ಬ್ರೇಕಿಂಗ್ ನ್ಯೂಸ್
15-04-22 08:15 pm Mangalore Correspondent ಕ್ರೈಂ
ಉಳ್ಳಾಲ, ಎ.15: ಬೆಲೆಬಾಳುವ ವಾಚ್ ಕಳವು ಆರೋಪಿಯನ್ನ ಬಂಧಿಸಲು ತೆರಳಿದ್ದ ಕೊಣಾಜೆ ಪಿಎಸ್ಐ ಶರಣಪ್ಪ ಅವರಿಗೆ ಇರಿದು ಭೂಗತನಾಗಿ, ಬೆಂಗಳೂರಲ್ಲಿ ಗೊಂಬೆ ಮಾರುತ್ತಿದ್ದ ಖತರ್ ನಾಕ್ ಖದೀಮನನ್ನು ಪೊಲೀಸರು ಬಂಧಿಸಿದ್ದಾರೆ.
ಸಾಲೆತ್ತೂರು, ಕಾಡುಮಠ ನಿವಾಸಿ ಮಹಮ್ಮದ್ ಸಾದಿಕ್(23) ಪಿಎಸ್ಐಗೆ ಇರಿದು ಪರಾರಿಯಾಗಿ ಸಿಕ್ಕಿಬಿದ್ದ ಆರೋಪಿ. ಮಂಗಳೂರಿನ ಬಂದರು ಠಾಣೆ ವ್ಯಾಪ್ತಿಯಲ್ಲಿ ಬೆಲೆ ಬಾಳುವ ವಾಚ್ ಕಳ್ಳತನ ಪ್ರಕರಣ ನಡೆದಿತ್ತು. ಕೃತ್ಯ ನಡೆಸಿದ ಆರೋಪಿ ಮಹಮ್ಮದ್ ಸಾದಿಕ್ ನಟೋರಿಯಸ್ ಆಗಿದ್ದು ಈ ಹಿಂದೆ ಕೂಡ ತನ್ನನ್ನ ಬಂಧಿಸಲು ತೆರಳಿದ್ದ ಬಂದರು ಪೊಲೀಸ್ ಠಾಣೆ ಸಿಬ್ಬಂದಿ ವಿನೋದ್ ಎಂಬವರಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದ.
ಕಳೆದ ಮಾ.23 ರ ಬುಧವಾರ ರಾತ್ರಿ ಕಳ್ಳತನ ಆರೋಪಿ ಸಾದಿಕ್ ಕೊಣಾಜೆ ಠಾಣೆ ವ್ಯಾಪ್ತಿಯ ಅರ್ಕಾಣ ಎಂಬಲ್ಲಿನ ತನ್ನ ಪತ್ನಿ ಮನೆಯಲ್ಲಿರುವುದರ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಮಾಹಿತಿ ಮೇರೆಗೆ ಕೊಣಾಜೆ ಪಿಎಸ್ಐ ಶರಣಪ್ಪ ಭಂಡಾರಿ ನೇತೃತ್ವದ ತಂಡ ಸಾದಿಕ್ ಬಂಧನಕ್ಕೆ ತೆರಳಿದ್ದ ವೇಳೆ ಪಿಎಸ್ಐಗೆ ಇರಿದು ಪರಾರಿಯಾಗಿದ್ದ. ಸಾದಿಕ್ ಪರಾರಿಯಾಗಲು ಸಹಕರಿಸಿದ್ದ ಆತನ ಸಹೋದರ ನಾಸಿರ್ ಎಂಬಾತನನ್ನ ಪೊಲೀಸರು ಬಂಧಿಸಿ ಠಾಣೆಯಲ್ಲಿ ವಿಚಾರಣೆ ನಡೆಸಿದ್ದರು.

ಚೂರಿ ಇರಿದ ಖತರ್ನಾಕ್ ಕಳ್ಳ ಸಾದಿಕ್ ಮಾತ್ರ 20 ದಿವಸ ಭೂಗತನಾಗಿದ್ದ. ಆರಂಭದಲ್ಲಿ ಗುಜರಾತಿಗೆ ಪಲಾಯನಗೈದಿದ್ದ ಆರೋಪಿ ಕಳೆದ ಬುಧವಾರ ಬೆಂಗಳೂರಿಗೆ ಆಗಮಿಸಿದ್ದ. ಬೆಂಗಳೂರಿನ ಹೆಚ್.ಎಸ್.ಆರ್. ಲೇಔಟಲ್ಲಿ ಸಾದಿಕ್ ಸ್ನೇಹಿತನೊಂದಿಗೆ ಆಟಿಕೆ ಗೊಂಬೆಗಳನ್ನು ಮಾರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು ಮಹಮ್ಮದ್ ಸಾದಿಕನ್ನ ಬಂಧಿಸಿದ್ದಾರೆ. ಬಂಧಿತ ಆರೋಪಿ ವಿರುದ್ಧ ಕೇರಳದಲ್ಲಿ ಹಲವಾರು ಪ್ರಕರಣಗಳಿವೆಯಂತೆ.
ಎಸಿಪಿ ದಿನಕರ ಶೆಟ್ಟಿ ಮಾರ್ಗದರ್ಶನದಲ್ಲಿ ಕೊಣಾಜೆ ಇನ್ಸ್ ಪೆಕ್ಟರ್ ಪ್ರಕಾಶ್ ದೇವಾಡಿಗ, ಪಿಎಸ್ಐ ಶರಣಪ್ಪ ಭಂಡಾರಿ, ಸಿಬ್ಬಂದಿಗಳಾದ ಅಶೋಕ್, ಶಿವ, ಪುರುಷೋತ್ತಮ್, ಉಮೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Mangalore Attack on Ullal PSI, two arrested in Bangalore. The two were said to be selling dolls in Bangalore. PSI was attacked with lethal weapons a few weeks ago.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm