ಬ್ರೇಕಿಂಗ್ ನ್ಯೂಸ್
08-04-22 05:01 pm HK Desk news ಕ್ರೈಂ
ಲಕ್ನೋ, ಎ.8: ಗೋರಖಪುರದ ಗೋರಖನಾಥ ದೇವಸ್ಥಾನಕ್ಕೆ ನುಗ್ಗಿ ಪೊಲೀಸರಿಗೆ ತಲವಾರಿನಲ್ಲಿ ಹಲ್ಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರ ಮೇಲೆ ತಲವಾರು ಬೀಸಿದ್ದ ಆರೋಪಿ ಅಹ್ಮದ್ ಮುರ್ತಾಜಾ ಅಬ್ಬಾಸಿ ಐಸಿಸ್ ಉಗ್ರರಿಂದ ಹನಿಟ್ರ್ಯಾಪ್ ಗೆ ಒಳಗಾಗಿದ್ದ ಎನ್ನುವ ಮಾಹಿತಿ ತನಿಖಾಧಿಕಾರಿಗಳಿಗೆ ಸಿಕ್ಕಿದೆ. ಹೀಗಾಗಿ ಪ್ರಕರಣದ ತನಿಖೆ ಆತನ ಭಯೋತ್ಪಾದನ ಸಂಘಟನೆ ಜೊತೆಗಿನ ನಂಟಿನತ್ತ ತಿರುಗಿದೆ.
ಇಸ್ಲಾಮಿಕ್ ಸ್ಟೇಟ್ ಉಗ್ರರು ಮುರ್ತಾಜಾ ಅಬ್ಬಾಸಿಯನ್ನು ಹನಿ ಟ್ರ್ಯಾಪ್ ಮಾಡಿದ್ದರು ಎನ್ನಲಾಗಿದೆ. ಯುವತಿಯೊಬ್ಬಳು ತನ್ನನ್ನು ಐಎಸ್ ಉಗ್ರರು ಹಿಡಿದಿಟ್ಟಿದ್ದು, ನಿನ್ನ ಸಹಾಯ ಬೇಕೆಂದು ಮೈಲ್ ಮಾಡಿದ್ದಳು. ಅದರಂತೆ, ಅಬ್ಬಾಸಿ 40 ಸಾವಿರ ರೂ. ಹಣವನ್ನು ಆಕೆಗೆ ಕಳಿಸಿದ್ದ. ಆನಂತರ ಇಬ್ಬರ ಇಮೇಲ್ ಸಂಭಾಷಣೆ ಮುಂದುವರಿದಿತ್ತು. ಅಲ್ಲದೆ, ಯುವತಿಯು ಭಾರತಕ್ಕೆ ಬಂದು ಭೇಟಿಯಾಗುವುದಾಗಿ ಹೇಳಿದ್ದಳು.
ಯುವತಿಗೆ ಮೂರು ಬಾರಿ ಹಣ ಕಳಿಸಿದ್ದನ್ನು ಅಬ್ಬಾಸಿ ಒಪ್ಪಿಕೊಂಡಿದ್ದಾನೆ. ಐಸಿಸ್ ವಿಚಾರಗಳಿಂದ ಪ್ರೇರಿತನಾಗಿದ್ದಲ್ಲದೆ, ಸದ್ಯದಲ್ಲೇ ಸಂಘಟನೆ ಸೇರುವುದಾಗಿ ಭರವಸೆ ನೀಡಿದ್ದ. ಅದಕ್ಕೆ ತಯಾರಿಯನ್ನೂ ನಡೆಸಿದ್ದ. ಮುಸ್ಲಿಮರ ಮೇಲಿನ ಹಲ್ಲೆ ಘಟನೆಗಳಿಂದ ಪ್ರಚೋದನೆಗೊಂಡು ಭಾರತ ಸರಕಾರದ ವಿರುದ್ಧ ನಿಂತಿದ್ದ. ಅಲ್ಲದೆ, ಕೇಂದ್ರ ಸರಕಾರ ತರಲುದ್ದೇಶಿಸಿದ್ದ ಸಿಎಎ ಕಾಯ್ದೆಯನ್ನೂ ವಿರೋಧಿಸಿದ್ದ. ಪೊಲೀಸರ ವಿಚಾರಣೆ ವೇಳೆ ಈ ಬಗ್ಗೆ ಅಬ್ಬಾಸಿ ಹೇಳಿದ್ದಾನೆ.
ಎಪ್ರಿಲ್ 3ರಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಸೇರಿದ ಗೋರಖನಾಥ ದೇವಸ್ಥಾನಕ್ಕೆ ನುಗ್ಗಿದ್ದ ಅಹ್ಮದ್ ಮುರ್ತಾಜ ಅಬ್ಬಾಸಿ ಅಲ್ಲಿದ್ದ ಇಬ್ಬರು ಪೊಲೀಸರಿಗೆ ಹಲ್ಲೆ ಮಾಡಿದ್ದ. ಆಬಳಿಕ ಇತರೇ ಪೊಲೀಸರು ಸೇರಿ ಅಬ್ಬಾಸಿಯನ್ನು ಹಿಡಿದು ಬಂಧಿಸಿದ್ದರು. ಸಿಎಂ ಯೋಗಿ ಆದಿತ್ಯನಾಥ್ ಘಟನೆ ಬಗ್ಗೆ ವಿಶೇಷ ತನಿಖೆಗೆ ಆದೇಶ ಮಾಡಿದ್ದರು. ಅಲ್ಲದೆ, ಘಟನೆಯನ್ನು ಭಯೋತ್ಪದನಾ ಕೃತ್ಯ ಎಂದು ಹೇಳಿದ್ದರು. ಭಯೋತ್ಪಾದನಾ ವಿರೋಧಿ ದಳಕ್ಕೆ ತನಿಖೆಯ ಹೊಣೆಯನ್ನು ಒಪ್ಪಿಸಿದ್ದರು.
A new twist has come up in the Gorakhnath temple attack case after the Uttar Pradesh Police’s anti-terrorist squad uncovered a honey-trap angle.The Gorakhnath temple attacker, Ahmed Murtaza Abbasi, was allegedly honey-trapped by the Islamic State. According to police sources, Abbasi had first received a mail, presumably from a woman.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm