ಬ್ರೇಕಿಂಗ್ ನ್ಯೂಸ್
21-03-22 09:41 am Mangalore Correspondent ಕ್ರೈಂ
ಪುತ್ತೂರು, ಮಾ.21 : ದಕ್ಷಿಣ ಕನ್ನಡ - ಕೊಡಗು ಜಿಲ್ಲೆಯ ಗಡಿಭಾಗ ಸಂಪಾಜೆಯಲ್ಲಿ ಜ್ಯೋತಿಷಿಯೊಬ್ಬರ ಮನೆಗೆ ನುಗ್ಗಿದ ದರೋಡೆಕೋರರ ತಂಡ ಚಿನ್ನಾಭರಣ ಮತ್ತು ನಗದು ಲೂಟಿಗೈದ ಘಟನೆ ಭಾನುವಾರ ರಾತ್ರಿ ನಡೆದಿದೆ.
ಸಂಪಾಜೆಯ ಚಟ್ಟೆಕಲ್ಲು ಎಂಬಲ್ಲಿ ಘಟನೆ ನಡೆದಿದ್ದು ಸ್ಥಳೀಯವಾಗಿ ಪುರೋಹಿತ ಮತ್ತು ಜ್ಯೋತಿಷಿಯಾಗಿ ಹೆಸರು ಗಳಿಸಿರುವ ಅಂಬರೀಶ್ ಭಟ್ ಎಂಬವರ ಮನೆಗೆ ನುಗ್ಗಿದ ತಂಡ ಕೃತ್ಯ ಎಸಗಿದೆ. ರಾತ್ರಿ 8.30 ರ ವೇಳೆಗೆ ಆಗಂತುಕರು ಎಳನೀರು ಕಡಿಯುವ ಕತ್ತಿ ಹಿಡಿದು ಮನೆಗೆ ನುಗ್ಗಿದ್ದಾರೆ. ಈ ವೇಳೆ, ಅಂಬರೀಶ್ ಭಟ್ ಮನೆಯಲ್ಲಿ ಇರಲಿಲ್ಲ.
ಅಂಬರೀಶ್ ಭಟ್ ಅವರಿಗೆ ಇಬ್ಬರು ಪುತ್ರರಿದ್ದು ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದಾರೆ. ಎರಡು ದಿನಗಳ ಹಿಂದಷ್ಟೇ ದೊಡ್ಡ ಮಗ ಶ್ರೀವತ್ಸ ತನ್ನ ಪತ್ನಿಯ ಜೊತೆಗೆ ಮನೆಗೆ ಬಂದಿದ್ದರು. ದರೋಡೆ ಕೃತ್ಯದ ಸಂದರ್ಭದಲ್ಲಿ ಅತ್ತೆ ಮತ್ತು ಸೊಸೆ ಮಾತ್ರ ಇದ್ದರು. ಮನೆಗೆ ನುಗ್ಗಿದ ತಂಡ, ಸೊಸೆಯ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಿತ್ತುಕೊಂಡಿದ್ದಾರೆ. ಬಳಿಕ ಕತ್ತಿ ತೋರಿಸಿ ಬೆದರಿಸಿದ್ದು ಕಪಾಟಿನ ಕೀಲಿ ಕೈ ಕೊಡುವಂತೆ ಕೇಳಿದ್ದಾರೆ. ಜೀವ ಭಯದಿಂದ ಅತ್ತೆ , ಸೊಸೆ ಕೀಯನ್ನು ಕೊಟ್ಟಿದ್ದು ಆಗಂತುಕರು ಕಪಾಟಿನಲ್ಲಿದ್ದ ಸುಮಾರು ನೂರು ಗ್ರಾಂನಷ್ಟು ಚಿನ್ನದ ಒಡವೆ, ಒಂದುವರೆ ಲಕ್ಷದಷ್ಟು ಇದ್ದ ನಗದು ಹಣವನ್ನು ಕಿತ್ತುಕೊಂಡು ಕೆಲವೇ ಕ್ಷಣಗಳಲ್ಲಿ ಪರಾರಿಯಾಗಿದ್ದಾರೆ. ದರೋಡೆ ತಂಡದಲ್ಲಿದ್ದವರು ತಮಿಳು ಮಾತನಾಡುತ್ತಿದ್ದರು ಎನ್ನಲಾಗಿದೆ. ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
Burglars enter house of Astrologer show them talwar and flee with gold and cash at house in Sampaje in Dakshina Kannada. The robbers were said to be talking in Tamil.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm