ಬ್ರೇಕಿಂಗ್ ನ್ಯೂಸ್
21-03-22 09:41 am Mangalore Correspondent ಕ್ರೈಂ
ಪುತ್ತೂರು, ಮಾ.21 : ದಕ್ಷಿಣ ಕನ್ನಡ - ಕೊಡಗು ಜಿಲ್ಲೆಯ ಗಡಿಭಾಗ ಸಂಪಾಜೆಯಲ್ಲಿ ಜ್ಯೋತಿಷಿಯೊಬ್ಬರ ಮನೆಗೆ ನುಗ್ಗಿದ ದರೋಡೆಕೋರರ ತಂಡ ಚಿನ್ನಾಭರಣ ಮತ್ತು ನಗದು ಲೂಟಿಗೈದ ಘಟನೆ ಭಾನುವಾರ ರಾತ್ರಿ ನಡೆದಿದೆ.
ಸಂಪಾಜೆಯ ಚಟ್ಟೆಕಲ್ಲು ಎಂಬಲ್ಲಿ ಘಟನೆ ನಡೆದಿದ್ದು ಸ್ಥಳೀಯವಾಗಿ ಪುರೋಹಿತ ಮತ್ತು ಜ್ಯೋತಿಷಿಯಾಗಿ ಹೆಸರು ಗಳಿಸಿರುವ ಅಂಬರೀಶ್ ಭಟ್ ಎಂಬವರ ಮನೆಗೆ ನುಗ್ಗಿದ ತಂಡ ಕೃತ್ಯ ಎಸಗಿದೆ. ರಾತ್ರಿ 8.30 ರ ವೇಳೆಗೆ ಆಗಂತುಕರು ಎಳನೀರು ಕಡಿಯುವ ಕತ್ತಿ ಹಿಡಿದು ಮನೆಗೆ ನುಗ್ಗಿದ್ದಾರೆ. ಈ ವೇಳೆ, ಅಂಬರೀಶ್ ಭಟ್ ಮನೆಯಲ್ಲಿ ಇರಲಿಲ್ಲ.
ಅಂಬರೀಶ್ ಭಟ್ ಅವರಿಗೆ ಇಬ್ಬರು ಪುತ್ರರಿದ್ದು ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದಾರೆ. ಎರಡು ದಿನಗಳ ಹಿಂದಷ್ಟೇ ದೊಡ್ಡ ಮಗ ಶ್ರೀವತ್ಸ ತನ್ನ ಪತ್ನಿಯ ಜೊತೆಗೆ ಮನೆಗೆ ಬಂದಿದ್ದರು. ದರೋಡೆ ಕೃತ್ಯದ ಸಂದರ್ಭದಲ್ಲಿ ಅತ್ತೆ ಮತ್ತು ಸೊಸೆ ಮಾತ್ರ ಇದ್ದರು. ಮನೆಗೆ ನುಗ್ಗಿದ ತಂಡ, ಸೊಸೆಯ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಿತ್ತುಕೊಂಡಿದ್ದಾರೆ. ಬಳಿಕ ಕತ್ತಿ ತೋರಿಸಿ ಬೆದರಿಸಿದ್ದು ಕಪಾಟಿನ ಕೀಲಿ ಕೈ ಕೊಡುವಂತೆ ಕೇಳಿದ್ದಾರೆ. ಜೀವ ಭಯದಿಂದ ಅತ್ತೆ , ಸೊಸೆ ಕೀಯನ್ನು ಕೊಟ್ಟಿದ್ದು ಆಗಂತುಕರು ಕಪಾಟಿನಲ್ಲಿದ್ದ ಸುಮಾರು ನೂರು ಗ್ರಾಂನಷ್ಟು ಚಿನ್ನದ ಒಡವೆ, ಒಂದುವರೆ ಲಕ್ಷದಷ್ಟು ಇದ್ದ ನಗದು ಹಣವನ್ನು ಕಿತ್ತುಕೊಂಡು ಕೆಲವೇ ಕ್ಷಣಗಳಲ್ಲಿ ಪರಾರಿಯಾಗಿದ್ದಾರೆ. ದರೋಡೆ ತಂಡದಲ್ಲಿದ್ದವರು ತಮಿಳು ಮಾತನಾಡುತ್ತಿದ್ದರು ಎನ್ನಲಾಗಿದೆ. ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
Burglars enter house of Astrologer show them talwar and flee with gold and cash at house in Sampaje in Dakshina Kannada. The robbers were said to be talking in Tamil.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm