ಬ್ರೇಕಿಂಗ್ ನ್ಯೂಸ್
24-03-22 10:38 pm HK Desk news ಕ್ರೈಂ
ಬಾಗಲಕೋಟೆ, ಮಾ.24: ಮುಸ್ಲಿಂ ಯುವಕನ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಹಿಂದೂಗಳ ಬಗ್ಗೆ ಪ್ರಚೋದನಕಾರಿ ಪೋಸ್ಟ್ ಹಾಕುತ್ತಿದ್ದ ಹಿಂದು ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಿದ್ದಾರೂಢ ಶ್ರೀಕಾಂತ್ ಬಂಧಿತ. ಈತನನ್ನು ಬಾಗಲಕೋಟೆ ಸಿಇಎನ್ ಪೊಲೀಸರು ಅರೆಸ್ಟ್ ಮಾಡಿದ್ಧಾರೆ. ಬಂಧಿತ ಆರೋಪಿ ಮುಸ್ತಾಕ್ ಅಲಿ ಹೆಸರಲ್ಲಿ ಹಿಂದುಗಳನ್ನು ದ್ವೇ಼ಷಿಸಿ ಪೋಸ್ಟ್ ಹಾಕುತ್ತಿದ್ದ. ಈ ಬಗ್ಗೆ ಹಿಂದುಪರ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿಯ ಬಗ್ಗೆ ಮಾಹಿತಿ ಕಲೆಹಾಕಿ, ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಆರೋಪಿ ಸಿದ್ದಾರೂಢ ಶ್ರೀಕಾಂತ್ ಬಾಗಲಕೋಟೆಯ ಖಾಸಗಿ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದಾನೆ. ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸಿದ್ದಿಕುರಬೇಟ ಗ್ರಾಮದ ನಿವಾಸಿ. ಶಿವಮೊಗ್ಗದಲ್ಲಿ ಹರ್ಷ ಕೊಲೆ ಬಳಿಕ ಈ ರೀತಿ ಪೋಸ್ಟ್ ಹಾಕಲು ಆರಂಭಿಸಿದ್ದ.
ಹಿಂದೂಗಳ ಬಗ್ಗೆ ಹೆಚ್ಚು ಒಲವು ಹೊಂದಿದ್ದು ಇಂತಹ ಪೋಸ್ಟ್ ಹಾಕಿ ಹಿಂದೂಗಳನ್ನು ಒಗ್ಗಟ್ಟಾಗಿಸಲು ಪ್ರಯತ್ನ ಮಾಡುತ್ತಿದ್ದೆ ಎಂದು ವಿಚಾರಣೆ ವೇಳೆ ಹೇಳಿರೋದಾಗಿ ತಿಳಿದು ಬಂದಿದೆ. ಇನ್ನು ಈತ ತನ್ನ ನಕಲಿ ಖಾತೆಗೆ “ಪಾಕಿಸ್ತಾನಿ ಮುಸ್ಲಿಂ” ಎಂದು ಗೂಗಲ್ ಸರ್ಚ್ ಮಾಡಿ ಟೋಪಿ ಹಾಕಿದ ಭಾರತೀಯ ಮುಸ್ಲಿಮನಂತೆ ಕಾಣುವ ಯಾರದ್ದೋ ಫೋಟೊ ಹಾಕಿದ್ದ.

ಎಷ್ಟೇ ಬುದ್ದಿವಂತಿಕೆ ಉಪಯೋಗಿಸಿದರೂ ನಾವು ಬಿಡೋದಿಲ್ಲ. ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸ ಯಾರೂ ಮಾಡಬಾರದು ಎಂದು ಬಾಗಲಕೋಟೆ ಎಸ್ ಪಿ ಲೋಕೇಶ್ ಜಗಲಾಸರ್ ಹೇಳಿದ್ದಾರೆ.
Bagalkot Bank employee arrested for creating derogatory Facebook account and creating communal dispute.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am