ಬ್ರೇಕಿಂಗ್ ನ್ಯೂಸ್
21-04-22 06:46 pm HK Desk news ಕ್ರೈಂ
ಹುಬ್ಬಳ್ಳಿ, ಎ.21: ಹುಬ್ಬಳ್ಳಿಯ ಗಲಭೆ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಎನ್ನಲಾದ, ತಲೆಮರೆಸಿಕೊಂಡು ತಿರುಗಾಡುತ್ತಿದ್ದ ಮೌಲವಿ ವಾಸಿಂ ಪಠಾಣ್ ಎಂಬಾತನನ್ನ ಕೊನೆಗೂ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಬಂಧಿಸಿದ ಬಳಿಕ ಘಟನೆ ಬಗ್ಗೆ ಪ್ರಕರಣ ದಾಖಲಾಗಿರುವ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಕರೆದುಕೊಂಡು ಬರಲಾಗಿದೆ. ಠಾಣೆಗೆ ಕಲ್ಲು ತೂರಿ ದೊಂಬಿ ನಡೆಸಲು ಉದ್ರಿಕ್ತ ಜನರಿಗೆ ಪ್ರೇರಣೆ ನೀಡಿದ್ದ ಎಂಬ ಆರೋಪದಲ್ಲಿ ತನಿಖೆ ನಡೆಸಲಾಗುತ್ತಿದೆ. ಇದಕ್ಕೂ ಮುನ್ನ ನಿಗೂಢ ಜಾಗದಲ್ಲಿದ್ದುಕೊಂಡು ವಾಸಿಂ ಪಠಾಣ್ ವಿಡಿಯೋ ಬಿಡುಗಡೆ ಮಾಡಿದ್ದ.


ಇಸ್ಲಾಂ ಧರ್ಮಕ್ಕೆ ಅಪಮಾನ ಮಾಡಿದ ಬಗ್ಗೆ ಮುಸ್ಲಿಂ ಯುವಕರಲ್ಲಿ ಅಸಮಾಧಾನ ಇತ್ತು. ಈ ಬಗ್ಗೆ ದೂರು ನೀಡಲು ಯುವಕರು ಜಮಾಯಿಸಿದ್ದರು. ಜನರ ಜೊತೆಗೆ ಮಾತನಾಡಲು ಪೊಲೀಸರು ನನ್ನನ್ನು ಕರೆಸಿದ್ದರು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪೊಲೀಸರೇ ಜೀಪ್ ಹತ್ತಿ ಜನರಿಗೆ ತಿಳಿ ಹೇಳಲು ಹೇಳಿದರು. ನಾನು ವಾಹನದ ಮೇಲೆ ಹತ್ತಿದಾಗ ಅಲ್ಲಿ ಮೈಕ್ ಇರಲಿಲ್ಲ.

ಹೀಗಾಗಿ ಕೈ ಸನ್ನೆ ಮಾಡುವ ಮೂಲಕ ಜನರಲ್ಲಿ ಶಾಂತಿ ಕಾಪಾಡಲು ಹೇಳಿದ್ದೆ. ಆದರೆ ನಾನೇ ಒಟ್ಟು ಘಟನೆಯ ಪಿತೂರಿದಾರ ಎಂದು ಬಿಂಬಿಸಲಾಗುತ್ತಿದೆ. ನಾನು ಘಟನೆಯ ಮಾಸ್ಟರ್ ಮೈಂಡ್ ಅಲ್ಲ. ನನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ. ಹುಬ್ಬಳ್ಳಿಯ ವಾತಾವರಣ ಹದಗೆಡಿಸುವ ಉದ್ದೇಶ ನನ್ನದಾಗಿರಲಿಲ್ಲ. ಪೊಲೀಸ್ ಇಲಾಖೆಯ ಬಗ್ಗೆ ನನಗೆ ಭರವಸೆ ಇದೆ. ಪೊಲೀಸರ ಮುಂದೆ ಹಾಜರಾಗಿ ನನ್ನ ಹೇಳಿಕೆ ಕೊಡುತ್ತೇನೆ. ಸತ್ಯಕ್ಕೆ ನ್ಯಾಯ ಸಿಗುತ್ತದೆ ಎಂದು ನಂಬಿದ್ದೇನೆ ಎಂದು ವಿಡಿಯೋದಲ್ಲಿ ವಾಸಿಂ ಪಠಾಣ್ ಹೇಳಿಕೆ ನೀಡಿದ್ದರು.
Karnataka Police on Wednesday arrested the main accused in the Hubballi stone pelting case. The accused, identified as Waseem Pathan, is a local Maulvi allegedly involved in violence that broke out on Saturday.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am