ಬ್ರೇಕಿಂಗ್ ನ್ಯೂಸ್
15-04-22 08:15 pm Mangalore Correspondent ಕ್ರೈಂ
ಉಳ್ಳಾಲ, ಎ.15: ಬೆಲೆಬಾಳುವ ವಾಚ್ ಕಳವು ಆರೋಪಿಯನ್ನ ಬಂಧಿಸಲು ತೆರಳಿದ್ದ ಕೊಣಾಜೆ ಪಿಎಸ್ಐ ಶರಣಪ್ಪ ಅವರಿಗೆ ಇರಿದು ಭೂಗತನಾಗಿ, ಬೆಂಗಳೂರಲ್ಲಿ ಗೊಂಬೆ ಮಾರುತ್ತಿದ್ದ ಖತರ್ ನಾಕ್ ಖದೀಮನನ್ನು ಪೊಲೀಸರು ಬಂಧಿಸಿದ್ದಾರೆ.
ಸಾಲೆತ್ತೂರು, ಕಾಡುಮಠ ನಿವಾಸಿ ಮಹಮ್ಮದ್ ಸಾದಿಕ್(23) ಪಿಎಸ್ಐಗೆ ಇರಿದು ಪರಾರಿಯಾಗಿ ಸಿಕ್ಕಿಬಿದ್ದ ಆರೋಪಿ. ಮಂಗಳೂರಿನ ಬಂದರು ಠಾಣೆ ವ್ಯಾಪ್ತಿಯಲ್ಲಿ ಬೆಲೆ ಬಾಳುವ ವಾಚ್ ಕಳ್ಳತನ ಪ್ರಕರಣ ನಡೆದಿತ್ತು. ಕೃತ್ಯ ನಡೆಸಿದ ಆರೋಪಿ ಮಹಮ್ಮದ್ ಸಾದಿಕ್ ನಟೋರಿಯಸ್ ಆಗಿದ್ದು ಈ ಹಿಂದೆ ಕೂಡ ತನ್ನನ್ನ ಬಂಧಿಸಲು ತೆರಳಿದ್ದ ಬಂದರು ಪೊಲೀಸ್ ಠಾಣೆ ಸಿಬ್ಬಂದಿ ವಿನೋದ್ ಎಂಬವರಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದ.
ಕಳೆದ ಮಾ.23 ರ ಬುಧವಾರ ರಾತ್ರಿ ಕಳ್ಳತನ ಆರೋಪಿ ಸಾದಿಕ್ ಕೊಣಾಜೆ ಠಾಣೆ ವ್ಯಾಪ್ತಿಯ ಅರ್ಕಾಣ ಎಂಬಲ್ಲಿನ ತನ್ನ ಪತ್ನಿ ಮನೆಯಲ್ಲಿರುವುದರ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಮಾಹಿತಿ ಮೇರೆಗೆ ಕೊಣಾಜೆ ಪಿಎಸ್ಐ ಶರಣಪ್ಪ ಭಂಡಾರಿ ನೇತೃತ್ವದ ತಂಡ ಸಾದಿಕ್ ಬಂಧನಕ್ಕೆ ತೆರಳಿದ್ದ ವೇಳೆ ಪಿಎಸ್ಐಗೆ ಇರಿದು ಪರಾರಿಯಾಗಿದ್ದ. ಸಾದಿಕ್ ಪರಾರಿಯಾಗಲು ಸಹಕರಿಸಿದ್ದ ಆತನ ಸಹೋದರ ನಾಸಿರ್ ಎಂಬಾತನನ್ನ ಪೊಲೀಸರು ಬಂಧಿಸಿ ಠಾಣೆಯಲ್ಲಿ ವಿಚಾರಣೆ ನಡೆಸಿದ್ದರು.

ಚೂರಿ ಇರಿದ ಖತರ್ನಾಕ್ ಕಳ್ಳ ಸಾದಿಕ್ ಮಾತ್ರ 20 ದಿವಸ ಭೂಗತನಾಗಿದ್ದ. ಆರಂಭದಲ್ಲಿ ಗುಜರಾತಿಗೆ ಪಲಾಯನಗೈದಿದ್ದ ಆರೋಪಿ ಕಳೆದ ಬುಧವಾರ ಬೆಂಗಳೂರಿಗೆ ಆಗಮಿಸಿದ್ದ. ಬೆಂಗಳೂರಿನ ಹೆಚ್.ಎಸ್.ಆರ್. ಲೇಔಟಲ್ಲಿ ಸಾದಿಕ್ ಸ್ನೇಹಿತನೊಂದಿಗೆ ಆಟಿಕೆ ಗೊಂಬೆಗಳನ್ನು ಮಾರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕೊಣಾಜೆ ಪೊಲೀಸರು ಮಹಮ್ಮದ್ ಸಾದಿಕನ್ನ ಬಂಧಿಸಿದ್ದಾರೆ. ಬಂಧಿತ ಆರೋಪಿ ವಿರುದ್ಧ ಕೇರಳದಲ್ಲಿ ಹಲವಾರು ಪ್ರಕರಣಗಳಿವೆಯಂತೆ.
ಎಸಿಪಿ ದಿನಕರ ಶೆಟ್ಟಿ ಮಾರ್ಗದರ್ಶನದಲ್ಲಿ ಕೊಣಾಜೆ ಇನ್ಸ್ ಪೆಕ್ಟರ್ ಪ್ರಕಾಶ್ ದೇವಾಡಿಗ, ಪಿಎಸ್ಐ ಶರಣಪ್ಪ ಭಂಡಾರಿ, ಸಿಬ್ಬಂದಿಗಳಾದ ಅಶೋಕ್, ಶಿವ, ಪುರುಷೋತ್ತಮ್, ಉಮೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Mangalore Attack on Ullal PSI, two arrested in Bangalore. The two were said to be selling dolls in Bangalore. PSI was attacked with lethal weapons a few weeks ago.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm