ಬ್ರೇಕಿಂಗ್ ನ್ಯೂಸ್
22-09-20 12:24 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟಂಬರ್ 22: ಹನ್ನೆರೆಡು ವರ್ಷಗಳ ಹಿಂದೆ ನಗರದಲ್ಲಿ ಎಸಗಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಶಂಕಿತ ಉಗ್ರ ಶೋಯಬ್ ಎಂಬಾತನನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
2008ರಲ್ಲಿ ಬೆಂಗಳೂರಿನ ಮಡಿವಾಳ ಸೇರಿದಂತೆ ಹಲವು ಕಡೆ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಶೋಯಬ್ ಭಾಗಿಯಾಗಿದ್ದ. ಘಟನೆ ನಡೆದಾಗಿನಿಂದಲೂ ಆರೋಪಿ ತಲೆಮರೆಸಿಕೊಂಡಿದ್ದ. ಆರೋಪಿ ಕೇರಳದಲ್ಲಿ ಇರುವ ಬಗ್ಗೆ ಮಾಹಿತಿ ಆಧರಿಸಿ ರಾಷ್ಟ್ರೀಯ ತನಿಖಾ ದಳಗಳ ಜತೆ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದ್ದು, ಆತನನ್ನು ನಗರಕ್ಕೆ ಕರೆತರಲಾಗುತ್ತಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ಸಿಮಿ ಉಗ್ರ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಶೋಯಬ್ ಕೇರಳದ ಕಲ್ಲಿಕೋಟೆ ಪ್ರದೇಶದ ನಿವಾಸಿಯಾಗಿದ್ದು, ಸರಣಿ ಬಾಂಬ್ ಸ್ಫೋಟದಲ್ಲಿ ಭಾಗಿಯಾಗಿದ್ದು, ಬಳಿಕ ತಲೆಮರೆಸಿಕೊಂಡಿದ್ದಾನೆ. ಆತನ ಬಂಧನಕ್ಕೆ ತನಿಖಾ ಸಂಸ್ಥೆಗಳು ರೆಡ್ಕಾರ್ನರ್ ನೋಟಿಸ್ ಸಹ ಹೊರಡಿಸಿದ್ದವು. ಉಗ್ರ ರಿಯಾಜ್ ಭಟ್ಕಳನ ಆಪ್ತ ವಲಯದಲ್ಲಿ ಗುರ್ತಿಸಿಕೊಂಡಿದ್ದ ಶೋಯಬ್, ದೇಶದಲ್ಲಿ ನಡೆದ ವಿಧ್ವಂಸಕ ಕೃತ್ಯಗಳಿಗೆ ಸ್ಫೋಟಕಗಳನ್ನು ಸರಬರಾಜು ಮಾಡುವ ಕೆಲಸದಲ್ಲಿ ತೊಡಗಿದ್ದ ಎನ್ನಲಾಗಿದೆ.
ದೆಹಲಿಯಲ್ಲಿನ ಹವಾಲಾ ಪ್ರಕರಣದಲ್ಲೂ ಈತ ಭಾಗಿಯಾಗಿದ್ದ. 2008ರಲ್ಲಿ ನಡೆದ ಅಹಮದಾಬಾದ್ ಸರಣಿ ಸ್ಫೋಟ ಪ್ರಕರಣದಲ್ಲಿಯೂ ಪಾಲ್ಗೊಂಡಿರುವ ಶಂಕೆಯಿದೆ. ಈ ಬಗ್ಗೆಯೂ ತನಿಖೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ. 2008ರ ಜುಲೈ 25ರಂದು ಮಡಿವಾಳ, ಮೈಸೂರು ರಸ್ತೆ ಸೇರಿದಂತೆ ನಗರದ ಒಂಭತ್ತು ಕಡೆ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಸ್ಫೋಟದಲ್ಲಿ ಒಬ್ಬರು ಮೃತಪಟ್ಟು 20 ಮಂದಿ ಗಾಯಗೊಂಡಿದ್ದರು.
ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಪೊಲೀಸರು ಕೇರಳದ ಪೀಪಲ್ ಡೆಮಾಕ್ರಟಿಕ್ ಪಾರ್ಟಿ ಮುಖಂಡ ಅಬ್ದುಲ್ ನಾಜೀರ್ ಮದನಿ ಸೇರಿದಂತೆ ಹಲವರನ್ನು ಬಂಧಿಸಿತ್ತು. ಶೋಯಬ್ ಜತೆಗೆ ಉತ್ತರಪ್ರದೇಶ ಮೂಲದ ಮತ್ತೂಬ್ಬ ಉಗ್ರನನ್ನೂ ಬಂಧಿಸಲಾಗಿದೆ. ಇವರಿಬ್ಬರೂ ಸೌದಿ ಅರೇಬಿಯಾದಿಂದ ತಿರುವನಂತಪುರಂಗೆ ಆಗಮಿಸುತ್ತಿದ್ದರು. ಇವರು ಲಷ್ಕರ್ ಹಾಗೂ ಇಂಡಿಯನ್ ಮುಜಾಹಿದೀನ್ ಉಗ್ರ ಸಂಘಟನೆಗೆ ಸೇರಿದವರು ಎಂದು ಹೇಳಲಾಗಿದೆ.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm