ಬ್ರೇಕಿಂಗ್ ನ್ಯೂಸ್
16-04-22 07:56 pm HK Desk news ಕ್ರೈಂ
ಪಾಲಕ್ಕಾಡ್, ಎ.16: ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಎಸ್ಡಿಪಿಐ ಮತ್ತು ಆರೆಸ್ಸೆಸ್ ಮುಯ್ಯಿಗೆ ಮುಯ್ಯಿ ಎನ್ನುವಂತೆ ತಲವಾರು ಕಾಳಗದಲ್ಲಿ ತೊಡಗಿದೆ. ಶುಕ್ರವಾರ ಮಧ್ಯಾಹ್ನ ಎಸ್ಡಿಪಿಐ ಕಾರ್ಯಕರ್ತನ ಕೊಲೆ ನಡೆದಿತ್ತು. ಅದಕ್ಕೆ ಪ್ರತಿಯಾಗಿ ಶನಿವಾರ ಮಧ್ಯಾಹ್ನ ಹಾಡಹಗಲೇ ಆರೆಸ್ಸೆಸ್ ನಾಯಕರೊಬ್ಬರ ಹತ್ಯೆ ನಡೆದಿದೆ.
ಈ ಹಿಂದೆ ಆರೆಸ್ಸೆಸ್ ಶಾರೀರಿಕ ಶಿಕ್ಷಣ ಪ್ರಮುಖ್ ಆಗಿದ್ದ ಶ್ರೀನಿವಾಸನ್ ಕೊಲೆಯಾದವರು. ಮೇಲ್ಮುರಿ ಎಂಬಲ್ಲಿ ಶ್ರೀನಿವಾಸನ್ ಇಂದು ಮಧ್ನಾಹ್ನ ಒಂದು ಗಂಟೆ ಸುಮಾರಿಗೆ ತನ್ನ ಅಂಗಡಿಯಲ್ಲಿದ್ದಾಗ, ಮೂರು ಬೈಕುಗಳಲ್ಲಿ ಬಂದ ಐವರು ಹಂತಕರು ಯದ್ವಾತದ್ವಾ ತಲವಾರು ಬೀಸಿ ಭೀಕರ ಕೊಲೆ ಮಾಡಿದ್ದಾರೆ. ಸ್ಥಳದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಒಯ್ದರೂ ಬದುಕುಳಿಯಲಿಲ್ಲ.
ಬಿಜೆಪಿ ನಾಯಕರು, ಕೊಲೆಯ ಹಿಂದೆ ಎಸ್ಡಿಪಿಐ ಮತ್ತು ಪಿಎಫ್ಐ ಕಾರ್ಯಕರ್ತರಿದ್ದಾರೆ, ಅವರೇ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಶುಕ್ರವಾರ ನಡೆದ ಕೊಲೆಗೆ ಪ್ರತೀಕಾರ ರೂಪದಲ್ಲಿ ಘಟನೆ ನಡೆದಿದ್ದು, ಎಸ್ಡಿಪಿಐ ಕಾರ್ಯಕರ್ತರೇ ಕೃತ್ಯ ನಡೆಸಿದ್ದಾರೆ ಎನ್ನಲಾಗುತ್ತಿದೆ. ಶುಕ್ರವಾರ ಮಧ್ಯಾಹ್ನ ಎಲಪ್ಪಳ್ಳಿ ಎಂಬಲ್ಲಿ ಮಸೀದಿಗೆ ಕಾರಿನಲ್ಲಿ ಬಂದಿದ್ದ ಸುಬೈರ್ ಎಂಬ ಎಸ್ಡಿಪಿಐ ಕಾರ್ಯಕರ್ತನ ಕೊಲೆ ಆಗಿತ್ತು. ಕಾರಿಗೆ ಹಿಂದಿನಿಂದ ಡಿಕ್ಕಿಯಾಗಿದ್ದ ತಂಡ, ತಂದೆಯ ಎದುರಲ್ಲೇ ಸುಬೇರ್ ನನ್ನು ಕೊಲೆಗೈದಿತ್ತು. ಸಂಜೆ ವೇಳೆಗೆ ಸುಬೇರ್ ಅಂತ್ಯಕ್ರಿಯೆ ನಡೆದಿದ್ದು, ಅದಾಗಿ 20 ಗಂಟೆ ಕಳೆಯುವಷ್ಟರಲ್ಲಿ ಮತ್ತೊಂದು ಹೆಣ ಬಿದ್ದಿದೆ. ಘಟನೆ ಹಿನ್ನೆಲೆಯಲ್ಲಿ ಪಾಲಕ್ಕಾಡ್ ಜಿಲ್ಲೆಯಾದ್ಯಂತ ಪೊಲೀಸ್ ಭದ್ರತೆ ಬಿಗಿಗೊಳಿಸಲಾಗಿದೆ.
ಈ ಹಿಂದೆ ಆರೆಸ್ಸೆಸ್ ನಾಯಕರಾಗಿದ್ದ ಶ್ರೀನಿವಾಸನ್(47), ಈಗ ಹಳೆಯದನ್ನು ಬಿಟ್ಟು ಆಟೋ ಗ್ಯಾರೇಜ್ ನಡೆಸುತ್ತಿದ್ದರು. ಇಂದು ಮಧ್ಯಾಹ್ನ ತನ್ನ ಪಾಡಿಗೆ ಕೆಲಸ ಮಾಡುತ್ತಿದ್ದಾಗಲೇ ಸುಲಭದಲ್ಲಿ ಹಂತಕರ ಕೈಗೆ ಸಿಕ್ಕಿದ್ದಾರೆ. ಶುಕ್ರವಾರದ ಕೊಲೆ ಪ್ರಕರಣದಲ್ಲಿ ಬಿಜೆಪಿಯಾಗಲೀ, ಆರೆಸ್ಸೆಸ್ ಆಗಲಿ ಶಾಮೀಲು ಹೊಂದಿಲ್ಲ. ನಮ್ಮ ಕೈವಾಡ ಇಲ್ಲ ಎಂದು ಬಿಜೆಪಿ ನಾಯಕರು ಹೇಳಿಕೊಂಡಿದ್ದರು.
A local RSS leader was hacked to death in Kerala’s Palakkad district on Saturday, barely a day after a PFI leader was murdered in the area. The BJP’s district leadership in Palakkad said the PFI and its political wing, the Social Democratic Party of India, were behind Saturday’s murder.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm