ಬ್ರೇಕಿಂಗ್ ನ್ಯೂಸ್
25-04-22 09:53 am HK Desk news ಕ್ರೈಂ
ಬೆಳ್ತಂಗಡಿ, ಎ.25 ಪರಿಶಿಷ್ಟ ಜನಾಂಗದ ಮಹಿಳೆಯನ್ನು ಅದೇ ಸಮುದಾಯದ ತಂಡವೊಂದು ಅರೆ ಬೆತ್ತಲೆಗೊಳಿಸಿ ಹಲ್ಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದ್ದು ಘಟನೆ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಮೂವರು ಮಹಿಳೆಯರು ಸೇರಿ ಒಂಬತ್ತು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಜಾಗದ ತಕರಾರಿನ ವಿಚಾರದಲ್ಲಿ ಹಲ್ಲೆ ಕೃತ್ಯ ನಡೆದಿದ್ದು ಉಜಿರೆ ಗುರಿಪಳ್ಳ ನಿವಾಸಿಗಳಾದ ಸಂದೀಪ್, ಸಂತೋಷ್, ಗುಲಾಬಿ, ಕುಸುಮ, ಸುಗುಣ, ಲೋಕಯ್ಯ, ಅನಿಲ್, ಲಲಿತ, ಚೆನ್ನಕೇಶವ ಎಂಬವರ ವಿರುದ್ಧ ಐಪಿಸಿ 143, 147, 148, 323, 324, 504, 354, 354(B), 506, 149 ಅಡಿ ಎಫ್ ಐಆರ್ ದಾಖಲಾಗಿದೆ.
ಬಿಜೆಪಿ ತಾಲೂಕು ಘಟಕದ ಎಸ್.ಟಿ. ಮೋರ್ಚಾ ಅಧ್ಯಕ್ಷ ಸೇರಿ ಹಲವರು ಸೇರಿ ಕೃತ್ಯ ನಡೆಸಿದ್ದಾಗಿ ಆರೋಪಿಸಲಾಗಿದೆ. ಅರೆಬೆತ್ತಲೆ ಮಾಡಿ ಹಲ್ಲೆ ನಡೆಸಿದ್ದಲ್ಲದೆ, ಕೃತ್ಯದ ವಿಡಿಯೋ ಮಾಡಿದ ಬಗ್ಗೆಯೂ ದೂರಿನಲ್ಲಿ ತಿಳಿಸಲಾಗಿದೆ.

ಹಲ್ಲೆಗೊಳಗಾದ ಮಹಿಳೆಯ ಕುಟುಂಬಸ್ಥರು ಸರಕಾರಿ ಜಾಗದಲ್ಲಿ ಮನೆ ನಿರ್ಮಿಸುವುದಕ್ಕಾಗಿ ಸಲ್ಲಿಸಿದ್ದ 94ಸಿ ಅರ್ಜಿಯ ವಿಚಾರದಲ್ಲಿ ಎ.19 ರಂದು ಪಂಚಾಯತ್ ಪಿಡಿಓ ಮತ್ತು ಗ್ರಾಮ ಲೆಕ್ಕಾಧಿಕಾರಿ ಸ್ಥಳಕ್ಕೆ ಬಂದಿದ್ದರು.
ಈ ಸಂದರ್ಭ ಜಾಗದ ವಿಚಾರದಲ್ಲಿ ಇನ್ನೊಂದು ತಂಡ ತಕರಾರು ತೆಗೆದಿದ್ದು ಅಧಿಕಾರಿಗಳ ಕೆಲಸಕ್ಕೆ ಅಡ್ಡಿ ಪಡಿಸಿತ್ತು. ಇದರಿಂದ ಅಳತೆಗೆ ಬಂದಿದ್ದ ಅಧಿಕಾರಿಗಳು ತಮ್ಮಿಂದ ಈ ಕಾರ್ಯ ಸಾಧ್ಯವಿಲ್ಲ ಎಂದು ಬಿಟ್ಟು ಹೋಗಿದ್ದರು. ಅಧಿಕಾರಿ ಸಿಬಂದಿ ತೆರಳಿದ ಬಳಿಕ ಸುರೇಖಾ ಎಂಬ ಮಹಿಳೆ ಧರಿಸಿದ್ದ ನೈಟಿಯನ್ನು ಹಿಡಿದೆಳೆದು ಹಲ್ಲೆ ನಡೆಸಿದ್ದಾಗಿ ದೂರಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
9 booked for stripping and assaulting tribal woman in Dakshina Kannada.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm