ಬ್ರೇಕಿಂಗ್ ನ್ಯೂಸ್
06-04-22 09:38 pm Mangalore Correspondent ಕ್ರೈಂ
ಮಂಗಳೂರು, ಎ.6: ಇತ್ತೀಚೆಗೆ ಉಳ್ಳಾಲದ ಮೀನಿನ ವ್ಯಾಪಾರಿಯನ್ನು ಅಡ್ಡಗಟ್ಟಿ ತಲವಾರಿನಲ್ಲಿ ಹಲ್ಲೆಗೈದು ಹಣ ದರೋಡೆಗೈದ ಪ್ರಕರಣದ ಆರೋಪಿಗಳೇ ಬೆಂಗಳೂರಿನಲ್ಲಿ ಪೊಲೀಸರು ಗುಂಡಿಕ್ಕಿ ಬಂಧಿಸಲ್ಪಟ್ಟವರು ಅನ್ನೋದು ತಿಳಿದುಬಂದಿದೆ. ಬೆಂಗಳೂರಿನ ಕೊತ್ತನೂರು ಠಾಣೆಯ ಪೊಲೀಸರು ಉಡುಪಿ ಮೂಲದ ಇಬ್ಬರು ದರೋಡೆಕೋರರನ್ನು ಸೋಮವಾರ ಬಂಧಿಸಿದ್ದರು. ಇದೀಗ ತಿಂಗಳ ಹಿಂದೆ ಉಳ್ಳಾಲದಲ್ಲಿ ದರೋಡೆ ನಡೆಸಿದವರೂ ಅವರೇ ಅನ್ನೋದು ತನಿಖೆಯಲ್ಲಿ ಗೊತ್ತಾಗಿದೆ.
ಉಡುಪಿ ಮೂಲದ ಮಹಮ್ಮದ್ ಆಶಿಕ್ (22) ಮತ್ತು ಕುಂದಾಪುರ ಮೂಲದ ಇಸಾಕ್ (21) ಎಂಬ ಇಬ್ಬರನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಸೋಮವಾರ ಸಂಜೆ ಕಾರಿನಲ್ಲಿ ಸಾಗುತ್ತಿದ್ದಾಗ ಕೊತ್ತನೂರು ಠಾಣೆ ಇನ್ಸ್ ಪೆಕ್ಟರ್ ಚೆನ್ನೇಶ್ ಮತ್ತು ಪಿಎಸ್ಐ ಉಮೇಶ್ ಸೆರೆಹಿಡಿಯಲು ಯತ್ನಿಸಿದಾಗ, ಆರೋಪಿಗಳು ತಲವಾರಿನಲ್ಲಿ ಉಮೇಶ್ ಮೇಲೆ ಹಲ್ಲೆ ನಡೆಸಿದ್ದರು. ಈ ವೇಳೆ, ಚೆನ್ನೇಶ್ ತನ್ನಲ್ಲಿದ್ದ ರಿವಾಲ್ವರ್ ನಲ್ಲಿ ಆರೋಪಿಗಳಿಬ್ಬರ ಕಾಲಿಗೆ ಗುಂಡು ಹಾರಿಸಿದ್ದು, ಬಳಿಕ ಬಂಧಿಸಿದ್ದಾರೆ. ಸದ್ಯಕ್ಕೆ ಇಬ್ಬರನ್ನೂ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ಮಹಿಳೆಯೊಬ್ಬರು ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಅಡ್ಡಗಟ್ಟಿ ಆಕೆಯ ಬಳಿಯಿಂದ ಎಟಿಎಂ ಕಾರ್ಡ್ ಪಡೆದು ಹಣ ಎಗರಿಸಿದ್ದಲ್ಲದೆ, ಆಕೆಯ ಸರವನ್ನೂ ಕಿತ್ತುಕೊಂಡಿದ್ದರು. ಬಳಿಕ ಲೈಂಗಿಕ ಕಿರುಕುಳ ನೀಡಿ, ಬೆಳಂದೂರಿನ ವೈಟ್ ಫೀಲ್ಡ್ ಬಳಿ ಯುವತಿಯನ್ನು ಬಿಟ್ಟಿದ್ದರು. ಯುವತಿ ಮರುದಿನ ಕೊತ್ತನೂರು ಠಾಣೆಯಲ್ಲಿ ದೂರು ನೀಡಿದ್ದರು. ಡಕಾಯಿತಿ ಬಗ್ಗೆ ಮಾಹಿತಿ ಆಧರಿಸಿ ಪೊಲೀಸರು ಮಂಗಳೂರು, ಉಡುಪಿ ಮತ್ತು ಬೆಂಗಳೂರಿನಲ್ಲಿ ಜಾಲ ಬೀಸಿದ್ದರು. ಸೋಮವಾರ ಸಂಜೆ ಖಚಿತ ಮಾಹಿತಿ ಆಧರಿಸಿ ಬೆಂಗಳೂರಿನಲ್ಲಿಯೇ ಕಾರಿನಲ್ಲಿ ಸಾಗುತ್ತಿದ್ದಾಗಲೇ ಆರೋಪಿಗಳನ್ನು ಸೆರೆಹಿಡಿದಿದ್ದಾರೆ.

ಈ ಬಗ್ಗೆ ಮಂಗಳೂರು ಎಸಿಪಿ ದಿನಕರ ಶೆಟ್ಟಿ ಬಳಿ ಮಾಹಿತಿ ಕೇಳಿದಾಗ, ತಿಂಗಳ ಹಿಂದೆ ಮೀನಿನ ವ್ಯಾಪಾರಿ ದರೋಡೆ ಪ್ರಕರಣದಲ್ಲಿ ಶಾಮೀಲಾದವರೇ ಬೆಂಗಳೂರಿನಲ್ಲಿ ಪೊಲೀಸರು ಸೆರೆಹಿಡಿದ ಆರೋಪಿಗಳು ಅನ್ನೋದನ್ನು ತಿಳಿಸಿದ್ದಾರೆ. ಅಲ್ಲದೆ, ಅಲ್ಲಿಂದ ಬಾಡಿ ವಾರೆಂಟ್ ಪಡೆದು ಸದ್ಯದಲ್ಲೇ ಆರೋಪಿಗಳನ್ನು ವಶಕ್ಕೆ ಪಡೆಯುತ್ತೇವೆ ಎಂದು ಹೇಳಿದ್ದಾರೆ. ಕಳೆದ ಮಾರ್ಚ್ 5ರಂದು ಬೆಳಗ್ಗೆ ಉಳ್ಳಾಲದ ಮೀನಿನ ವ್ಯಾಪಾರಿ ತನ್ನ ಟೆಂಪೋದಲ್ಲಿ ಮಂಗಳೂರಿನ ದಕ್ಕೆಗೆ ಬರುತ್ತಿದ್ದಾಗ, ಆಡುಂಕುದ್ರು ಹೆದ್ದಾರಿಯಲ್ಲಿ ಟೆಂಪೋ ಅಡ್ಡಗಟ್ಟಲಾಗಿತ್ತು. ಆಬಳಿಕ ತಲವಾರು ತೋರಿಸಿ, ವ್ಯಾಪಾರಿ ಬಳಿಯಿದ್ದ ಎರಡು ಲಕ್ಷ ರೂಪಾಯಿ ಹಣದ ಕಂತೆಯನ್ನು ಬಲವಂತದಿಂದ ಕಿತ್ತುಕೊಂಡಿದ್ದರು. ಈ ವೇಳೆ, ತಲವಾರನ್ನು ಕೈಯಿಂದ ಹಿಡಿದಿದ್ದರಿಂದ ವ್ಯಾಪಾರಿಯ ಕೈ ಅಂಗೈಗೆ ಗಾಯವಾಗಿ ರಕ್ತ ಕೋಡಿ ಹರಿದಿತ್ತು.
ದರೋಡೆ ತಂಡದಲ್ಲಿ ಇನ್ನೂ ಹಲವರು ಇರುವ ಸಂಶಯವಿದ್ದು, ಈ ತಂಡ ತಮ್ಮನ್ನು ಟೀಮ್ ಗರುಡ-900 ಎಂದು ಕರೆದುಕೊಳ್ಳುತ್ತಿದ್ದರು. ದರೋಡೆ, ಡಕಾಯಿತಿ, ಕಾರುಗಳನ್ನು ಅಡ್ಡಗಟ್ಟಿ ಸುಲಿಗೆ, ಕಳ್ಳತನ ಮಾದರಿಯ ಅಪರಾಧ ಕೃತ್ಯಗಳಲ್ಲಿ ತೊಡಗಿಸಿದ್ದರು. ಹತ್ತಕ್ಕೂ ಹೆಚ್ಚು ಪ್ರಕರಣಗಳಲ್ಲಿ ಇವರ ಬಂಧನಕ್ಕಾಗಿ ವಾರಂಟ್ ಹೊರಡಿಸಲಾಗಿತ್ತು. ಈಗ ಬಂಧಿಸಲ್ಪಟ್ಟವರು ಮೂಲತಃ ಉಡುಪಿಯವರಾಗಿದ್ದರೂ, ಉಪ್ಪಿನಂಗಡಿಯ ತಮ್ಮ ಸಂಬಂಧಿಕರ ಮನೆಯಲ್ಲೇ ಹೆಚ್ಚು ಇರುತ್ತಿದ್ದರು.
Fishermen attacked with sword and looted of lakhs two arrested in Bangalore after police firing.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 12:41 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm