ಬ್ರೇಕಿಂಗ್ ನ್ಯೂಸ್
25-04-22 09:53 am HK Desk news ಕ್ರೈಂ
ಬೆಳ್ತಂಗಡಿ, ಎ.25 ಪರಿಶಿಷ್ಟ ಜನಾಂಗದ ಮಹಿಳೆಯನ್ನು ಅದೇ ಸಮುದಾಯದ ತಂಡವೊಂದು ಅರೆ ಬೆತ್ತಲೆಗೊಳಿಸಿ ಹಲ್ಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದ್ದು ಘಟನೆ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಮೂವರು ಮಹಿಳೆಯರು ಸೇರಿ ಒಂಬತ್ತು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಜಾಗದ ತಕರಾರಿನ ವಿಚಾರದಲ್ಲಿ ಹಲ್ಲೆ ಕೃತ್ಯ ನಡೆದಿದ್ದು ಉಜಿರೆ ಗುರಿಪಳ್ಳ ನಿವಾಸಿಗಳಾದ ಸಂದೀಪ್, ಸಂತೋಷ್, ಗುಲಾಬಿ, ಕುಸುಮ, ಸುಗುಣ, ಲೋಕಯ್ಯ, ಅನಿಲ್, ಲಲಿತ, ಚೆನ್ನಕೇಶವ ಎಂಬವರ ವಿರುದ್ಧ ಐಪಿಸಿ 143, 147, 148, 323, 324, 504, 354, 354(B), 506, 149 ಅಡಿ ಎಫ್ ಐಆರ್ ದಾಖಲಾಗಿದೆ.
ಬಿಜೆಪಿ ತಾಲೂಕು ಘಟಕದ ಎಸ್.ಟಿ. ಮೋರ್ಚಾ ಅಧ್ಯಕ್ಷ ಸೇರಿ ಹಲವರು ಸೇರಿ ಕೃತ್ಯ ನಡೆಸಿದ್ದಾಗಿ ಆರೋಪಿಸಲಾಗಿದೆ. ಅರೆಬೆತ್ತಲೆ ಮಾಡಿ ಹಲ್ಲೆ ನಡೆಸಿದ್ದಲ್ಲದೆ, ಕೃತ್ಯದ ವಿಡಿಯೋ ಮಾಡಿದ ಬಗ್ಗೆಯೂ ದೂರಿನಲ್ಲಿ ತಿಳಿಸಲಾಗಿದೆ.

ಹಲ್ಲೆಗೊಳಗಾದ ಮಹಿಳೆಯ ಕುಟುಂಬಸ್ಥರು ಸರಕಾರಿ ಜಾಗದಲ್ಲಿ ಮನೆ ನಿರ್ಮಿಸುವುದಕ್ಕಾಗಿ ಸಲ್ಲಿಸಿದ್ದ 94ಸಿ ಅರ್ಜಿಯ ವಿಚಾರದಲ್ಲಿ ಎ.19 ರಂದು ಪಂಚಾಯತ್ ಪಿಡಿಓ ಮತ್ತು ಗ್ರಾಮ ಲೆಕ್ಕಾಧಿಕಾರಿ ಸ್ಥಳಕ್ಕೆ ಬಂದಿದ್ದರು.
ಈ ಸಂದರ್ಭ ಜಾಗದ ವಿಚಾರದಲ್ಲಿ ಇನ್ನೊಂದು ತಂಡ ತಕರಾರು ತೆಗೆದಿದ್ದು ಅಧಿಕಾರಿಗಳ ಕೆಲಸಕ್ಕೆ ಅಡ್ಡಿ ಪಡಿಸಿತ್ತು. ಇದರಿಂದ ಅಳತೆಗೆ ಬಂದಿದ್ದ ಅಧಿಕಾರಿಗಳು ತಮ್ಮಿಂದ ಈ ಕಾರ್ಯ ಸಾಧ್ಯವಿಲ್ಲ ಎಂದು ಬಿಟ್ಟು ಹೋಗಿದ್ದರು. ಅಧಿಕಾರಿ ಸಿಬಂದಿ ತೆರಳಿದ ಬಳಿಕ ಸುರೇಖಾ ಎಂಬ ಮಹಿಳೆ ಧರಿಸಿದ್ದ ನೈಟಿಯನ್ನು ಹಿಡಿದೆಳೆದು ಹಲ್ಲೆ ನಡೆಸಿದ್ದಾಗಿ ದೂರಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
9 booked for stripping and assaulting tribal woman in Dakshina Kannada.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm