ಬ್ರೇಕಿಂಗ್ ನ್ಯೂಸ್
24-03-22 11:45 am Mangalore Correspondent ಕ್ರೈಂ
ಉಳ್ಳಾಲ, ಮಾ.24 : ವಾಚ್ ಕಳ್ಳತನದ ಆರೋಪಿಯನ್ನು ಹಿಡಿಯಲು ತೆರಳಿದ ಪಿಎಸ್ ಐ ಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ.
ಹಲ್ಲೆಯಿಂದ ಗಾಯಗೊಂಡಿರುವ ಪಿಎಸ್ ಐ ಶರಣಪ್ಪ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೂರಿ ಇರಿದ ಮಹಮ್ಮದ್ ಸಾದಿಕ್ ಪರಾರಿಯಾಗಿದ್ದು ಆತನಿಗೆ ಸಹಕರಿಸಿದ ನಝೀರ್ ಎಂಬವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬೆಲೆಬಾಳುವ ವಾಚ್ ಕಳ್ಳತನದ ಆರೋಪಿ ಮಹಮ್ಮದ್ ಸಾದಿಕ್ ಪಾವೂರಿನಲ್ಲಿ ತನ್ನ ಅತ್ತೆ ಮನೆಯಲ್ಲಿ ಅಡಗಿ ಕುಳಿತಿರುವ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸರು ದಾಳಿ ನಡೆಸಿದ್ದರು. ಮಂಗಳೂರಿನ ಬಂದರು ಠಾಣೆ ವ್ಯಾಪ್ತಿಯಲ್ಲಿ ಈ ಹಿಂದೆ ಬೆಲೆಬಾಳುವ ವಾಚ್ ಕಳ್ಳತನ ಪ್ರಕರಣ ನಡೆದಿತ್ತು. ಕೃತ್ಯ ನಡೆಸಿದ ಆರೋಪಿ ಮಹಮ್ಮದ್ ಸಾದಿಕ್ ನಟೋರಿಯಸ್ ಆಗಿದ್ದು ಈ ಹಿಂದೆ ಕೂಡ ಬಂದರು ಪೊಲೀಸ್ ಸಿಬ್ಬಂದಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದ. ಕಾಸರಗೋಡು ಕಡೆಯಿಂದ ಕದ್ದು ತಂದಿದ್ದ ಬೆಲೆಬಾಳುವ ವಾಚನ್ನು ಅಂಗಡಿಯೊಂದಕ್ಕೆ ಮಾರಾಟ ಮಾಡಲು ಬಂದಿದ್ದ ಬಗ್ಗೆ ಮಾಹಿತಿಯನ್ನು ಅಂಗಡಿ ಮಾಲಿಕರೇ ಪೊಲೀಸರಿಗೆ ತಿಳಿಸಿದ್ದರು. ನಗರದ ಬಂದರು ಪೊಲೀಸರು ಸ್ಥಳಕ್ಕೆ ಬಂದು ಆರೋಪಿಯನ್ನು ವಶಕ್ಕೆ ಪಡೆಯಲು ತೆರಳಿದ್ದಾಗ ಪೊಲೀಸ್ ಸಿಬಂದಿ ವಿನೋದ್ ಮತ್ತು ಪ್ರವೀಣ್ ಎಂಬವರಿಗೆ ಚೂರಿಯಿಂದ ಹಲ್ಲೆಗೈದು ಪರಾರಿಯಾಗಿದ್ದ. ಸಿಬಂದಿ ವಿನೋದ್ ಅವರಿಗೆ ಚೂರಿಯಿಂದ ಇರಿದು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದ.
ಇದೀಗ ಆರೋಪಿ ಹರೇಕಳದ ಪಾವೂರಿನ ಮನೆಯೊಂದರಲ್ಲಿ ಅಡಗಿರುವ ಖಚಿತ ಮಾಹಿತಿ ಮೇರೆಗೆ ಕೊಣಾಜೆ ಪೊಲೀಸ್ ಠಾಣಾ ಪಿಎಸ್ಐ ಶರಣಪ್ಪ ಹಾಗೂ ಸಿಬ್ಬಂದಿ ಬುಧವಾರ ರಾತ್ರಿ ದಾಳಿ ಮಾಡಿದ್ದು ಆರೋಪಿ ಸಾದಿಕ್ ಪಿಎಸ್ ಐ ಶರಣಪ್ಪ ಅವರ ತೋಳಿಗೆ ಚೂರಿಯಿಂದ ಗಾಯಗೊಳಿಸಿ ಪರಾರಿಯಾಗಿದ್ದಾನೆ.
ಚೂರಿ ಇರಿದ ಆರೋಪಿ ಮಹಮ್ಮದ್ ಸಾದಿಕ್ ಪರಾರಿಯಾಗಿದ್ದು ಆತನ ಜೊತೆಗಿದ್ದ ನಝೀರ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಹಲ್ಲೆಯಿಂದ ಗಾಯಗೊಂಡಿರುವ ಶರಣಪ್ಪ ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
In an incident which happened during the late night hours of Wednesday March 23 within the limits of Konaje police station, a theft-accused stabbed and injured a policeman. The incident happened when a police team went to take the accused into custody for questioning. In this attack, Konaje police sub-inspector (PSI) Sharanappa, was injured. He has been admitted into a hospital.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm