ಬ್ರೇಕಿಂಗ್ ನ್ಯೂಸ್
21-03-22 09:41 am Mangalore Correspondent ಕ್ರೈಂ
ಪುತ್ತೂರು, ಮಾ.21 : ದಕ್ಷಿಣ ಕನ್ನಡ - ಕೊಡಗು ಜಿಲ್ಲೆಯ ಗಡಿಭಾಗ ಸಂಪಾಜೆಯಲ್ಲಿ ಜ್ಯೋತಿಷಿಯೊಬ್ಬರ ಮನೆಗೆ ನುಗ್ಗಿದ ದರೋಡೆಕೋರರ ತಂಡ ಚಿನ್ನಾಭರಣ ಮತ್ತು ನಗದು ಲೂಟಿಗೈದ ಘಟನೆ ಭಾನುವಾರ ರಾತ್ರಿ ನಡೆದಿದೆ.
ಸಂಪಾಜೆಯ ಚಟ್ಟೆಕಲ್ಲು ಎಂಬಲ್ಲಿ ಘಟನೆ ನಡೆದಿದ್ದು ಸ್ಥಳೀಯವಾಗಿ ಪುರೋಹಿತ ಮತ್ತು ಜ್ಯೋತಿಷಿಯಾಗಿ ಹೆಸರು ಗಳಿಸಿರುವ ಅಂಬರೀಶ್ ಭಟ್ ಎಂಬವರ ಮನೆಗೆ ನುಗ್ಗಿದ ತಂಡ ಕೃತ್ಯ ಎಸಗಿದೆ. ರಾತ್ರಿ 8.30 ರ ವೇಳೆಗೆ ಆಗಂತುಕರು ಎಳನೀರು ಕಡಿಯುವ ಕತ್ತಿ ಹಿಡಿದು ಮನೆಗೆ ನುಗ್ಗಿದ್ದಾರೆ. ಈ ವೇಳೆ, ಅಂಬರೀಶ್ ಭಟ್ ಮನೆಯಲ್ಲಿ ಇರಲಿಲ್ಲ.
ಅಂಬರೀಶ್ ಭಟ್ ಅವರಿಗೆ ಇಬ್ಬರು ಪುತ್ರರಿದ್ದು ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದಾರೆ. ಎರಡು ದಿನಗಳ ಹಿಂದಷ್ಟೇ ದೊಡ್ಡ ಮಗ ಶ್ರೀವತ್ಸ ತನ್ನ ಪತ್ನಿಯ ಜೊತೆಗೆ ಮನೆಗೆ ಬಂದಿದ್ದರು. ದರೋಡೆ ಕೃತ್ಯದ ಸಂದರ್ಭದಲ್ಲಿ ಅತ್ತೆ ಮತ್ತು ಸೊಸೆ ಮಾತ್ರ ಇದ್ದರು. ಮನೆಗೆ ನುಗ್ಗಿದ ತಂಡ, ಸೊಸೆಯ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಿತ್ತುಕೊಂಡಿದ್ದಾರೆ. ಬಳಿಕ ಕತ್ತಿ ತೋರಿಸಿ ಬೆದರಿಸಿದ್ದು ಕಪಾಟಿನ ಕೀಲಿ ಕೈ ಕೊಡುವಂತೆ ಕೇಳಿದ್ದಾರೆ. ಜೀವ ಭಯದಿಂದ ಅತ್ತೆ , ಸೊಸೆ ಕೀಯನ್ನು ಕೊಟ್ಟಿದ್ದು ಆಗಂತುಕರು ಕಪಾಟಿನಲ್ಲಿದ್ದ ಸುಮಾರು ನೂರು ಗ್ರಾಂನಷ್ಟು ಚಿನ್ನದ ಒಡವೆ, ಒಂದುವರೆ ಲಕ್ಷದಷ್ಟು ಇದ್ದ ನಗದು ಹಣವನ್ನು ಕಿತ್ತುಕೊಂಡು ಕೆಲವೇ ಕ್ಷಣಗಳಲ್ಲಿ ಪರಾರಿಯಾಗಿದ್ದಾರೆ. ದರೋಡೆ ತಂಡದಲ್ಲಿದ್ದವರು ತಮಿಳು ಮಾತನಾಡುತ್ತಿದ್ದರು ಎನ್ನಲಾಗಿದೆ. ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
Burglars enter house of Astrologer show them talwar and flee with gold and cash at house in Sampaje in Dakshina Kannada. The robbers were said to be talking in Tamil.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am