ಬ್ರೇಕಿಂಗ್ ನ್ಯೂಸ್
24-09-20 04:02 pm Udupi Correspondent ಕ್ರೈಂ
ಉಡುಪಿ, ಸೆಪ್ಟಂಬರ್ 24: ಉಡುಪಿ ನಗರ ಭಾಗದ ಹಿರಿಯಡ್ಕದಲ್ಲಿ ಹಾಡುಹಗಲೇ ರೌಡಿಶೀಟರ್ ಒಬ್ಬನನ್ನು ಕಡಿದು ಕೊಲೆ ಮಾಡಲಾಗಿದೆ. ಕೊಲೆಯಾದ ಯುವಕನನ್ನು ಕಿಶನ್ ಹೆಗ್ಡೆ ಇನ್ನಾ ಎಂದು ಗುರುತಿಸಲಾಗಿದೆ.
ನಗರದ ಹೃದಯ ಭಾಗದಲ್ಲೇ ಜನರು ನೋಡನೋಡುತ್ತಿದ್ದಂತೆ ಘಟನೆ ನಡೆದಿದ್ದು ಯುವಕನ ಕತ್ತು ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಕಿಶನ್ ಹೆಗ್ಡೆ ತನ್ನ ಗೆಳೆಯನ ಜೊತೆ ಕಾರಿನಲ್ಲಿ ಕುಳಿತಿದ್ದಾಗ ಉಡುಪಿ ಕಡೆಯಿಂದ ಬಂದ ಇನ್ನೋವ ಮತ್ತು ರಿಡ್ಜ್ಕಾರಿನಲ್ಲಿ 8 ಮಂದಿ ಬಂದಿದ್ದಾರೆ. ಸ್ಥಳದಲ್ಲಿ ಕೆಲಕಾಲ ವಾಗ್ವಾದ ನಡೆದು ಕಿಶನ್ ಹೆಗ್ಡೆ ಕಾರಿನಿಂದ ಕೆಳಗಿಳಿಯುತ್ತಿದ್ದಂತೆ ಯುವಕರ ತಂಡ ಮಾರಕಾಸ್ತ್ರಗಳಿಂದ ದಾಳಿ ಮಾಡಿದೆ. ತಲೆಯ ಹಿಂಭಾಗಕ್ಕೆ ಮತ್ತು ಕುತ್ತಿಗೆಗೆ ಬಲವಾದ ಪೆಟ್ಟಾಗಿದೆ. ಕಿಶನ್ ಹೆಗ್ಡೆ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಸ್ಥಳೀಯರು ಪೊಲೀಸರಿಗೆ ವಿವರ ನೀಡಿದ್ದಾರೆ.
ಕಿಶನ್ ಹೆಗ್ಡೆ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದ ಎನ್ನಲಾಗಿದೆ. ಹಿರಿಯಡ್ಕ ಪರಿಸರದಲ್ಲಿ ಪ್ರಭಾವ ಬೆಳೆಸಿಕೊಂಡಿದ್ದ ಅಪರಾಧ ಹಿನ್ನೆಲೆ ಹೊಂದಿದ್ದ. ಪೂರ್ವ ದ್ವೇಷದಿಂದ ಎರಡು ಕಾರುಗಳಲ್ಲಿ ಹಿಂಬಾಲಿಸಿಕೊಂಡು ಬಂದಿದ್ದ ತಂಡ ಕಿಶನ್ ಹೆಗ್ಡೆಯ ಕಾರನ್ನು ಅಡ್ಡಗಟ್ಟಿ ಕುತ್ತಿಗೆಯನ್ನು ಕತ್ತರಿಸಿದ್ದಾರೆ. ಕಿಶನ್ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಕೊಲೆಯ ಹಿಂದೆ ಯಾರಿದ್ದಾರೆ, ದ್ವೇಷ ಏನಿತ್ತು ಎಂಬುದು ತಿಳಿದುಬಂದಿಲ್ಲ.
ಸ್ಥಳಕ್ಕೆ ಹಿರಿಯಡ್ಕ ಪೊಲೀಸ್ ಠಾಣಾ ಸಿಬ್ಬಂದಿಗಳು ಭೇಟಿ, ಬಂದೋಬಸ್ತ್ ಕೈಗೊಂಡಿದ್ದಾರೆ. ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.
21-09-25 01:28 pm
Bangalore Correspondent
ಕೆಮ್ಮಣ್ಣು ಗುಂಡಿ ಫಾಲ್ಸ್ ನಲ್ಲಿ ಸೆಲ್ಫಿ ತೆಗೆದುಕೊಳ...
20-09-25 10:57 pm
ಜಾತಿ ಗಣತಿಗೆ ಸರ್ವ ಸಿದ್ಧತೆ ; ಗಣತಿಗೆ 1.75 ಲಕ್ಷ ಶ...
20-09-25 10:26 pm
Hassan Instagram, Suicide: ಪಾರ್ಕ್ ನಲ್ಲಿ ಯುವತಿ...
20-09-25 02:59 pm
Cm Siddaramaiah, Caste Survey: ಜಾತಿ ಸಮೀಕ್ಷೆ ಮ...
19-09-25 10:04 pm
20-09-25 11:03 pm
HK News Desk
ಪಾಕಿಸ್ತಾನಕ್ಕೆ ಹೋದರೆ ನನ್ನ ಮನೆಗೆ ಹೋದ ಅನುಭವ ಆಗುತ...
20-09-25 11:42 am
ಸಿಂಗಾಪುರದಲ್ಲಿ ಸ್ಕ್ಯೂಬಾ ಡೈವಿಂಗ್ ಅವಘಡ: ಬಾಲಿವುಡ್...
19-09-25 05:45 pm
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
20-09-25 10:39 pm
Mangalore Correspondent
Scdcc Bank, Mangalore: ಎಸ್ಸಿಡಿಸಿಸಿ ಬ್ಯಾಂಕ್ ನಿ...
20-09-25 09:37 pm
Indiana Hospital, Mangalore: ಇಂಡಿಯಾನ ಆಸ್ಪತ್ರೆ...
20-09-25 09:34 pm
Mangalore, Kumpala, Suicide: ಸೋಮೇಶ್ವರ ಕಡಲ ಕಿನ...
20-09-25 08:46 pm
ಜಾತಿ, ಶೈಕ್ಷಣಿಕ ಸಮೀಕ್ಷೆ ; 47 ಹಿಂದು ಉಪ ಜಾತಿಗಳಲ್...
20-09-25 08:29 pm
21-09-25 02:30 pm
Bangalore Correspondent
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm