ಬ್ರೇಕಿಂಗ್ ನ್ಯೂಸ್
03-04-22 05:25 pm Mangalore Correspondent ಕ್ರೈಂ
ಮಂಗಳೂರು, ಎ.3 : ಮಹಿಳೆಯೊಬ್ಬರ ಮೈಗೆ ಕೈ ಮಾಡಿದ್ದಲ್ಲದೆ, ಆಕೆಗೆ ದೈಹಿಕ ಹಲ್ಲೆಗೈದ ಆರೋಪದಲ್ಲಿ ಸಾಮಾಜಿಕ ಕಾರ್ಯಕರ್ತ ಆಸಿಫ್ ಆಪತ್ಬಾಂಧವ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಮೂಲತಃ ಶಿವಮೊಗ್ಗ ಮೂಲದ ವನಜಾ ಎಂಬ ಮಹಿಳೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಕ್ರಮ ಜರುಗಿಸಿದ್ದಾರೆ. ದೂರಿನ ಪ್ರಕಾರ, ಮಹಿಳೆಯು ಆಸಿಫ್ ಅವರ ಮೂಲ್ಕಿಯಲ್ಲಿರುವ ಮೈಮೂನ ಫೌಂಡೇಶನ್ ಅಡಿ ಕಾರ್ಯ ನಿರ್ವಹಿಸುವ ಆಶ್ರಮದಲ್ಲಿ ಕಳೆದ ಒಂದು ವರ್ಷದಿಂದ ಆಶ್ರಯ ಪಡೆದಿದ್ದರು. ಈ ವೇಳೆ ಅಲ್ಲಿ ಆಶ್ರಮ ನೋಡಿಕೊಳ್ಳುತ್ತಿದ್ದ ಶಶಿಧರ್ ಎಂಬಾತ ಹಣಕಾಸು ವಂಚನೆ ಮಾಡಿ ಪರಾರಿಯಾಗಿದ್ದ. ಆತನಿಗೆ ಮಹಿಳೆ ಸಹಾಯ ಮಾಡಿದ್ದಾಳೆ ಎನ್ನುವ ಆರೋಪದಲ್ಲಿ ಆಸಿಫ್, ಶಿವಲಿಂಗ ಮತ್ತು ಮಹಮ್ಮದ್ ಅಫ್ತಾಬ್ ಸೇರಿ ಹಲ್ಲೆಗೈದು ಮಾನಸಿಕ ಕಿರುಕುಳ ನೀಡಿದ್ದಾರೆ.
ಮಹಿಳೆ ವನಜಾ ಈ ಹಿಂದೆ ಮಂಗಳೂರಿನ ಆಸ್ಪತ್ರೆಯಲ್ಲಿ ಹೋಮ್ ನರ್ಸ್ ಆಗಿದ್ದು ಕೊರೊನಾ ಬಳಿಕ ಕೆಲಸ ಕಳಕೊಂಡು ಕೆಲಸಕ್ಕಾಗಿ ಪಂಪ್ವೆಲ್ ನಲ್ಲಿ ಅಂಗಡಿ ಹೊಂದಿರುವ ಶಿವಲಿಂಗ ಬಳಿಗೆ ಹೋಗಿದ್ದಳು. ಶಿವಲಿಂಗ, ಬಳಿಕ ಆಸಿಫ್ ಗೆ ಮಾಹಿತಿ ನೀಡಿ ಆಶ್ರಮಕ್ಕೆ ಸೇರಿಸುವಂತೆ ಸಲಹೆ ನೀಡಿದ್ದ. ಅದರಂತೆ ಆಸಿಫ್ ಮಹಿಳೆಯನ್ನು ಕರೆದೊಯ್ದು ಆಶ್ರಮದಲ್ಲಿ ಆಶ್ರಯ ನೀಡಿದ್ದರು. ಈ ವೇಳೆ, ಆಶ್ರಮದ ಹಣಕಾಸು ವಿಚಾರದಲ್ಲಿ ವಂಚನೆ ಆಗಿದ್ದರಿಂದ ಮಹಿಳೆ ಮತ್ತು ಶಶಿಧರ್ ಬಳಿ ಆಸಿಫ್ ಪ್ರಶ್ನೆ ಮಾಡಿದ್ದರು.


ಹಣ ಕೇಳಿ, ವಿಕೆಟ್ ಮತ್ತು ಬೆಲ್ಟ್ ನಲ್ಲಿ ಹೊಡೆದಿದ್ದಾರೆಂದು ಮಹಿಳೆ ಆರೋಪಿಸಿದ್ದು ಬಳಿಕ ಆಕೆಯನ್ನು ಎಜೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಮಹಡಿಯಿಂದ ಬಿದ್ದು ಗಾಯಗೊಂಡಿರುವುದಾಗಿ ಸುಳ್ಳು ಹೇಳಲು ಆಸಿಫ್ ಹೇಳಿದ್ದ. ಇಲ್ಲದಿದ್ದರೆ ಜೀವ ಸಹಿತ ಬಿಡುವುದಿಲ್ಲ ಎಂದು ಆಸಿಫ್ ಬೆದರಿಕೆ ಹಾಕಿದ್ದು ಚಿಕಿತ್ಸೆ ನೀಡಿದ್ದ ವೈದ್ಯರು ಕೈಗೆ ಪೆಟ್ಟು ಬಿದ್ದ ಜಾಗಕ್ಕೆ ಪ್ಲಾಸ್ಟರ್ ಹಾಕಿದ್ದರು. ಕೈಗೆ ಬಿದ್ದ ಪೆಟ್ಟಿನ ಬಗ್ಗೆ ವೈದ್ಯರಿಗೆ ಅನುಮಾನ ಬಂದಿತ್ತು. ಬಳಿಕ ಮಹಿಳೆ ಪಾಂಡೇಶ್ವರ ಠಾಣೆಯಲ್ಲಿ ದೂರು ನೀಡಿದ್ದು ಆಸಿಫ್, ಶಿವಲಿಂಗ ಮತ್ತು ಅಫ್ತಾಬ್ ಸೇರಿ ಹಲ್ಲೆಗೈದ ಬಗ್ಗೆ ಪ್ರಕರಣ ದಾಖಲಾಗಿದೆ. ಮಾನಭಂಗ ಯತ್ನ, ಕೊಲೆ ಬೆದರಿಕೆ, ಹಲ್ಲೆಗೈದ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
The Pandeshwar Women’s police have arrested three persons including Asif Apathbandava for assaulting a woman at the Maimuna Foundation on April 2. The arrested have been identified as Mohammed Asif Apathbandava (39) from Mulki Karnad, Shivaling (40) from Pumpwell and Aftab (32) from Mulki.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm