ಬಾವಿಗೆ ಬಿದ್ದು ಮಹಿಳೆ ಮೃತ್ಯು ; ಆತ್ಮಹತ್ಯೆ ಶಂಕೆ

23-09-20 04:28 pm       Mangalore Correspondent   ಕ್ರೈಂ

ಮಹಿಳೆಯೊಬ್ಬರು ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಈಶ್ವರಮಂಗಲ ಸಾರಕೂಟೇಲು ಎಂಬಲ್ಲಿ ನಡೆದಿದೆ‌.

ಪುತ್ತೂರು, ಸೆಪ್ಟಂಬರ್ 23: ಮಹಿಳೆಯೊಬ್ಬರು ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಈಶ್ವರಮಂಗಲ ಸಾರಕೂಟೇಲು ಎಂಬಲ್ಲಿ ನಡೆದಿದೆ‌. ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.

ಮೂಲತ: ಪುತ್ತೂರು ತಾಲೂಕಿನ ಕಬಕ ನಿವಾಸಿಯಾಗಿದ್ದು ಪಡುವನ್ನೂರು ಗ್ರಾಮದ ಸಾರಕೂಟೇಲು ಎಂಬಲ್ಲಿ ವಾಸವಾಗಿರುವ ಗೋಪಾಲಕೃಷ್ಣ ಭಟ್ ಎಂಬವರ ಪತ್ನಿ ಲಲಿತಾ(65) ಮೃತಪಟ್ಟ ಮಹಿಳೆ.

ಮಂಗಳವಾರ ರಾತ್ರಿ ಲಲಿತಾ ಅವರು ಊಟ ಮಾಡಿ ಮಲಗಿದ್ದರು. ಬೆಳಗ್ಗೆ ಗೋಪಾಲಕೃಷ್ಣ ಅವರು ಎದ್ದು ನೋಡುವಾಗ ಲಲಿತಾ ನಾಪತ್ತೆಯಾಗಿದ್ದರು. ಬಳಿಕ ಹುಡುಕಾಟ ನಡೆಸಿದಾಗ ಅವರ ಮೃತದೇಹ ಮನೆಯ ಪಕ್ಕದ ಬಾವಿಯಲ್ಲಿ ಪತ್ತೆಯಾಗಿತ್ತು. ಮೃತರು ಪತಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. 

ಈಶ್ವರಮಂಗಲ ಹೊರಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Join our WhatsApp group for latest news updates (2)