ಬ್ರೇಕಿಂಗ್ ನ್ಯೂಸ್
24-09-20 12:30 pm Mangalore Correspondent ಕ್ರೈಂ
ಪುತ್ತೂರು, ಸೆಪ್ಟಂಬರ್ 24: ಪತಿಯೇ ತನ್ನ ಪತ್ನಿ ಹಾಗೂ ಆಕೆಯ ಚಿಕ್ಕಮ್ಮನ ಮೇಲೆ ಆಸಿಡ್ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯ ಕೊಣಾಲು ಗ್ರಾಮದಲ್ಲಿ ನಡೆದಿದೆ.
ಕೇರಳ ಮೂಲದ, ನೆಲ್ಯಾಡಿ ನಿವಾಸಿ ಬಿಜು(38) ಎಂಬಾತ ತನ್ನ ಪತ್ನಿ ಶೈನಿ(33) ಹಾಗೂ ಪತ್ನಿಯ ಚಿಕ್ಕಮ್ಮ ಝಾನ್ಸಿ(63) ಮೇಲೆ ಆಸಿಡ್ ಎರಚಿ ಹಲ್ಲೆ ನಡೆಸಿದ್ದಾನೆ. ಆಸಿಡ್ ದಾಳಿಯಿಂದಾಗಿ ಇಬ್ಬರ ಮುಖ, ಕಣ್ಣಿನ ಭಾಗ ಸುಟ್ಟುಹೋಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಜು ಹಾಗೂ ಪತ್ನಿ ಶೈನಿ ನಡುವೆ ಜಗಳ ನಡೆದು, ಪತ್ನಿ ಮನೆ ಬಿಟ್ಟು ಬಂದಿದ್ದಳು. ಕೊಣಾಲು ಗ್ರಾಮದ ಪಾಂಡಿಬೆಟ್ಟು ಎಂಬಲ್ಲಿರುವ ತಂದೆಯ ತಮ್ಮನ ಮನೆಯಲ್ಲಿ ವಾಸವಿದ್ದರು. ಇದೇ ವೇಳೆ, ಅಲ್ಲಿಂದ ಶೈನಿ ತನ್ನ ಚಿಕ್ಕಮ್ಮ ಝಾನ್ಸಿ ಜೊತೆಗೆ ನೆಲ್ಯಾಡಿಯ ಆಶ್ರಮವೊಂದಕ್ಕೆ ಕೆಲಸಕ್ಕೆ ಹೋಗುತ್ತಿದ್ದಳು. ಎಂದಿನಂತೆ ಇಂದು ಬೆಳಗ್ಗೆ ಶೈನಿ ಹಾಗೂ ಝಾನ್ಸಿ ಕಾಲುದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾದು ಕುಳಿತಿದ್ದ ಆರೋಪಿ ಬಿಜು, ಇಬ್ಬರ ಮೇಲೂ ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾನೆ.
ಸುದ್ದಿ ತಿಳಿಯುತ್ತಲೇ ಶೈನಿಯ ಚಿಕ್ಕಪ್ಪ ಏಲಿಯಸ್, ಸ್ಥಳಕ್ಕೆ ಆಗಮಿಸಿದ್ದು ಇಬ್ಬರನ್ನೂ ರಿಕ್ಷಾದಲ್ಲಿ ನೆಲ್ಯಾಡಿಯ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ದಿದ್ದಾರೆ. ನೆಲ್ಯಾಡಿ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
18-02-26 11:19 am
Mangaluru Staffer
Parameshwara in Mangalore: ಶಾಸಕರು ವಿದೇಶಕ್ಕೆ ತ...
17-02-26 12:42 pm
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
18-02-26 01:52 pm
Udupi Staffer
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm