ಬ್ರೇಕಿಂಗ್ ನ್ಯೂಸ್
18-03-22 10:52 pm HK Desk news ಕ್ರೈಂ
ನವದೆಹಲಿ, ಮಾ.18: ಪ್ರಾಥಮಿಕ ಶಾಲೆಯಲ್ಲಿದ್ದಾಗ ಶಿಕ್ಷಕಿ ಅವಮಾನಿಸಿದ್ದನ್ನೇ ಸೇಡು ಇರಿಸಿಕೊಂಡಿದ್ದ ವ್ಯಕ್ತಿಯೊಬ್ಬ 30 ವರ್ಷಗಳ ನಂತರ ಆಕೆಯನ್ನು ಇರಿದು ಕೊಂದಿರುವ ಘಟನೆ ಬೆಲ್ಜಿಯಂನಲ್ಲಿ ನಡೆದಿದೆ.
1990ರಲ್ಲಿ ಶಿಕ್ಷಕಿಯಾಗಿದ್ದ ಮಾರಿಯಾ ವೆರ್ಲಿಂಡೆನ್ ಏಳು ವರ್ಷದ ಶಾಲಾ ಬಾಲಕ ಗುಂಟರ್ ಉವೆಂಟ್ಸ್ ಎಂಬಾತನ ಬಗ್ಗೆ ಮಾಡಿದ್ದ ಕಾಮೆಂಟ್ಗಳನ್ನು ಸೇಡು ಆಗಿ ಇರಿಸಿಕೊಂಡಿದ್ದ ಆತ ಮೂರು ದಶಕದ ಬಳಿಕ ಅದನ್ನು ತೀರಿಸಿಕೊಂಡಿದ್ದಾನೆ.
2020ರ ನವೆಂಬರ್ ನಲ್ಲಿ ಆಂಟ್ವರ್ಪ್ ನಗರದ ಹೆರೆಂಟಲ್ಸ್ ಎಂಬಲ್ಲಿನ ತನ್ನ ಮನೆಯಲ್ಲಿ 59 ವರ್ಷದ ವೆರ್ಲಿಂಡೆನ್ ಎಂಬ ಶಿಕ್ಷಕಿಯ ಘೋರ ಹತ್ಯೆ ನಡೆದಿತ್ತು. ಘಟನೆ ಬಗ್ಗೆ ಬೆಲ್ಜಿಯಂ ಪೊಲೀಸರು ತನಿಖೆ ನಡೆಸಿದ್ದು ನೂರಾರು ಡಿಎನ್ಎ ಮಾದರಿಗಳನ್ನು ಪಡೆದು ತನಿಖೆ ಕೈಗೊಂಡರೂ ಕೊಲೆಗಾರನನ್ನು ಹುಡುಕಲು ಸಾಧ್ಯವಾಗಿರಲಿಲ್ಲ. ಕೊನೆಗೆ, ಆಕೆಯ ಪತಿ ಸಾಕ್ಷಿಗಳಿಗಾಗಿ ಸಾರ್ವಜನಿಕ ಮನವಿಯನ್ನು ಮಾಡಿದ್ದರು.
ಆಕೆಯ ದೇಹದ ಮೇಲೆ 101 ಬಾರಿ ಇರಿಯಲಾಗಿದ್ದು ಭೀಭತ್ಸ ರೀತಿಯಲ್ಲಿ ಕೊಲೆ ಮಾಡಲಾಗಿತ್ತು. ಶವದ ಪಕ್ಕದಲ್ಲಿದ್ದ ಡೈನಿಂಗ್ ಟೇಬಲ್ ಮೇಲಿದ್ದ ಹಣದ ಪರ್ಸ್ ಮುಟ್ಟದೆ ಇದ್ದದ್ದು ನೋಡಿದರೆ ಹಣಕ್ಕಾಗಿ ನಡೆದ ಕೊಲೆ ಅಲ್ಲ ಎಂಬುದು ಪೊಲೀಸರಿಗೆ ತಿಳಿದುಬಂದಿತ್ತು. 2020ರ ನವೆಂಬರ್ 20ರಂದು ಕೊಲೆ ನಡೆದಿತ್ತು. ಹದಿನಾರು ತಿಂಗಳ ನಂತರ ಇತ್ತೀಚೆಗೆ ಆರೋಪಿ ಗುಂಟರ್ ಉವೆಂಟ್ಸ್ ತನ್ನ ಸ್ನೇಹಿತರ ಬಳಿ ಕೊಲೆ ವಿಚಾರವನ್ನು ಹೇಳಿಕೊಂಡು ಸಾಧನೆ ಎಂಬಂತೆ ಬಿಂಬಿಸಿದ್ದ.
ಅತ್ಯಂತ ನಿಗೂಢವಾಗಿದ್ದ ಕೊಲೆ ಪ್ರಕರಣದ ಬಗ್ಗೆ ತಿಳಿಯುತ್ತಲೇ ಆತನ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ, ತನಿಖೆ ಕೈಗೊಂಡ ಪೊಲೀಸರು ಆರೋಪಿ ಉವೆಂಟ್ಸ್ ನನ್ನು ಬಂಧಿಸಿದ್ದಾರೆ. ಕೊಲೆಯಾದ ಸ್ಥಳದಲ್ಲಿ ಪತ್ತೆಯಾದ ಕುರುಹುಗಳೊಂದಿಗೆ ಹೋಲಿಸಲು ಉವೆಂಟ್ಸ್ ಡಿಎನ್ಎ ಮಾದರಿಯನ್ನು ಪಡೆಯಲಾಗಿದೆ.
30 Years After Humiliation at School, Ex-Pupil Admits to Stabbing Teacher 101 Times.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm