ಬ್ರೇಕಿಂಗ್ ನ್ಯೂಸ್
24-03-22 10:38 pm HK Desk news ಕ್ರೈಂ
ಬಾಗಲಕೋಟೆ, ಮಾ.24: ಮುಸ್ಲಿಂ ಯುವಕನ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಹಿಂದೂಗಳ ಬಗ್ಗೆ ಪ್ರಚೋದನಕಾರಿ ಪೋಸ್ಟ್ ಹಾಕುತ್ತಿದ್ದ ಹಿಂದು ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಿದ್ದಾರೂಢ ಶ್ರೀಕಾಂತ್ ಬಂಧಿತ. ಈತನನ್ನು ಬಾಗಲಕೋಟೆ ಸಿಇಎನ್ ಪೊಲೀಸರು ಅರೆಸ್ಟ್ ಮಾಡಿದ್ಧಾರೆ. ಬಂಧಿತ ಆರೋಪಿ ಮುಸ್ತಾಕ್ ಅಲಿ ಹೆಸರಲ್ಲಿ ಹಿಂದುಗಳನ್ನು ದ್ವೇ಼ಷಿಸಿ ಪೋಸ್ಟ್ ಹಾಕುತ್ತಿದ್ದ. ಈ ಬಗ್ಗೆ ಹಿಂದುಪರ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿಯ ಬಗ್ಗೆ ಮಾಹಿತಿ ಕಲೆಹಾಕಿ, ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿ ಸಿದ್ದಾರೂಢ ಶ್ರೀಕಾಂತ್ ಬಾಗಲಕೋಟೆಯ ಖಾಸಗಿ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದಾನೆ. ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸಿದ್ದಿಕುರಬೇಟ ಗ್ರಾಮದ ನಿವಾಸಿ. ಶಿವಮೊಗ್ಗದಲ್ಲಿ ಹರ್ಷ ಕೊಲೆ ಬಳಿಕ ಈ ರೀತಿ ಪೋಸ್ಟ್ ಹಾಕಲು ಆರಂಭಿಸಿದ್ದ.
ಹಿಂದೂಗಳ ಬಗ್ಗೆ ಹೆಚ್ಚು ಒಲವು ಹೊಂದಿದ್ದು ಇಂತಹ ಪೋಸ್ಟ್ ಹಾಕಿ ಹಿಂದೂಗಳನ್ನು ಒಗ್ಗಟ್ಟಾಗಿಸಲು ಪ್ರಯತ್ನ ಮಾಡುತ್ತಿದ್ದೆ ಎಂದು ವಿಚಾರಣೆ ವೇಳೆ ಹೇಳಿರೋದಾಗಿ ತಿಳಿದು ಬಂದಿದೆ. ಇನ್ನು ಈತ ತನ್ನ ನಕಲಿ ಖಾತೆಗೆ “ಪಾಕಿಸ್ತಾನಿ ಮುಸ್ಲಿಂ” ಎಂದು ಗೂಗಲ್ ಸರ್ಚ್ ಮಾಡಿ ಟೋಪಿ ಹಾಕಿದ ಭಾರತೀಯ ಮುಸ್ಲಿಮನಂತೆ ಕಾಣುವ ಯಾರದ್ದೋ ಫೋಟೊ ಹಾಕಿದ್ದ.

ಎಷ್ಟೇ ಬುದ್ದಿವಂತಿಕೆ ಉಪಯೋಗಿಸಿದರೂ ನಾವು ಬಿಡೋದಿಲ್ಲ. ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸ ಯಾರೂ ಮಾಡಬಾರದು ಎಂದು ಬಾಗಲಕೋಟೆ ಎಸ್ ಪಿ ಲೋಕೇಶ್ ಜಗಲಾಸರ್ ಹೇಳಿದ್ದಾರೆ.
Bagalkot Bank employee arrested for creating derogatory Facebook account and creating communal dispute.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm