ಬ್ರೇಕಿಂಗ್ ನ್ಯೂಸ್
24-09-20 04:02 pm Udupi Correspondent ಕ್ರೈಂ
ಉಡುಪಿ, ಸೆಪ್ಟಂಬರ್ 24: ಉಡುಪಿ ನಗರ ಭಾಗದ ಹಿರಿಯಡ್ಕದಲ್ಲಿ ಹಾಡುಹಗಲೇ ರೌಡಿಶೀಟರ್ ಒಬ್ಬನನ್ನು ಕಡಿದು ಕೊಲೆ ಮಾಡಲಾಗಿದೆ. ಕೊಲೆಯಾದ ಯುವಕನನ್ನು ಕಿಶನ್ ಹೆಗ್ಡೆ ಇನ್ನಾ ಎಂದು ಗುರುತಿಸಲಾಗಿದೆ.
ನಗರದ ಹೃದಯ ಭಾಗದಲ್ಲೇ ಜನರು ನೋಡನೋಡುತ್ತಿದ್ದಂತೆ ಘಟನೆ ನಡೆದಿದ್ದು ಯುವಕನ ಕತ್ತು ಕತ್ತರಿಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಕಿಶನ್ ಹೆಗ್ಡೆ ತನ್ನ ಗೆಳೆಯನ ಜೊತೆ ಕಾರಿನಲ್ಲಿ ಕುಳಿತಿದ್ದಾಗ ಉಡುಪಿ ಕಡೆಯಿಂದ ಬಂದ ಇನ್ನೋವ ಮತ್ತು ರಿಡ್ಜ್ಕಾರಿನಲ್ಲಿ 8 ಮಂದಿ ಬಂದಿದ್ದಾರೆ. ಸ್ಥಳದಲ್ಲಿ ಕೆಲಕಾಲ ವಾಗ್ವಾದ ನಡೆದು ಕಿಶನ್ ಹೆಗ್ಡೆ ಕಾರಿನಿಂದ ಕೆಳಗಿಳಿಯುತ್ತಿದ್ದಂತೆ ಯುವಕರ ತಂಡ ಮಾರಕಾಸ್ತ್ರಗಳಿಂದ ದಾಳಿ ಮಾಡಿದೆ. ತಲೆಯ ಹಿಂಭಾಗಕ್ಕೆ ಮತ್ತು ಕುತ್ತಿಗೆಗೆ ಬಲವಾದ ಪೆಟ್ಟಾಗಿದೆ. ಕಿಶನ್ ಹೆಗ್ಡೆ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಸ್ಥಳೀಯರು ಪೊಲೀಸರಿಗೆ ವಿವರ ನೀಡಿದ್ದಾರೆ.


ಕಿಶನ್ ಹೆಗ್ಡೆ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದ ಎನ್ನಲಾಗಿದೆ. ಹಿರಿಯಡ್ಕ ಪರಿಸರದಲ್ಲಿ ಪ್ರಭಾವ ಬೆಳೆಸಿಕೊಂಡಿದ್ದ ಅಪರಾಧ ಹಿನ್ನೆಲೆ ಹೊಂದಿದ್ದ. ಪೂರ್ವ ದ್ವೇಷದಿಂದ ಎರಡು ಕಾರುಗಳಲ್ಲಿ ಹಿಂಬಾಲಿಸಿಕೊಂಡು ಬಂದಿದ್ದ ತಂಡ ಕಿಶನ್ ಹೆಗ್ಡೆಯ ಕಾರನ್ನು ಅಡ್ಡಗಟ್ಟಿ ಕುತ್ತಿಗೆಯನ್ನು ಕತ್ತರಿಸಿದ್ದಾರೆ. ಕಿಶನ್ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಕೊಲೆಯ ಹಿಂದೆ ಯಾರಿದ್ದಾರೆ, ದ್ವೇಷ ಏನಿತ್ತು ಎಂಬುದು ತಿಳಿದುಬಂದಿಲ್ಲ.
ಸ್ಥಳಕ್ಕೆ ಹಿರಿಯಡ್ಕ ಪೊಲೀಸ್ ಠಾಣಾ ಸಿಬ್ಬಂದಿಗಳು ಭೇಟಿ, ಬಂದೋಬಸ್ತ್ ಕೈಗೊಂಡಿದ್ದಾರೆ. ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm