ಬ್ರೇಕಿಂಗ್ ನ್ಯೂಸ್
15-04-22 08:15 pm Mangalore Correspondent ಕ್ರೈಂ
ಉಳ್ಳಾಲ, ಎ.15: ಬೆಲೆಬಾಳುವ ವಾಚ್ ಕಳವು ಆರೋಪಿಯನ್ನ ಬಂಧಿಸಲು ತೆರಳಿದ್ದ ಕೊಣಾಜೆ ಪಿಎಸ್ಐ ಶರಣಪ್ಪ ಅವರಿಗೆ ಇರಿದು ಭೂಗತನಾಗಿ, ಬೆಂಗಳೂರಲ್ಲಿ ಗೊಂಬೆ ಮಾರುತ್ತಿದ್ದ ಖತರ್ ನಾಕ್ ಖದೀಮನನ್ನು ಪೊಲೀಸರು ಬಂಧಿಸಿದ್ದಾರೆ.
ಸಾಲೆತ್ತೂರು, ಕಾಡುಮಠ ನಿವಾಸಿ ಮಹಮ್ಮದ್ ಸಾದಿಕ್(23) ಪಿಎಸ್ಐಗೆ ಇರಿದು ಪರಾರಿಯಾಗಿ ಸಿಕ್ಕಿಬಿದ್ದ ಆರೋಪಿ. ಮಂಗಳೂರಿನ ಬಂದರು ಠಾಣೆ ವ್ಯಾಪ್ತಿಯಲ್ಲಿ ಬೆಲೆ ಬಾಳುವ ವಾಚ್ ಕಳ್ಳತನ ಪ್ರಕರಣ ನಡೆದಿತ್ತು. ಕೃತ್ಯ ನಡೆಸಿದ ಆರೋಪಿ ಮಹಮ್ಮದ್ ಸಾದಿಕ್ ನಟೋರಿಯಸ್ ಆಗಿದ್ದು ಈ ಹಿಂದೆ ಕೂಡ ತನ್ನನ್ನ ಬಂಧಿಸಲು ತೆರಳಿದ್ದ ಬಂದರು ಪೊಲೀಸ್ ಠಾಣೆ ಸಿಬ್ಬಂದಿ ವಿನೋದ್ ಎಂಬವರಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದ.
ಕಳೆದ ಮಾ.23 ರ ಬುಧವಾರ ರಾತ್ರಿ ಕಳ್ಳತನ ಆರೋಪಿ ಸಾದಿಕ್ ಕೊಣಾಜೆ ಠಾಣೆ ವ್ಯಾಪ್ತಿಯ ಅರ್ಕಾಣ ಎಂಬಲ್ಲಿನ ತನ್ನ ಪತ್ನಿ ಮನೆಯಲ್ಲಿರುವುದರ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಮಾಹಿತಿ ಮೇರೆಗೆ ಕೊಣಾಜೆ ಪಿಎಸ್ಐ ಶರಣಪ್ಪ ಭಂಡಾರಿ ನೇತೃತ್ವದ ತಂಡ ಸಾದಿಕ್ ಬಂಧನಕ್ಕೆ ತೆರಳಿದ್ದ ವೇಳೆ ಪಿಎಸ್ಐಗೆ ಇರಿದು ಪರಾರಿಯಾಗಿದ್ದ. ಸಾದಿಕ್ ಪರಾರಿಯಾಗಲು ಸಹಕರಿಸಿದ್ದ ಆತನ ಸಹೋದರ ನಾಸಿರ್ ಎಂಬಾತನನ್ನ ಪೊಲೀಸರು ಬಂಧಿಸಿ ಠಾಣೆಯಲ್ಲಿ ವಿಚಾರಣೆ ನಡೆಸಿದ್ದರು.

ಚೂರಿ ಇರಿದ ಖತರ್ನಾಕ್ ಕಳ್ಳ ಸಾದಿಕ್ ಮಾತ್ರ 20 ದಿವಸ ಭೂಗತನಾಗಿದ್ದ. ಆರಂಭದಲ್ಲಿ ಗುಜರಾತಿಗೆ ಪಲಾಯನಗೈದಿದ್ದ ಆರೋಪಿ ಕಳೆದ ಬುಧವಾರ ಬೆಂಗಳೂರಿಗೆ ಆಗಮಿಸಿದ್ದ. ಬೆಂಗಳೂರಿನ ಹೆಚ್.ಎಸ್.ಆರ್. ಲೇಔಟಲ್ಲಿ ಸಾದಿಕ್ ಸ್ನೇಹಿತನೊಂದಿಗೆ ಆಟಿಕೆ ಗೊಂಬೆಗಳನ್ನು ಮಾರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು ಮಹಮ್ಮದ್ ಸಾದಿಕನ್ನ ಬಂಧಿಸಿದ್ದಾರೆ. ಬಂಧಿತ ಆರೋಪಿ ವಿರುದ್ಧ ಕೇರಳದಲ್ಲಿ ಹಲವಾರು ಪ್ರಕರಣಗಳಿವೆಯಂತೆ.
ಎಸಿಪಿ ದಿನಕರ ಶೆಟ್ಟಿ ಮಾರ್ಗದರ್ಶನದಲ್ಲಿ ಕೊಣಾಜೆ ಇನ್ಸ್ ಪೆಕ್ಟರ್ ಪ್ರಕಾಶ್ ದೇವಾಡಿಗ, ಪಿಎಸ್ಐ ಶರಣಪ್ಪ ಭಂಡಾರಿ, ಸಿಬ್ಬಂದಿಗಳಾದ ಅಶೋಕ್, ಶಿವ, ಪುರುಷೋತ್ತಮ್, ಉಮೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Mangalore Attack on Ullal PSI, two arrested in Bangalore. The two were said to be selling dolls in Bangalore. PSI was attacked with lethal weapons a few weeks ago.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am