ಬ್ರೇಕಿಂಗ್ ನ್ಯೂಸ್
24-03-22 10:41 am Mangalore Correspondent ಕ್ರೈಂ
ಪುತ್ತೂರು, ಮಾ.24 : ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ನಿವಾಸಿ ವ್ಯಕ್ತಿಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ಶರತ್ ಮಡಿವಾಳ ಹೆಣ ಹೇಗೆ ಬಿದ್ದಿದೆಯೋ ಅದೇ ರೀತಿ ನಿನ್ನ ಹೆಣ ಬೀಳಲಿದೆ ಎಂದು ಬೆದರಿಕೆ ಹಾಕಿದ ಬಗ್ಗೆ ದೂರು ದಾಖಲಾಗಿದೆ.
ನೆಟ್ಟಣಿಗೆ ಮುಡ್ನೂರು ನಿವಾಸಿ ಚಂದ್ರಹಾಸ ಎಂ. ಎಂಬವರಿಗೆ ಮಾ.12 ರಂದು ಮೂರು ಬೇರೆ ಬೇರೆ ನಂಬರ್ ಗಳಿಂದ ಅಪರಿಚಿತ ವ್ಯಕ್ತಿಗಳು ಕರೆ ಮಾಡಿದ್ದು ಜೀವ ಬೆದರಿಕೆ ಹಾಕಿದ್ದಾರೆ. ತುಳು ಮತ್ತು ಕನ್ನಡದಲ್ಲಿ ಮಾತನಾಡಿದ ವ್ಯಕ್ತಿಗಳು ಶರತ್ ಮಡಿವಾಳನ ಹೆಣ ಹೇಗೆ ಬಿದ್ದಿದೆಯೋ ಅದೇ ರೀತಿ ನಾಳೆ ಸಂಜೆಯೊಳಗೆ ನಿನ್ನ ಹೆಣವೂ ಬೀಳುತ್ತದೆ ಎಂದು ತನಗೆ ಮತ್ತು ತನ್ನ ಮನೆಯವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಈ ಬಗ್ಗೆ ಚಂದ್ರಹಾಸ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಬರುವಂತೆ ತಿಳಿಸಿದ್ದಾರೆ. ಅದರಂತೆ, ಜೆಎಂಎಫ್ ಪುತ್ತೂರು ಕೋರ್ಟಿಗೆ ಚಂದ್ರಹಾಸ ದೂರು ಸಲ್ಲಿಸಿದ್ದರು. ನ್ಯಾಯಾಧೀಶರು ದೂರು ಪರಿಗಣಿಸಿ, ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಗ್ರಾಮಾಂತರ ಠಾಣಾಧಿಕಾರಿಗೆ ಆದೇಶ ಮಾಡಿದ್ದಾರೆ. ಇದರಂತೆ ಪುತ್ತೂರು ಠಾಣೆಯಲ್ಲಿ ಮಾ.23 ರಂದು ಕೇಸು ದಾಖಲಾಗಿದೆ.
Puttur Man gets threats stating we will kill you just like we killed Sharath Madiwala. A complaint has been filed by Chandras Puttur at Puttur Rural police station.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am