ಬ್ರೇಕಿಂಗ್ ನ್ಯೂಸ್
20-04-22 12:09 pm Bengaluru Correspondent ಕ್ರೈಂ
ಬೆಂಗಳೂರು, ಎ.20: ಜುವೆಲ್ಲರಿ ಮೇಲ್ಗಡೆಯ ಮಹಡಿಯಲ್ಲಿ ಬಾಡಿಗೆ ಪಡೆದಿದ್ದ ತಂಡವೊಂದು ಜುವೆಲ್ಲರಿಗೆ ಕನ್ನ ಹಾಕಿದ್ದಲ್ಲದೆ, 5 ಕೇಜಿ ಚಿನ್ನಾಭರಣ ದೋಚಿಕೊಂಡು ಹೋಗಿರುವ ಘಟನೆ ನಡೆದಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು 15 ಜನರ ವಿಶೇಷ ತಂಡವನ್ನು ರಚಿಸಿದ್ದಾರೆ.
ಜೆಪಿ ನಗರ ಠಾಣೆ ವ್ಯಾಪ್ತಿಯ ಪ್ರಿಯದರ್ಶಿನಿ ಜುವೆಲ್ಲರ್ಸ್ ನಲ್ಲಿ ಕಳವು ನಡೆದಿದ್ದು, ಆರೋಪಿಗಳು ವ್ಯವಸ್ಥಿತವಾಗಿ ಕಳ್ಳತನ ನಡೆಸಿದ್ದಾರೆ. ಒಂದು ತಿಂಗಳ ಹಿಂದೆ ದೆಹಲಿಯ ನಕಲಿ ವಿಳಾಸವನ್ನು ನೀಡಿ, ಮೂವರು ವ್ಯಕ್ತಿಗಳು ಜುವೆಲ್ಲರಿ ಕಟ್ಟಡದ ಮೂರನೇ ಮಹಡಿಯಲ್ಲಿ ಬಾಡಿಗೆ ಕೋಣೆ ಪಡೆದಿದ್ದರು. ಕೆಳಗಿನ ಎರಡು ಮಹಡಿಯಲ್ಲಿ ಜುವೆಲ್ಲರಿ ಇದ್ದು, ಮೇಲಿನ ಮೂರನೇ ಮಹಡಿ ಖಾಲಿ ಇತ್ತು. ಅಲ್ಲಿ ಬಾಡಿಗೆ ಪಡೆದು ಒಂದು ತಿಂಗಳ ಕಾಲ ಜುವೆಲ್ಲರಿ ದರೋಡೆಗೆ ಆರೋಪಿಗಳು ಸ್ಕೆಚ್ ಹಾಕಿದ್ದಾರೆ.
ಜುವೆಲ್ಲರಿಯ ಇಂಚಿಂಚು ಮಾಹಿತಿ ಸಂಗ್ರಹಿಸಿದ ಬಳಿಕ ಮೊನ್ನೆ ರಜಾದಿನವಾದ ಭಾನುವಾರ ಕಳವು ಕೃತ್ಯ ನಡೆಸಿದ್ದಾರೆ. ಮೂರನೇ ಮಹಡಿಯಿಂದ ಕೆಳಗಿನ ಭಾಗಕ್ಕೆ ಕಾಂಕ್ರೀಟನ್ನು ಕೊರೆದು ಸುರಂಗ ತೋಡಿದ್ದು ಅಲ್ಲಿಂದ ಜುವೆಲ್ಲರಿ ಒಳಕ್ಕಿಳಿದು ಚಿನ್ನಾಭರಣ ಕಳವು ಮಾಡಿದ್ದಾರೆ. ಮಂಗಳವಾರ ಬೆಳಗ್ಗೆ ಮಾಲೀಕರು ಬಂದು ಜುವೆಲ್ಲರಿ ಓಪನ್ ಮಾಡಿದಾಗ ಕಳವು ಕೃತ್ಯ ಬೆಳಕಿಗೆ ಬಂದಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಒಟ್ಟು 2.5 ಕೋಟಿ ಮೌಲ್ಯದ ಚಿನ್ನಾಭರಣ ಕಳವಾಗಿರುವುದಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಕೊಠಡಿ ಬಾಡಿಗೆ ಪಡೆಯುವ ವೇಳೆ ವಿಳಾಸದ ಗುರುತಿಗಾಗಿ ಆಧಾರ್ ಕಾರ್ಡ್ ನೀಡಿದ್ದು, ಅದು ನಕಲಿಯೆಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ಸಂಜೆ ವರೆಗೂ ವ್ಯಾಪಾರ ಮಾಡಿದ್ದ ಮಾಲೀಕರು ರಾತ್ರಿ ವೇಳೆಗೆ ಬಂದ್ ಮಾಡಿ ಹೋಗಿದ್ದರು. ಅದೇ ದಿನ ರಾತ್ರಿ 2 ಗಂಟೆಯ ವೇಳೆಗೆ ಜುವೆಲ್ಲರಿಗೆ ಕನ್ನ ಕೊರೆಯಲಾಗಿದೆ. ಗ್ಯಾಸ್ ಕಟರ್ ಬಳಸಿ ಕನ್ನ ಹಾಕಿರುವುದು ಕಂಡುಬಂದಿದ್ದು, ಒಳಕ್ಕಿಳಿದು ಕಪಾಟು ಒಡೆದು ಚಿನ್ನ ದೋಚಿದ್ದಾರೆ.
Bangalore Robbers break Priyadarshini Jewellers at JP Nagar, escape with five kilos of gold. A 15 member police team has been formed to nab the robbers. JP Nagar police are now investigating the case.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm