ಬ್ರೇಕಿಂಗ್ ನ್ಯೂಸ್
21-03-22 09:41 am Mangalore Correspondent ಕ್ರೈಂ
ಪುತ್ತೂರು, ಮಾ.21 : ದಕ್ಷಿಣ ಕನ್ನಡ - ಕೊಡಗು ಜಿಲ್ಲೆಯ ಗಡಿಭಾಗ ಸಂಪಾಜೆಯಲ್ಲಿ ಜ್ಯೋತಿಷಿಯೊಬ್ಬರ ಮನೆಗೆ ನುಗ್ಗಿದ ದರೋಡೆಕೋರರ ತಂಡ ಚಿನ್ನಾಭರಣ ಮತ್ತು ನಗದು ಲೂಟಿಗೈದ ಘಟನೆ ಭಾನುವಾರ ರಾತ್ರಿ ನಡೆದಿದೆ.
ಸಂಪಾಜೆಯ ಚಟ್ಟೆಕಲ್ಲು ಎಂಬಲ್ಲಿ ಘಟನೆ ನಡೆದಿದ್ದು ಸ್ಥಳೀಯವಾಗಿ ಪುರೋಹಿತ ಮತ್ತು ಜ್ಯೋತಿಷಿಯಾಗಿ ಹೆಸರು ಗಳಿಸಿರುವ ಅಂಬರೀಶ್ ಭಟ್ ಎಂಬವರ ಮನೆಗೆ ನುಗ್ಗಿದ ತಂಡ ಕೃತ್ಯ ಎಸಗಿದೆ. ರಾತ್ರಿ 8.30 ರ ವೇಳೆಗೆ ಆಗಂತುಕರು ಎಳನೀರು ಕಡಿಯುವ ಕತ್ತಿ ಹಿಡಿದು ಮನೆಗೆ ನುಗ್ಗಿದ್ದಾರೆ. ಈ ವೇಳೆ, ಅಂಬರೀಶ್ ಭಟ್ ಮನೆಯಲ್ಲಿ ಇರಲಿಲ್ಲ.
ಅಂಬರೀಶ್ ಭಟ್ ಅವರಿಗೆ ಇಬ್ಬರು ಪುತ್ರರಿದ್ದು ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದಾರೆ. ಎರಡು ದಿನಗಳ ಹಿಂದಷ್ಟೇ ದೊಡ್ಡ ಮಗ ಶ್ರೀವತ್ಸ ತನ್ನ ಪತ್ನಿಯ ಜೊತೆಗೆ ಮನೆಗೆ ಬಂದಿದ್ದರು. ದರೋಡೆ ಕೃತ್ಯದ ಸಂದರ್ಭದಲ್ಲಿ ಅತ್ತೆ ಮತ್ತು ಸೊಸೆ ಮಾತ್ರ ಇದ್ದರು. ಮನೆಗೆ ನುಗ್ಗಿದ ತಂಡ, ಸೊಸೆಯ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಿತ್ತುಕೊಂಡಿದ್ದಾರೆ. ಬಳಿಕ ಕತ್ತಿ ತೋರಿಸಿ ಬೆದರಿಸಿದ್ದು ಕಪಾಟಿನ ಕೀಲಿ ಕೈ ಕೊಡುವಂತೆ ಕೇಳಿದ್ದಾರೆ. ಜೀವ ಭಯದಿಂದ ಅತ್ತೆ , ಸೊಸೆ ಕೀಯನ್ನು ಕೊಟ್ಟಿದ್ದು ಆಗಂತುಕರು ಕಪಾಟಿನಲ್ಲಿದ್ದ ಸುಮಾರು ನೂರು ಗ್ರಾಂನಷ್ಟು ಚಿನ್ನದ ಒಡವೆ, ಒಂದುವರೆ ಲಕ್ಷದಷ್ಟು ಇದ್ದ ನಗದು ಹಣವನ್ನು ಕಿತ್ತುಕೊಂಡು ಕೆಲವೇ ಕ್ಷಣಗಳಲ್ಲಿ ಪರಾರಿಯಾಗಿದ್ದಾರೆ. ದರೋಡೆ ತಂಡದಲ್ಲಿದ್ದವರು ತಮಿಳು ಮಾತನಾಡುತ್ತಿದ್ದರು ಎನ್ನಲಾಗಿದೆ. ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
Burglars enter house of Astrologer show them talwar and flee with gold and cash at house in Sampaje in Dakshina Kannada. The robbers were said to be talking in Tamil.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
01-11-25 01:31 pm
Mangalore Correspondent
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm