ಬ್ರೇಕಿಂಗ್ ನ್ಯೂಸ್
25-03-22 07:27 pm Bengaluru Correspondent ಕ್ರೈಂ
ಬೆಂಗಳೂರು, ಮಾ.25: ಬಾಡಿಗೆ ನೀಡಿದ್ದ ಕಟ್ಟಡದಲ್ಲಿ ಮನೆ ಮಾಲೀಕನಿಗೆ ತಿಳಿಯದೆ ಅನೈತಿಕ ಚಟುವಟಿಕೆ ನಡೆಯುತ್ತಿದ್ದರೆ, ಅದಕ್ಕೆ ಮನೆ ಮಾಲೀಕನನ್ನು ಜವಾಬ್ದಾರಿಯಾಗಿಸಿ ಮಾನವ ಕಳ್ಳ ಸಾಗಣಿಕೆ ಆರೋಪದಲ್ಲಿ ಪ್ರಕರಣ ದಾಖಲಿಸುವಂತಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ.
ನ್ಯಾಯಾಧೀಶ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಬಗ್ಗೆ ತೀರ್ಪು ನೀಡಿದ್ದು, ಚಂದ್ರಾ ಲೇಔಟ್ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಅನ್ನು ವಜಾ ಮಾಡಿದೆ. ನಾಗರಭಾವಿ ನಿವಾಸಿ ಪ್ರಭುರಾಜ್ ಎಂಬವರು ತನ್ನ ವಿರುದ್ಧ ಪೊಲೀಸರು ದಾಖಲಿಸಿದ್ದ ಪ್ರಕರಣವನ್ನು ವಜಾ ಮಾಡುವಂತೆ ಕೋರಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.
ಮಾನವ ಕಳ್ಳಸಾಗಣೆ ನಿಯಂತ್ರಣ ಕಾಯ್ದೆ 3(2) ಬಿ ಪ್ರಕಾರ, ಮನೆ ಮಾಲೀಕ ತನ್ನ ಬಾಡಿಗೆ ಕಟ್ಟಡದಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿರುವುದನ್ನು ತಿಳಿದಿದ್ದರೆ, ಪ್ರಕರಣ ದಾಖಲಿಸಿಕೊಳ್ಳಬಹುದು. ಸದ್ರಿ ಪ್ರಕರಣದಲ್ಲಿ ಮನೆ ಮಾಲೀಕ ತನ್ನ ಬಾಡಿಗೆ ಕಟ್ಟಡದಲ್ಲಿ ಏನು ಆಗುತ್ತಿದೆ ಅನ್ನುವುದರ ಅರಿವು ಹೊಂದಿರಲಿಲ್ಲ. ಅಲ್ಲದೆ, ಮನೆ ಮಾಲೀಕ ಅದೇ ಜಾಗದಲ್ಲಿ ವಾಸವನ್ನೂ ಮಾಡುತ್ತಿರಲಿಲ್ಲ. ಈ ಬಗ್ಗೆ ಪೊಲೀಸರು ಹಾಕಿರುವ ಚಾರ್ಜ್ ಶೀಟ್ ನಲ್ಲಿಯೂ ಉಲ್ಲೇಖಿಸಿದ್ದು, ಇದರಂತೆ ಅರ್ಜಿದಾರ ವ್ಯಕ್ತಿಯ ವಿರುದ್ಧ ಕೇಸು ದಾಖಲಿಸಿದರೆ ಆತನಿಗೆ ವಿನಾಕಾರಣ ಕಿರುಕುಳ ನೀಡಿದಂತಾಗುತ್ತದೆ. ಅಲ್ಲದೆ, ಕಾನೂನಿನ ದುರುಪಯೋಗ ಆಗುತ್ತದೆ ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ಹೇಳಿದ್ದಾರೆ.
ಅರ್ಜಿದಾರ ವ್ಯಕ್ತಿ ತನ್ನ ಕಟ್ಟಡವನ್ನು 2019ರಲ್ಲಿ ಬಾಡಿಗೆಗೆ ಕೊಟ್ಟಿದ್ದರು. 2020ರಲ್ಲಿ ಅಲ್ಲಿಗೆ ದಾಳಿ ನಡೆಸಿದ್ದ ಪೊಲೀಸರು ವೇಶ್ಯಾವಾಟಿಕೆ ನಡೆಯುತ್ತಿರುವುದನ್ನು ಪತ್ತೆ ಮಾಡಿದ್ದರು. ಆನಂತರ, ಮನೆ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಿಸಿದ್ದರು. ಇದನ್ನು ಪ್ರಶ್ನಿಸಿ ಮನೆ ಮಾಲೀಕ ಪ್ರಭುರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದು ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿದ್ದರು.
In an important development, the Karnataka High Court has ruled that if the house owner is not aware of a prostitution racket being run in the premises given on rent, then he is not liable to be prosecuted under the Prevention of Human Trafficking Act.The single bench headed by Justice M. Nagaprasanna gave the verdict on Thursday quashing the FIR in this regard against the house owner Prabhuraj, a resident of Nagarbhavi in Bengaluru.
26-06-25 12:44 pm
Bangalore Correspondent
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
26-06-25 12:02 pm
Mangalore Correspondent
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
26-06-25 12:42 am
HK News Desk
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm