ಬ್ರೇಕಿಂಗ್ ನ್ಯೂಸ್
22-09-20 12:24 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟಂಬರ್ 22: ಹನ್ನೆರೆಡು ವರ್ಷಗಳ ಹಿಂದೆ ನಗರದಲ್ಲಿ ಎಸಗಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಶಂಕಿತ ಉಗ್ರ ಶೋಯಬ್ ಎಂಬಾತನನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
2008ರಲ್ಲಿ ಬೆಂಗಳೂರಿನ ಮಡಿವಾಳ ಸೇರಿದಂತೆ ಹಲವು ಕಡೆ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಶೋಯಬ್ ಭಾಗಿಯಾಗಿದ್ದ. ಘಟನೆ ನಡೆದಾಗಿನಿಂದಲೂ ಆರೋಪಿ ತಲೆಮರೆಸಿಕೊಂಡಿದ್ದ. ಆರೋಪಿ ಕೇರಳದಲ್ಲಿ ಇರುವ ಬಗ್ಗೆ ಮಾಹಿತಿ ಆಧರಿಸಿ ರಾಷ್ಟ್ರೀಯ ತನಿಖಾ ದಳಗಳ ಜತೆ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದ್ದು, ಆತನನ್ನು ನಗರಕ್ಕೆ ಕರೆತರಲಾಗುತ್ತಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಸಿಮಿ ಉಗ್ರ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಶೋಯಬ್ ಕೇರಳದ ಕಲ್ಲಿಕೋಟೆ ಪ್ರದೇಶದ ನಿವಾಸಿಯಾಗಿದ್ದು, ಸರಣಿ ಬಾಂಬ್ ಸ್ಫೋಟದಲ್ಲಿ ಭಾಗಿಯಾಗಿದ್ದು, ಬಳಿಕ ತಲೆಮರೆಸಿಕೊಂಡಿದ್ದಾನೆ. ಆತನ ಬಂಧನಕ್ಕೆ ತನಿಖಾ ಸಂಸ್ಥೆಗಳು ರೆಡ್ಕಾರ್ನರ್ ನೋಟಿಸ್ ಸಹ ಹೊರಡಿಸಿದ್ದವು. ಉಗ್ರ ರಿಯಾಜ್ ಭಟ್ಕಳನ ಆಪ್ತ ವಲಯದಲ್ಲಿ ಗುರ್ತಿಸಿಕೊಂಡಿದ್ದ ಶೋಯಬ್, ದೇಶದಲ್ಲಿ ನಡೆದ ವಿಧ್ವಂಸಕ ಕೃತ್ಯಗಳಿಗೆ ಸ್ಫೋಟಕಗಳನ್ನು ಸರಬರಾಜು ಮಾಡುವ ಕೆಲಸದಲ್ಲಿ ತೊಡಗಿದ್ದ ಎನ್ನಲಾಗಿದೆ.
ದೆಹಲಿಯಲ್ಲಿನ ಹವಾಲಾ ಪ್ರಕರಣದಲ್ಲೂ ಈತ ಭಾಗಿಯಾಗಿದ್ದ. 2008ರಲ್ಲಿ ನಡೆದ ಅಹಮದಾಬಾದ್ ಸರಣಿ ಸ್ಫೋಟ ಪ್ರಕರಣದಲ್ಲಿಯೂ ಪಾಲ್ಗೊಂಡಿರುವ ಶಂಕೆಯಿದೆ. ಈ ಬಗ್ಗೆಯೂ ತನಿಖೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ. 2008ರ ಜುಲೈ 25ರಂದು ಮಡಿವಾಳ, ಮೈಸೂರು ರಸ್ತೆ ಸೇರಿದಂತೆ ನಗರದ ಒಂಭತ್ತು ಕಡೆ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಸ್ಫೋಟದಲ್ಲಿ ಒಬ್ಬರು ಮೃತಪಟ್ಟು 20 ಮಂದಿ ಗಾಯಗೊಂಡಿದ್ದರು.
ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಪೊಲೀಸರು ಕೇರಳದ ಪೀಪಲ್ ಡೆಮಾಕ್ರಟಿಕ್ ಪಾರ್ಟಿ ಮುಖಂಡ ಅಬ್ದುಲ್ ನಾಜೀರ್ ಮದನಿ ಸೇರಿದಂತೆ ಹಲವರನ್ನು ಬಂಧಿಸಿತ್ತು. ಶೋಯಬ್ ಜತೆಗೆ ಉತ್ತರಪ್ರದೇಶ ಮೂಲದ ಮತ್ತೂಬ್ಬ ಉಗ್ರನನ್ನೂ ಬಂಧಿಸಲಾಗಿದೆ. ಇವರಿಬ್ಬರೂ ಸೌದಿ ಅರೇಬಿಯಾದಿಂದ ತಿರುವನಂತಪುರಂಗೆ ಆಗಮಿಸುತ್ತಿದ್ದರು. ಇವರು ಲಷ್ಕರ್ ಹಾಗೂ ಇಂಡಿಯನ್ ಮುಜಾಹಿದೀನ್ ಉಗ್ರ ಸಂಘಟನೆಗೆ ಸೇರಿದವರು ಎಂದು ಹೇಳಲಾಗಿದೆ.
31-12-25 02:35 pm
Bangalore Correspondent
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
ಪ್ರಿಯಾಂಕ ಗಾಂಧಿ ಪುತ್ರ ರೈಹಾನ್ ಮದುವೆ ನಿಶ್ಚಿತಾರ್ಥ...
30-12-25 05:44 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 03:35 pm
Mangalore Correspondent
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
ಯುವತಿಗೆ ಮಗು ಕರುಣಿಸಿದ ಪ್ರಕರಣ ; ಬಿಜೆಪಿಯಿಂದ ಜಗನ್...
29-12-25 11:03 pm
Punjalkatte Crash: ಪುಂಜಾಲಕಟ್ಟೆ ; ಪೊಲೀಸ್ ಸಿಬಂದ...
29-12-25 08:47 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm