ಬ್ರೇಕಿಂಗ್ ನ್ಯೂಸ್
21-03-22 09:41 am Mangalore Correspondent ಕ್ರೈಂ
ಪುತ್ತೂರು, ಮಾ.21 : ದಕ್ಷಿಣ ಕನ್ನಡ - ಕೊಡಗು ಜಿಲ್ಲೆಯ ಗಡಿಭಾಗ ಸಂಪಾಜೆಯಲ್ಲಿ ಜ್ಯೋತಿಷಿಯೊಬ್ಬರ ಮನೆಗೆ ನುಗ್ಗಿದ ದರೋಡೆಕೋರರ ತಂಡ ಚಿನ್ನಾಭರಣ ಮತ್ತು ನಗದು ಲೂಟಿಗೈದ ಘಟನೆ ಭಾನುವಾರ ರಾತ್ರಿ ನಡೆದಿದೆ.
ಸಂಪಾಜೆಯ ಚಟ್ಟೆಕಲ್ಲು ಎಂಬಲ್ಲಿ ಘಟನೆ ನಡೆದಿದ್ದು ಸ್ಥಳೀಯವಾಗಿ ಪುರೋಹಿತ ಮತ್ತು ಜ್ಯೋತಿಷಿಯಾಗಿ ಹೆಸರು ಗಳಿಸಿರುವ ಅಂಬರೀಶ್ ಭಟ್ ಎಂಬವರ ಮನೆಗೆ ನುಗ್ಗಿದ ತಂಡ ಕೃತ್ಯ ಎಸಗಿದೆ. ರಾತ್ರಿ 8.30 ರ ವೇಳೆಗೆ ಆಗಂತುಕರು ಎಳನೀರು ಕಡಿಯುವ ಕತ್ತಿ ಹಿಡಿದು ಮನೆಗೆ ನುಗ್ಗಿದ್ದಾರೆ. ಈ ವೇಳೆ, ಅಂಬರೀಶ್ ಭಟ್ ಮನೆಯಲ್ಲಿ ಇರಲಿಲ್ಲ.
ಅಂಬರೀಶ್ ಭಟ್ ಅವರಿಗೆ ಇಬ್ಬರು ಪುತ್ರರಿದ್ದು ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದಾರೆ. ಎರಡು ದಿನಗಳ ಹಿಂದಷ್ಟೇ ದೊಡ್ಡ ಮಗ ಶ್ರೀವತ್ಸ ತನ್ನ ಪತ್ನಿಯ ಜೊತೆಗೆ ಮನೆಗೆ ಬಂದಿದ್ದರು. ದರೋಡೆ ಕೃತ್ಯದ ಸಂದರ್ಭದಲ್ಲಿ ಅತ್ತೆ ಮತ್ತು ಸೊಸೆ ಮಾತ್ರ ಇದ್ದರು. ಮನೆಗೆ ನುಗ್ಗಿದ ತಂಡ, ಸೊಸೆಯ ಕುತ್ತಿಗೆಯಲ್ಲಿದ್ದ ಕರಿಮಣಿ ಸರವನ್ನು ಕಿತ್ತುಕೊಂಡಿದ್ದಾರೆ. ಬಳಿಕ ಕತ್ತಿ ತೋರಿಸಿ ಬೆದರಿಸಿದ್ದು ಕಪಾಟಿನ ಕೀಲಿ ಕೈ ಕೊಡುವಂತೆ ಕೇಳಿದ್ದಾರೆ. ಜೀವ ಭಯದಿಂದ ಅತ್ತೆ , ಸೊಸೆ ಕೀಯನ್ನು ಕೊಟ್ಟಿದ್ದು ಆಗಂತುಕರು ಕಪಾಟಿನಲ್ಲಿದ್ದ ಸುಮಾರು ನೂರು ಗ್ರಾಂನಷ್ಟು ಚಿನ್ನದ ಒಡವೆ, ಒಂದುವರೆ ಲಕ್ಷದಷ್ಟು ಇದ್ದ ನಗದು ಹಣವನ್ನು ಕಿತ್ತುಕೊಂಡು ಕೆಲವೇ ಕ್ಷಣಗಳಲ್ಲಿ ಪರಾರಿಯಾಗಿದ್ದಾರೆ. ದರೋಡೆ ತಂಡದಲ್ಲಿದ್ದವರು ತಮಿಳು ಮಾತನಾಡುತ್ತಿದ್ದರು ಎನ್ನಲಾಗಿದೆ. ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.
Burglars enter house of Astrologer show them talwar and flee with gold and cash at house in Sampaje in Dakshina Kannada. The robbers were said to be talking in Tamil.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am