ಬ್ರೇಕಿಂಗ್ ನ್ಯೂಸ್
24-03-22 10:38 pm HK Desk news ಕ್ರೈಂ
ಬಾಗಲಕೋಟೆ, ಮಾ.24: ಮುಸ್ಲಿಂ ಯುವಕನ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಹಿಂದೂಗಳ ಬಗ್ಗೆ ಪ್ರಚೋದನಕಾರಿ ಪೋಸ್ಟ್ ಹಾಕುತ್ತಿದ್ದ ಹಿಂದು ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಿದ್ದಾರೂಢ ಶ್ರೀಕಾಂತ್ ಬಂಧಿತ. ಈತನನ್ನು ಬಾಗಲಕೋಟೆ ಸಿಇಎನ್ ಪೊಲೀಸರು ಅರೆಸ್ಟ್ ಮಾಡಿದ್ಧಾರೆ. ಬಂಧಿತ ಆರೋಪಿ ಮುಸ್ತಾಕ್ ಅಲಿ ಹೆಸರಲ್ಲಿ ಹಿಂದುಗಳನ್ನು ದ್ವೇ಼ಷಿಸಿ ಪೋಸ್ಟ್ ಹಾಕುತ್ತಿದ್ದ. ಈ ಬಗ್ಗೆ ಹಿಂದುಪರ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿಯ ಬಗ್ಗೆ ಮಾಹಿತಿ ಕಲೆಹಾಕಿ, ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿ ಸಿದ್ದಾರೂಢ ಶ್ರೀಕಾಂತ್ ಬಾಗಲಕೋಟೆಯ ಖಾಸಗಿ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದಾನೆ. ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸಿದ್ದಿಕುರಬೇಟ ಗ್ರಾಮದ ನಿವಾಸಿ. ಶಿವಮೊಗ್ಗದಲ್ಲಿ ಹರ್ಷ ಕೊಲೆ ಬಳಿಕ ಈ ರೀತಿ ಪೋಸ್ಟ್ ಹಾಕಲು ಆರಂಭಿಸಿದ್ದ.
ಹಿಂದೂಗಳ ಬಗ್ಗೆ ಹೆಚ್ಚು ಒಲವು ಹೊಂದಿದ್ದು ಇಂತಹ ಪೋಸ್ಟ್ ಹಾಕಿ ಹಿಂದೂಗಳನ್ನು ಒಗ್ಗಟ್ಟಾಗಿಸಲು ಪ್ರಯತ್ನ ಮಾಡುತ್ತಿದ್ದೆ ಎಂದು ವಿಚಾರಣೆ ವೇಳೆ ಹೇಳಿರೋದಾಗಿ ತಿಳಿದು ಬಂದಿದೆ. ಇನ್ನು ಈತ ತನ್ನ ನಕಲಿ ಖಾತೆಗೆ “ಪಾಕಿಸ್ತಾನಿ ಮುಸ್ಲಿಂ” ಎಂದು ಗೂಗಲ್ ಸರ್ಚ್ ಮಾಡಿ ಟೋಪಿ ಹಾಕಿದ ಭಾರತೀಯ ಮುಸ್ಲಿಮನಂತೆ ಕಾಣುವ ಯಾರದ್ದೋ ಫೋಟೊ ಹಾಕಿದ್ದ.

ಎಷ್ಟೇ ಬುದ್ದಿವಂತಿಕೆ ಉಪಯೋಗಿಸಿದರೂ ನಾವು ಬಿಡೋದಿಲ್ಲ. ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸ ಯಾರೂ ಮಾಡಬಾರದು ಎಂದು ಬಾಗಲಕೋಟೆ ಎಸ್ ಪಿ ಲೋಕೇಶ್ ಜಗಲಾಸರ್ ಹೇಳಿದ್ದಾರೆ.
Bagalkot Bank employee arrested for creating derogatory Facebook account and creating communal dispute.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am