯನ್ನು ಪಡೆಯಲಾಗಿದೆ.
30 Years After Humiliation at School, Ex-Pupil Admits to Stabbing Teacher 101 Times.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm