ಬ್ರೇಕಿಂಗ್ ನ್ಯೂಸ್
05-04-22 09:18 pm Bengaluru Correspondent ಕ್ರೈಂ
ಬೆಂಗಳೂರು, ಎ.5: ರಾಬರಿ ಪ್ರಕರಣದಲ್ಲಿ ಮಂಗಳೂರು ಮೂಲದ ಇಬ್ಬರು ರೌಡಿಶೀಟರ್ ಗಳನ್ನು ಬಂಧಿಸಲು ತೆರಳಿದ್ದ ಪಿಎಸ್ಐ ಒಬ್ಬರ ಮೇಲೆ ಚಾಕು ಇರಿದು ಕೊಲ್ಲಲು ಯತ್ನಿಸಿದ ಘಟನೆ ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೊತ್ತನೂರು ಠಾಣೆ ವ್ಯಾಪ್ತಿಯಲ್ಲಿ ಮಾರ್ಚ್ 26ರಂದು ಕಾರನ್ನು ಅಡ್ಡಗಟ್ಟಿ ಅದರಲ್ಲಿದ್ದ ಮಹಿಳೆಯನ್ನು ರಾಬರಿ ಮಾಡಿದ್ದಲ್ಲದೆ, ಆಕೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿತ್ತು. ಈ ಬಗ್ಗೆ ದೂರು ದಾಖಲಾಗಿದ್ದರಿಂದ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದರು.
ಕೊತ್ತನೂರು ಠಾಣೆಯ ಪಿಎಸ್ಐ ಉಮೇಶ್, ಎಸಿಪಿ ರಂಗಪ್ಪ ನೇತೃತ್ವದಲ್ಲಿ ಇಂದು ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯ ನಿಗೂಢ ಸ್ಥಳದಲ್ಲಿ ಅಡಗಿಕೊಂಡಿದ್ದ ಇಬ್ಬರು ರೌಡಿಶೀಟರ್ ಗಳ ಬಂಧನಕ್ಕೆ ಬಲೆಬೀಸಿದ್ದರು. ಈ ವೇಳೆ, ಪಿಎಸ್ಐ ಮೇಲೆ ಇಬ್ಬರು ಸೇರಿ ಚಾಕುವಿನಿಂದ ಇರಿದು ಹತ್ಯೆಗೆ ಯತ್ನ ಮಾಡಿದ್ದಾರೆ. ಈ ವೇಳೆ, ಇನ್ನೊಬ್ಬ ಎಸ್ಐ ಚನ್ನೇಶ್ ಕೂಡಲೇ ಜಾಗೃತಗೊಂಡು ಆರೋಪಿಗಳಿಬ್ಬರ ಕಾಲಿಗೆ ಗುಂಡು ಹಾರಿಸಿ, ಅರೆಸ್ಟ್ ಮಾಡಿದ್ದಾರೆ.
ಪಿಎಸ್ ಐ ಉಮೇಶ್ ಎಡ ಭಾಗದ ಎದೆಗೆ ಚಾಕು ಇರಿಯಲಾಗಿದ್ದು, ಅವರನ್ನು ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಆರೋಪಿಗಳು ಮೂಲತಃ ಮಂಗಳೂರಿನವರಾಗಿದ್ದು ಅಶಿಕ್ ಮತ್ತು ಇಸಾಕ್ ಎಂದು ಗುರುತಿಸಲಾಗಿದೆ.
Robbery and assault on police constable in Bangalore by two rowdy sheeters of Mangalore. Two who tried to escape we're shot to their legs.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm