ಬ್ರೇಕಿಂಗ್ ನ್ಯೂಸ್
25-04-22 09:53 am HK Desk news ಕ್ರೈಂ
ಬೆಳ್ತಂಗಡಿ, ಎ.25 ಪರಿಶಿಷ್ಟ ಜನಾಂಗದ ಮಹಿಳೆಯನ್ನು ಅದೇ ಸಮುದಾಯದ ತಂಡವೊಂದು ಅರೆ ಬೆತ್ತಲೆಗೊಳಿಸಿ ಹಲ್ಲೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದ್ದು ಘಟನೆ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಮೂವರು ಮಹಿಳೆಯರು ಸೇರಿ ಒಂಬತ್ತು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಜಾಗದ ತಕರಾರಿನ ವಿಚಾರದಲ್ಲಿ ಹಲ್ಲೆ ಕೃತ್ಯ ನಡೆದಿದ್ದು ಉಜಿರೆ ಗುರಿಪಳ್ಳ ನಿವಾಸಿಗಳಾದ ಸಂದೀಪ್, ಸಂತೋಷ್, ಗುಲಾಬಿ, ಕುಸುಮ, ಸುಗುಣ, ಲೋಕಯ್ಯ, ಅನಿಲ್, ಲಲಿತ, ಚೆನ್ನಕೇಶವ ಎಂಬವರ ವಿರುದ್ಧ ಐಪಿಸಿ 143, 147, 148, 323, 324, 504, 354, 354(B), 506, 149 ಅಡಿ ಎಫ್ ಐಆರ್ ದಾಖಲಾಗಿದೆ.
ಬಿಜೆಪಿ ತಾಲೂಕು ಘಟಕದ ಎಸ್.ಟಿ. ಮೋರ್ಚಾ ಅಧ್ಯಕ್ಷ ಸೇರಿ ಹಲವರು ಸೇರಿ ಕೃತ್ಯ ನಡೆಸಿದ್ದಾಗಿ ಆರೋಪಿಸಲಾಗಿದೆ. ಅರೆಬೆತ್ತಲೆ ಮಾಡಿ ಹಲ್ಲೆ ನಡೆಸಿದ್ದಲ್ಲದೆ, ಕೃತ್ಯದ ವಿಡಿಯೋ ಮಾಡಿದ ಬಗ್ಗೆಯೂ ದೂರಿನಲ್ಲಿ ತಿಳಿಸಲಾಗಿದೆ.
ಹಲ್ಲೆಗೊಳಗಾದ ಮಹಿಳೆಯ ಕುಟುಂಬಸ್ಥರು ಸರಕಾರಿ ಜಾಗದಲ್ಲಿ ಮನೆ ನಿರ್ಮಿಸುವುದಕ್ಕಾಗಿ ಸಲ್ಲಿಸಿದ್ದ 94ಸಿ ಅರ್ಜಿಯ ವಿಚಾರದಲ್ಲಿ ಎ.19 ರಂದು ಪಂಚಾಯತ್ ಪಿಡಿಓ ಮತ್ತು ಗ್ರಾಮ ಲೆಕ್ಕಾಧಿಕಾರಿ ಸ್ಥಳಕ್ಕೆ ಬಂದಿದ್ದರು.
ಈ ಸಂದರ್ಭ ಜಾಗದ ವಿಚಾರದಲ್ಲಿ ಇನ್ನೊಂದು ತಂಡ ತಕರಾರು ತೆಗೆದಿದ್ದು ಅಧಿಕಾರಿಗಳ ಕೆಲಸಕ್ಕೆ ಅಡ್ಡಿ ಪಡಿಸಿತ್ತು. ಇದರಿಂದ ಅಳತೆಗೆ ಬಂದಿದ್ದ ಅಧಿಕಾರಿಗಳು ತಮ್ಮಿಂದ ಈ ಕಾರ್ಯ ಸಾಧ್ಯವಿಲ್ಲ ಎಂದು ಬಿಟ್ಟು ಹೋಗಿದ್ದರು. ಅಧಿಕಾರಿ ಸಿಬಂದಿ ತೆರಳಿದ ಬಳಿಕ ಸುರೇಖಾ ಎಂಬ ಮಹಿಳೆ ಧರಿಸಿದ್ದ ನೈಟಿಯನ್ನು ಹಿಡಿದೆಳೆದು ಹಲ್ಲೆ ನಡೆಸಿದ್ದಾಗಿ ದೂರಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
9 booked for stripping and assaulting tribal woman in Dakshina Kannada.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm