ಬ್ರೇಕಿಂಗ್ ನ್ಯೂಸ್
18-03-22 10:52 pm HK Desk news ಕ್ರೈಂ
ನವದೆಹಲಿ, ಮಾ.18: ಪ್ರಾಥಮಿಕ ಶಾಲೆಯಲ್ಲಿದ್ದಾಗ ಶಿಕ್ಷಕಿ ಅವಮಾನಿಸಿದ್ದನ್ನೇ ಸೇಡು ಇರಿಸಿಕೊಂಡಿದ್ದ ವ್ಯಕ್ತಿಯೊಬ್ಬ 30 ವರ್ಷಗಳ ನಂತರ ಆಕೆಯನ್ನು ಇರಿದು ಕೊಂದಿರುವ ಘಟನೆ ಬೆಲ್ಜಿಯಂನಲ್ಲಿ ನಡೆದಿದೆ.
1990ರಲ್ಲಿ ಶಿಕ್ಷಕಿಯಾಗಿದ್ದ ಮಾರಿಯಾ ವೆರ್ಲಿಂಡೆನ್ ಏಳು ವರ್ಷದ ಶಾಲಾ ಬಾಲಕ ಗುಂಟರ್ ಉವೆಂಟ್ಸ್ ಎಂಬಾತನ ಬಗ್ಗೆ ಮಾಡಿದ್ದ ಕಾಮೆಂಟ್ಗಳನ್ನು ಸೇಡು ಆಗಿ ಇರಿಸಿಕೊಂಡಿದ್ದ ಆತ ಮೂರು ದಶಕದ ಬಳಿಕ ಅದನ್ನು ತೀರಿಸಿಕೊಂಡಿದ್ದಾನೆ.
2020ರ ನವೆಂಬರ್ ನಲ್ಲಿ ಆಂಟ್ವರ್ಪ್ ನಗರದ ಹೆರೆಂಟಲ್ಸ್ ಎಂಬಲ್ಲಿನ ತನ್ನ ಮನೆಯಲ್ಲಿ 59 ವರ್ಷದ ವೆರ್ಲಿಂಡೆನ್ ಎಂಬ ಶಿಕ್ಷಕಿಯ ಘೋರ ಹತ್ಯೆ ನಡೆದಿತ್ತು. ಘಟನೆ ಬಗ್ಗೆ ಬೆಲ್ಜಿಯಂ ಪೊಲೀಸರು ತನಿಖೆ ನಡೆಸಿದ್ದು ನೂರಾರು ಡಿಎನ್ಎ ಮಾದರಿಗಳನ್ನು ಪಡೆದು ತನಿಖೆ ಕೈಗೊಂಡರೂ ಕೊಲೆಗಾರನನ್ನು ಹುಡುಕಲು ಸಾಧ್ಯವಾಗಿರಲಿಲ್ಲ. ಕೊನೆಗೆ, ಆಕೆಯ ಪತಿ ಸಾಕ್ಷಿಗಳಿಗಾಗಿ ಸಾರ್ವಜನಿಕ ಮನವಿಯನ್ನು ಮಾಡಿದ್ದರು.
ಆಕೆಯ ದೇಹದ ಮೇಲೆ 101 ಬಾರಿ ಇರಿಯಲಾಗಿದ್ದು ಭೀಭತ್ಸ ರೀತಿಯಲ್ಲಿ ಕೊಲೆ ಮಾಡಲಾಗಿತ್ತು. ಶವದ ಪಕ್ಕದಲ್ಲಿದ್ದ ಡೈನಿಂಗ್ ಟೇಬಲ್ ಮೇಲಿದ್ದ ಹಣದ ಪರ್ಸ್ ಮುಟ್ಟದೆ ಇದ್ದದ್ದು ನೋಡಿದರೆ ಹಣಕ್ಕಾಗಿ ನಡೆದ ಕೊಲೆ ಅಲ್ಲ ಎಂಬುದು ಪೊಲೀಸರಿಗೆ ತಿಳಿದುಬಂದಿತ್ತು. 2020ರ ನವೆಂಬರ್ 20ರಂದು ಕೊಲೆ ನಡೆದಿತ್ತು. ಹದಿನಾರು ತಿಂಗಳ ನಂತರ ಇತ್ತೀಚೆಗೆ ಆರೋಪಿ ಗುಂಟರ್ ಉವೆಂಟ್ಸ್ ತನ್ನ ಸ್ನೇಹಿತರ ಬಳಿ ಕೊಲೆ ವಿಚಾರವನ್ನು ಹೇಳಿಕೊಂಡು ಸಾಧನೆ ಎಂಬಂತೆ ಬಿಂಬಿಸಿದ್ದ.
ಅತ್ಯಂತ ನಿಗೂಢವಾಗಿದ್ದ ಕೊಲೆ ಪ್ರಕರಣದ ಬಗ್ಗೆ ತಿಳಿಯುತ್ತಲೇ ಆತನ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರಂತೆ, ತನಿಖೆ ಕೈಗೊಂಡ ಪೊಲೀಸರು ಆರೋಪಿ ಉವೆಂಟ್ಸ್ ನನ್ನು ಬಂಧಿಸಿದ್ದಾರೆ. ಕೊಲೆಯಾದ ಸ್ಥಳದಲ್ಲಿ ಪತ್ತೆಯಾದ ಕುರುಹುಗಳೊಂದಿಗೆ ಹೋಲಿಸಲು ಉವೆಂಟ್ಸ್ ಡಿಎನ್ಎ ಮಾದರಿಯನ್ನು ಪಡೆಯಲಾಗಿದೆ.
30 Years After Humiliation at School, Ex-Pupil Admits to Stabbing Teacher 101 Times.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am