ಬ್ರೇಕಿಂಗ್ ನ್ಯೂಸ್
25-04-22 09:53 am HK Desk news ಕ್ರೈಂ
ಬೆಳ್ತಂಗಡಿ, ಎ.25 ಪರಿಶಿಷ್ಟ ಜನಾಂಗದ ಮಹಿಳೆಯನ್ನು ಅದೇ ಸಮುದಾಯದ ತಂಡವೊಂದು ಅರೆ ಬೆತ್ತಲೆಗೊಳಿಸಿ ಹಲ್ಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದ್ದು ಘಟನೆ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಮೂವರು ಮಹಿಳೆಯರು ಸೇರಿ ಒಂಬತ್ತು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಜಾಗದ ತಕರಾರಿನ ವಿಚಾರದಲ್ಲಿ ಹಲ್ಲೆ ಕೃತ್ಯ ನಡೆದಿದ್ದು ಉಜಿರೆ ಗುರಿಪಳ್ಳ ನಿವಾಸಿಗಳಾದ ಸಂದೀಪ್, ಸಂತೋಷ್, ಗುಲಾಬಿ, ಕುಸುಮ, ಸುಗುಣ, ಲೋಕಯ್ಯ, ಅನಿಲ್, ಲಲಿತ, ಚೆನ್ನಕೇಶವ ಎಂಬವರ ವಿರುದ್ಧ ಐಪಿಸಿ 143, 147, 148, 323, 324, 504, 354, 354(B), 506, 149 ಅಡಿ ಎಫ್ ಐಆರ್ ದಾಖಲಾಗಿದೆ.
ಬಿಜೆಪಿ ತಾಲೂಕು ಘಟಕದ ಎಸ್.ಟಿ. ಮೋರ್ಚಾ ಅಧ್ಯಕ್ಷ ಸೇರಿ ಹಲವರು ಸೇರಿ ಕೃತ್ಯ ನಡೆಸಿದ್ದಾಗಿ ಆರೋಪಿಸಲಾಗಿದೆ. ಅರೆಬೆತ್ತಲೆ ಮಾಡಿ ಹಲ್ಲೆ ನಡೆಸಿದ್ದಲ್ಲದೆ, ಕೃತ್ಯದ ವಿಡಿಯೋ ಮಾಡಿದ ಬಗ್ಗೆಯೂ ದೂರಿನಲ್ಲಿ ತಿಳಿಸಲಾಗಿದೆ.

ಹಲ್ಲೆಗೊಳಗಾದ ಮಹಿಳೆಯ ಕುಟುಂಬಸ್ಥರು ಸರಕಾರಿ ಜಾಗದಲ್ಲಿ ಮನೆ ನಿರ್ಮಿಸುವುದಕ್ಕಾಗಿ ಸಲ್ಲಿಸಿದ್ದ 94ಸಿ ಅರ್ಜಿಯ ವಿಚಾರದಲ್ಲಿ ಎ.19 ರಂದು ಪಂಚಾಯತ್ ಪಿಡಿಓ ಮತ್ತು ಗ್ರಾಮ ಲೆಕ್ಕಾಧಿಕಾರಿ ಸ್ಥಳಕ್ಕೆ ಬಂದಿದ್ದರು.
ಈ ಸಂದರ್ಭ ಜಾಗದ ವಿಚಾರದಲ್ಲಿ ಇನ್ನೊಂದು ತಂಡ ತಕರಾರು ತೆಗೆದಿದ್ದು ಅಧಿಕಾರಿಗಳ ಕೆಲಸಕ್ಕೆ ಅಡ್ಡಿ ಪಡಿಸಿತ್ತು. ಇದರಿಂದ ಅಳತೆಗೆ ಬಂದಿದ್ದ ಅಧಿಕಾರಿಗಳು ತಮ್ಮಿಂದ ಈ ಕಾರ್ಯ ಸಾಧ್ಯವಿಲ್ಲ ಎಂದು ಬಿಟ್ಟು ಹೋಗಿದ್ದರು. ಅಧಿಕಾರಿ ಸಿಬಂದಿ ತೆರಳಿದ ಬಳಿಕ ಸುರೇಖಾ ಎಂಬ ಮಹಿಳೆ ಧರಿಸಿದ್ದ ನೈಟಿಯನ್ನು ಹಿಡಿದೆಳೆದು ಹಲ್ಲೆ ನಡೆಸಿದ್ದಾಗಿ ದೂರಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
9 booked for stripping and assaulting tribal woman in Dakshina Kannada.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm