ಬ್ರೇಕಿಂಗ್ ನ್ಯೂಸ್
24-04-22 01:28 pm HK News Desk ಕ್ರೈಂ
ಬೆಂಗಳೂರು, ಎ.24: ಇತ್ತೀಚೆಗೆ ಬೆಂಗಳೂರಿನ ಹತ್ತಕ್ಕೂ ಶಾಲೆಗಳಿಗೆ ಬಾಂಬ್ ಇದೆಯೆಂದು ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ತನಿಖೆ ಚುರುಕುಗೊಂಡಿದ್ದು ಕೇಂದ್ರ ಗುಪ್ತಚರ ದಳವೂ ತನಿಖೆ ಕೈಗೆತ್ತಿಕೊಂಡಿದೆ. ತನಿಖೆಯಲ್ಲಿ ಇ-ಮೇಲ್ ಬೆದರಿಕೆ ಸಂದೇಶ ಪಾಕಿಸ್ಥಾನ ಅಥವಾ ಸಿರಿಯಾದಿಂದ ಬಂದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಇ-ಮೇಲ್ ಸಂದೇಶದಲ್ಲಿ ಬಳಸಿದ ಭಾಷೆ ಮತ್ತು ಶಬ್ದಗಳು ಒಂದೇ ರೀತಿಯವಾಗಿದ್ದು, ಯಾರೋ ಒಂದೇ ತಂಡದ ಕೃತ್ಯ ಎನ್ನುವ ಶಂಕೆ ಅಧಿಕಾರಿಗಳದ್ದು, ಹೀಗಾಗಿ ಇ-ಮೇಲ್ ಸಂದೇಶ ಎಲ್ಲಿಂದ ಬಂದಿತ್ತು ಎನ್ನುವ ಬಗ್ಗೆ ಅಧಿಕಾರಿಗಳು ಸರ್ವರ್ ಆಧರಿಸಿ ತನಿಖೆ ಕೈಗೊಂಡಿದ್ದಾರೆ. ರಾಜ್ಯ ಗುಪ್ತಚರ ದಳ, ಆಂತರಿಕ ಭದ್ರತಾ ದಳ ಮತ್ತು ಕೇಂದ್ರೀಯ ಗುಪ್ತಚರ ದಳ ಪ್ರಕರಣದ ಬಗ್ಗೆ ಪ್ರತ್ಯೇಕವಾಗಿ ತನಿಖೆ ನಡೆಸುತ್ತಿವೆ.

ವಿದೇಶದಿಂದ ಇ-ಮೇಲ್ ಬಂದಿರುವ ಬಗ್ಗೆ ಪ್ರಾಥಮಿಕ ಮಾಹಿತಿಗಳಿವೆ. ಹೀಗಾಗಿ ಪಾಕಿಸ್ಥಾನ ಅಥವಾ ಗಲ್ಫ್ ರಾಷ್ಟ್ರಗಳಿಂದ ಮೇಲ್ ಬಂದಿರುವ ಬಗ್ಗೆ ಶಂಕೆ ವ್ಯಕ್ತಪಡಿಸುತ್ತಿದ್ದಾರೆ. ಒಂದೇ ಸರ್ವರ್ ಆಗಿರಬಹುದೇ, ಬೇರೆ ಬೇರೆ ಸರ್ವರ್ ಗಳನ್ನು ಬಳಸಿ ಇಮೇಲ್ ಮಾಡಲಾಗಿದೆಯೇ ಎಂಬುದನ್ನು ಪತ್ತೆಹಚ್ಚಲು ಬೆಂಗಳೂರು ಪೊಲೀಸರು ಸೈಬರ್ ತಂತ್ರಜ್ಞರ ಮೊರೆ ಹೋಗಿದ್ದಾರೆ. ಇದೇ ವೇಳೆ, ಗೂಗಲ್ ಸಂಸ್ಥೆಯಿಂದಲೂ ತನಿಖೆಗೆ ಮಾಹಿತಿ ಪಡೆಯುವುದಕ್ಕೂ ಮುಂದಾಗಿದ್ದಾರೆ.
ಇದೇ ವೇಳೆ, ಹಳೆಯ ಬಾಂಬ್ ಬೆದರಿಕೆ ಪ್ರಕರಣಗಳ ಬಗ್ಗೆಯೂ ಪೊಲೀಸರು ಜಾಲಾಡಿದ್ದಾರೆ. ಹಳೆ ಆರೋಪಿಗಳನ್ನು ವಿಚಾರಣೆ ನಡೆಸಿ, ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸಿದ್ದಾರೆ. ರೈಲ್ವೇ ನಿಲ್ದಾಣ, ವಿಮಾನ ನಿಲ್ದಾಣ ಸೇರಿದಂತೆ ಹಲವು ಕಡೆ ಬಾಂಬ್ ಇರಿಸಿದ್ದಾಗಿ ಹುಸಿ ಕರೆ ಮಾಡಿದ್ದ ಪ್ರಕರಣಗಳ ಆರೋಪಿಗಳನ್ನು ವಿಚಾರಣೆ ನಡೆಸಿದ್ದಾರೆ. ಅವರಿಂದ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು ಇ-ಮೇಲ್ ಸಂದೇಶ ಎಲ್ಲಿಂದ ಬಂದಿತ್ತು ಅನ್ನುವುದನ್ನು ಪತ್ತೆಹಚ್ಚಲು ತನಿಖೆ ಕೈಗೊಂಡಿದ್ದಾರೆ.
13 schools in Bengaluru get hoax bomb threat, Pak work behind emails says Intellegence. As many as 13 private schools in and around the city received emails threatening that explosives have been planted on the school premises, on Friday. The police, who concluded that it is a mischief, have intensified the investigation to trace the people behind it. Reacting to the incident, Chief Minister Basavaraj Bommai said it is a conspiracy to disturb peace and tarnish the image of the state.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am