ಬ್ರೇಕಿಂಗ್ ನ್ಯೂಸ್
15-04-22 08:15 pm Mangalore Correspondent ಕ್ರೈಂ
ಉಳ್ಳಾಲ, ಎ.15: ಬೆಲೆಬಾಳುವ ವಾಚ್ ಕಳವು ಆರೋಪಿಯನ್ನ ಬಂಧಿಸಲು ತೆರಳಿದ್ದ ಕೊಣಾಜೆ ಪಿಎಸ್ಐ ಶರಣಪ್ಪ ಅವರಿಗೆ ಇರಿದು ಭೂಗತನಾಗಿ, ಬೆಂಗಳೂರಲ್ಲಿ ಗೊಂಬೆ ಮಾರುತ್ತಿದ್ದ ಖತರ್ ನಾಕ್ ಖದೀಮನನ್ನು ಪೊಲೀಸರು ಬಂಧಿಸಿದ್ದಾರೆ.
ಸಾಲೆತ್ತೂರು, ಕಾಡುಮಠ ನಿವಾಸಿ ಮಹಮ್ಮದ್ ಸಾದಿಕ್(23) ಪಿಎಸ್ಐಗೆ ಇರಿದು ಪರಾರಿಯಾಗಿ ಸಿಕ್ಕಿಬಿದ್ದ ಆರೋಪಿ. ಮಂಗಳೂರಿನ ಬಂದರು ಠಾಣೆ ವ್ಯಾಪ್ತಿಯಲ್ಲಿ ಬೆಲೆ ಬಾಳುವ ವಾಚ್ ಕಳ್ಳತನ ಪ್ರಕರಣ ನಡೆದಿತ್ತು. ಕೃತ್ಯ ನಡೆಸಿದ ಆರೋಪಿ ಮಹಮ್ಮದ್ ಸಾದಿಕ್ ನಟೋರಿಯಸ್ ಆಗಿದ್ದು ಈ ಹಿಂದೆ ಕೂಡ ತನ್ನನ್ನ ಬಂಧಿಸಲು ತೆರಳಿದ್ದ ಬಂದರು ಪೊಲೀಸ್ ಠಾಣೆ ಸಿಬ್ಬಂದಿ ವಿನೋದ್ ಎಂಬವರಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದ.
ಕಳೆದ ಮಾ.23 ರ ಬುಧವಾರ ರಾತ್ರಿ ಕಳ್ಳತನ ಆರೋಪಿ ಸಾದಿಕ್ ಕೊಣಾಜೆ ಠಾಣೆ ವ್ಯಾಪ್ತಿಯ ಅರ್ಕಾಣ ಎಂಬಲ್ಲಿನ ತನ್ನ ಪತ್ನಿ ಮನೆಯಲ್ಲಿರುವುದರ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಮಾಹಿತಿ ಮೇರೆಗೆ ಕೊಣಾಜೆ ಪಿಎಸ್ಐ ಶರಣಪ್ಪ ಭಂಡಾರಿ ನೇತೃತ್ವದ ತಂಡ ಸಾದಿಕ್ ಬಂಧನಕ್ಕೆ ತೆರಳಿದ್ದ ವೇಳೆ ಪಿಎಸ್ಐಗೆ ಇರಿದು ಪರಾರಿಯಾಗಿದ್ದ. ಸಾದಿಕ್ ಪರಾರಿಯಾಗಲು ಸಹಕರಿಸಿದ್ದ ಆತನ ಸಹೋದರ ನಾಸಿರ್ ಎಂಬಾತನನ್ನ ಪೊಲೀಸರು ಬಂಧಿಸಿ ಠಾಣೆಯಲ್ಲಿ ವಿಚಾರಣೆ ನಡೆಸಿದ್ದರು.
ಚೂರಿ ಇರಿದ ಖತರ್ನಾಕ್ ಕಳ್ಳ ಸಾದಿಕ್ ಮಾತ್ರ 20 ದಿವಸ ಭೂಗತನಾಗಿದ್ದ. ಆರಂಭದಲ್ಲಿ ಗುಜರಾತಿಗೆ ಪಲಾಯನಗೈದಿದ್ದ ಆರೋಪಿ ಕಳೆದ ಬುಧವಾರ ಬೆಂಗಳೂರಿಗೆ ಆಗಮಿಸಿದ್ದ. ಬೆಂಗಳೂರಿನ ಹೆಚ್.ಎಸ್.ಆರ್. ಲೇಔಟಲ್ಲಿ ಸಾದಿಕ್ ಸ್ನೇಹಿತನೊಂದಿಗೆ ಆಟಿಕೆ ಗೊಂಬೆಗಳನ್ನು ಮಾರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು ಮಹಮ್ಮದ್ ಸಾದಿಕನ್ನ ಬಂಧಿಸಿದ್ದಾರೆ. ಬಂಧಿತ ಆರೋಪಿ ವಿರುದ್ಧ ಕೇರಳದಲ್ಲಿ ಹಲವಾರು ಪ್ರಕರಣಗಳಿವೆಯಂತೆ.
ಎಸಿಪಿ ದಿನಕರ ಶೆಟ್ಟಿ ಮಾರ್ಗದರ್ಶನದಲ್ಲಿ ಕೊಣಾಜೆ ಇನ್ಸ್ ಪೆಕ್ಟರ್ ಪ್ರಕಾಶ್ ದೇವಾಡಿಗ, ಪಿಎಸ್ಐ ಶರಣಪ್ಪ ಭಂಡಾರಿ, ಸಿಬ್ಬಂದಿಗಳಾದ ಅಶೋಕ್, ಶಿವ, ಪುರುಷೋತ್ತಮ್, ಉಮೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Mangalore Attack on Ullal PSI, two arrested in Bangalore. The two were said to be selling dolls in Bangalore. PSI was attacked with lethal weapons a few weeks ago.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 07:25 pm
HK News Desk
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm