ಬ್ರೇಕಿಂಗ್ ನ್ಯೂಸ್
21-04-22 06:46 pm HK Desk news ಕ್ರೈಂ
ಹುಬ್ಬಳ್ಳಿ, ಎ.21: ಹುಬ್ಬಳ್ಳಿಯ ಗಲಭೆ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಎನ್ನಲಾದ, ತಲೆಮರೆಸಿಕೊಂಡು ತಿರುಗಾಡುತ್ತಿದ್ದ ಮೌಲವಿ ವಾಸಿಂ ಪಠಾಣ್ ಎಂಬಾತನನ್ನ ಕೊನೆಗೂ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಬಂಧಿಸಿದ ಬಳಿಕ ಘಟನೆ ಬಗ್ಗೆ ಪ್ರಕರಣ ದಾಖಲಾಗಿರುವ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಕರೆದುಕೊಂಡು ಬರಲಾಗಿದೆ. ಠಾಣೆಗೆ ಕಲ್ಲು ತೂರಿ ದೊಂಬಿ ನಡೆಸಲು ಉದ್ರಿಕ್ತ ಜನರಿಗೆ ಪ್ರೇರಣೆ ನೀಡಿದ್ದ ಎಂಬ ಆರೋಪದಲ್ಲಿ ತನಿಖೆ ನಡೆಸಲಾಗುತ್ತಿದೆ. ಇದಕ್ಕೂ ಮುನ್ನ ನಿಗೂಢ ಜಾಗದಲ್ಲಿದ್ದುಕೊಂಡು ವಾಸಿಂ ಪಠಾಣ್ ವಿಡಿಯೋ ಬಿಡುಗಡೆ ಮಾಡಿದ್ದ.


ಇಸ್ಲಾಂ ಧರ್ಮಕ್ಕೆ ಅಪಮಾನ ಮಾಡಿದ ಬಗ್ಗೆ ಮುಸ್ಲಿಂ ಯುವಕರಲ್ಲಿ ಅಸಮಾಧಾನ ಇತ್ತು. ಈ ಬಗ್ಗೆ ದೂರು ನೀಡಲು ಯುವಕರು ಜಮಾಯಿಸಿದ್ದರು. ಜನರ ಜೊತೆಗೆ ಮಾತನಾಡಲು ಪೊಲೀಸರು ನನ್ನನ್ನು ಕರೆಸಿದ್ದರು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪೊಲೀಸರೇ ಜೀಪ್ ಹತ್ತಿ ಜನರಿಗೆ ತಿಳಿ ಹೇಳಲು ಹೇಳಿದರು. ನಾನು ವಾಹನದ ಮೇಲೆ ಹತ್ತಿದಾಗ ಅಲ್ಲಿ ಮೈಕ್ ಇರಲಿಲ್ಲ.

ಹೀಗಾಗಿ ಕೈ ಸನ್ನೆ ಮಾಡುವ ಮೂಲಕ ಜನರಲ್ಲಿ ಶಾಂತಿ ಕಾಪಾಡಲು ಹೇಳಿದ್ದೆ. ಆದರೆ ನಾನೇ ಒಟ್ಟು ಘಟನೆಯ ಪಿತೂರಿದಾರ ಎಂದು ಬಿಂಬಿಸಲಾಗುತ್ತಿದೆ. ನಾನು ಘಟನೆಯ ಮಾಸ್ಟರ್ ಮೈಂಡ್ ಅಲ್ಲ. ನನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ. ಹುಬ್ಬಳ್ಳಿಯ ವಾತಾವರಣ ಹದಗೆಡಿಸುವ ಉದ್ದೇಶ ನನ್ನದಾಗಿರಲಿಲ್ಲ. ಪೊಲೀಸ್ ಇಲಾಖೆಯ ಬಗ್ಗೆ ನನಗೆ ಭರವಸೆ ಇದೆ. ಪೊಲೀಸರ ಮುಂದೆ ಹಾಜರಾಗಿ ನನ್ನ ಹೇಳಿಕೆ ಕೊಡುತ್ತೇನೆ. ಸತ್ಯಕ್ಕೆ ನ್ಯಾಯ ಸಿಗುತ್ತದೆ ಎಂದು ನಂಬಿದ್ದೇನೆ ಎಂದು ವಿಡಿಯೋದಲ್ಲಿ ವಾಸಿಂ ಪಠಾಣ್ ಹೇಳಿಕೆ ನೀಡಿದ್ದರು.
Karnataka Police on Wednesday arrested the main accused in the Hubballi stone pelting case. The accused, identified as Waseem Pathan, is a local Maulvi allegedly involved in violence that broke out on Saturday.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm