ಬ್ರೇಕಿಂಗ್ ನ್ಯೂಸ್
30-03-22 12:26 pm Bengaluru Correspondent ಕ್ರೈಂ
ಬೆಂಗಳೂರು, ಮಾ.30: ರಾಜಧಾನಿ ಬೆಂಗಳೂರಿಗೆ ಈಜು ತರಬೇತಿಗೆ ಬಂದಿದ್ದ ನಾಲ್ವರು ದೆಹಲಿ ಮೂಲದ ಆಜು ಪಟುಗಳು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರಗೈದ ಘಟನೆ ನಡೆದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸರು ನಾಲ್ವರನ್ನೂ ಬಂಧಿಸಿದ್ದಾರೆ.
ರಜತ್, ಶಿವರಾಮ್, ದೇವ್ ಸಾರೋಲ್, ಯೋಗೀಶ್ ಕುಮಾರ್ ಬಂಧಿತ ಯುವಕರು. ಇವರು ದೆಹಲಿ ಮೂಲದ ವೃತ್ತಿಪರ ಈಜು ಪಟುಗಳಾಗಿದ್ದು, ಹೆಚ್ಚಿನ ಈಜು ತರಬೇತಿ ಪಡೆಯುವ ಸಲುವಾಗಿ ಬೆಂಗಳೂರಿಗೆ ಬಂದಿದ್ದರು. ಈ ವೇಳೆ, ರಜತ್ ಡೇಟಿಂಗ್ ಏಪ್ ಮೂಲಕ ಪಶ್ಚಿಮ ಬಂಗಾಳ ಮೂಲದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ಆನಂತರ ಸಲುಗೆ ಬೆಳೆದು ವಾರದ ಹಿಂದೆ ರಜತ್ ಆಕೆಯನ್ನು ಪಾರ್ಟಿ ಮಾಡುವುದಕ್ಕಾಗಿ ತನ್ನ ರೂಮಿಗೆ ಕರೆದಿದ್ದ. ಈ ವೇಳೆ, ಪಾರ್ಟಿ ಮುಗಿಸಿದ ಬಳಿಕ ರಜತ್ ಮತ್ತು ಆತನ ಇತರ ಗೆಳೆಯರು ಸೇರಿ ಯುವತಿಯ ಮೇಲೆರಗಿ ಸರಣಿ ಅತ್ಯಾಚಾರ ನಡೆಸಿದ್ದಾರೆ.
ಯುವತಿ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ತನಿಖೆ ನಡೆಸಿದ ಪೊಲೀಸರು ನಾಲ್ವರು ಯುವಕರನ್ನೂ ಬಂಧಿಸಿದ್ದಾರೆ. ಆರೋಪಿಗಳು ನಾಲ್ವರು ಕೂಡ ರಾಷ್ಟ್ರ ಮಟ್ಟದ ಈಜು ಪಟುಗಳಾಗಿದ್ದು, ಕ್ಷಣಿಕ ಸುಖದ ಬೆನ್ನತ್ತಿ ಹೋಗಿ ಜೈಲು ಪಾಲಾಗಿದ್ದಾರೆ. ರಜತ್ ಮತ್ತು ಯುವತಿ ಗೆಳೆತನ ಹೊಂದಿದ್ದು, ಅದೇ ಹಿನ್ನೆಲೆಯಲ್ಲಿ ಆಕೆ ಯುವಕನ ಮನೆಗೆ ಬಂದಿದ್ದಳು. ಅಲ್ಲಿ ಇತರ ಯುವಕರು ಸೇರಿ ಆಕೆಯ ಮೇಲೆರಗಿದ್ದು ಪೊಲೀಸ್ ಠಾಣೆ ಮೆಟ್ಟಿಲೇರುವಂತಾಗಿದೆ.
Sanjaya Nagar police have arrested four national level swimmers who allegedly gang-raped a young woman who was introduced to her on a social networking site.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am