ಬ್ರೇಕಿಂಗ್ ನ್ಯೂಸ್
30-04-22 01:37 pm Mangalore Correspondent ಕ್ರೈಂ
ಮಂಗಳೂರು, ಎ.30: ತೊಕ್ಕೊಟ್ಟು ಜಂಕ್ಷನ್ನಲ್ಲಿರುವ ಮಸ್ಜಿದುಲ್ ಹುದಾ ಜುಮ್ಮಾ ಮಸೀದಿಯಲ್ಲಿ ಎ.28ರ ರಾತ್ರಿ ವಿಶೇಷ ಕಾರ್ಯಕ್ರಮ ನಡೆಯುತ್ತಿದ್ದಾಗ ಅನ್ಯಮತೀಯನೊಬ್ಬ ಅಕ್ರಮವಾಗಿ ನುಗ್ಗಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದ್ದು, ಉಳ್ಳಾಲ ಪೊಲೀಸರು ಆರೋಪಿ ಯುವಕನನ್ನು ಬಂಧಿಸಿದ್ದಾರೆ.
ಬಂಧಿತ ಯುವಕನನ್ನು ಕಾರ್ಕಳ ತಾಲೂಕಿನ ನಿಟ್ಟೆ ಮೂಲದ ನಿವಾಸಿ ಸುಜಿತ್ ಶೆಟ್ಟಿ(26) ಎಂದು ಗುರುತಿಸಲಾಗಿದೆ. ಮಸೀದಿಯಲ್ಲಿ ಲೈಲಾತುಲ ಖದರ್ ಎನ್ನುವ ವಿಶೇಷ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ತಡರಾತ್ರಿ 2 ಗಂಟೆ ವೇಳೆಗೆ ಮಹಿಳೆಯರು ನಮಾಜ್ ಮಾಡುವ ಕೊಠಡಿಗೆ ಯುವಕ ನುಗ್ಗಿದ್ದು, ಅಸಭ್ಯವಾಗಿ ವರ್ತಿಸಿದ್ದಾನೆ. ಹೆಣ್ಣು ಮಕ್ಕಳ ಕೈಹಿಡಿದೆಳೆದು ಅವಮಾನಕಾರಿ ರೀತಿಯಲ್ಲಿ ವರ್ತಿಸಿದ್ದಾನೆ ಎಂದು ಫಾಯಿಸಾ ತಮೀಮ್ ಎಂಬವರು ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
ಫಾಯಿಸಾ ತಮೀಮ್, ಬಿಫಾತಿಮಾ, ಆಯೆಷಾ ನಾಝ್ ಮತ್ತಿತರ ಮಹಿಳೆಯರು ಜೊತೆಗಿದ್ದಾಗ ಕೊಠಡಿಗೆ ಅಪರಿಚಿತ ವ್ಯಕ್ತಿ ಅಸಭ್ಯವಾಗಿ ವರ್ತಿಸಿದ್ದಾಗಿ ಎ.29ರ ಮಧ್ಯಾಹ್ನ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಘಟನೆ ಸಂಬಂಧಿಸಿ ಪೊಲೀಸರು ತನಿಖೆ ನಡೆಸಿ ಸುಜಿತ್ ಶೆಟ್ಟಿ ಎಂಬಾತನನ್ನು ಬಂಧಿಸಿದ್ದಾರೆ.
ಅಸಭ್ಯವಾಗಿ ವರ್ತಿಸಿಲ್ಲ , ಸಿಸಿಟಿವಿ ಚೆಕ್ ಮಾಡಿ
ನಿಟ್ಟೆ ಮೂಲದ ಸುಜಿತ್, ತೊಕ್ಕೊಟ್ಟಿನ ಸೀಶೆಲ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಕೆಲಸಕ್ಕಿದ್ದ. ಮಸೀದಿಗೆ ಬಂದಿದ್ದ ವ್ಯಕ್ತಿಗಳು ಬಾರ್ ಮುಂಭಾಗದಲ್ಲಿ ಕಾರು ಪಾರ್ಕಿಂಗ್ ಮಾಡಿದ್ದು ಈ ವೇಳೆ ಅಲ್ಲಿದ್ದ ಸುಜಿತ್ ಬಳಿ, ಇದಕ್ಕಾಗಿ ಹಣ ಕೊಡುತ್ತೇನೆ, ಮತ್ತೆ ಮಸೀದಿಗೆ ಬರುವಂತೆ ಹೇಳಿದ್ದರಂತೆ. ಅದರಂತೆ, ಕೆಲಹೊತ್ತಿನ ಬಳಿಕ ಹಣದಾಸೆಯಿಂದ ಸುಜಿತ್ ಮಸೀದಿ ಬಳಿಗೆ ತೆರಳಿದ್ದು ಹಣ ಕೊಡುತ್ತೇನೆ ಎಂದಿದ್ದವರನ್ನು ಹುಡುಕಾಡಿದ್ದ. ಅಲ್ಲಿ ಯುವತಿಯರು, ಮಹಿಳೆಯರು ಇದ್ದುದರಿಂದ ಮುಜುಗರಕ್ಕೊಳಗಾಗಿ ಹಿಂತಿರುಗಿ ಬಂದಿದ್ದನಂತೆ.
ಈ ಬಗ್ಗೆ ಮಹಿಳೆಯರ ಮೂಲಕ ಉಳ್ಳಾಲದಲ್ಲಿ ದೂರು ದಾಖಲಿಸಿದ್ದಲ್ಲದೆ, ಅಸಭ್ಯವಾಗಿ ವರ್ತಿಸಿದ್ದಾಗಿ ಆರೋಪ ಮಾಡಿದ್ದಾರೆ. ಯುವಕ ಉಳ್ಳಾಲ ಪೊಲೀಸರಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ಅಸಭ್ಯವಾಗಿ ವರ್ತಿಸಿದ್ದರೆ ಬೇಕಾದ್ರೆ ಅಲ್ಲಿನ ಸಿಸಿಟಿವಿ ಚೆಕ್ ಮಾಡಿ ಎಂದು ಗೋಗರೆದಿದ್ದಾನೆ. ಆದರೆ ಪೊಲೀಸರು ಯುವಕನ ಮಾತು ಕೇಳದೆ ಕೋರ್ಟಿಗೆ ಹಾಜರು ಪಡಿಸಲು ಕರೆದೊಯ್ದಿದ್ದಾರೆ. ಅಷ್ಟರಲ್ಲೇ ಪೊಲೀಸ್ ಕಮಿಷನರ್ ಯುವಕನ ಫೋಟೋ ಮತ್ತು ಎಫ್ಐಆರ್ ಕಾಪಿಯನ್ನು ಮೀಡಿಯಾ ಗ್ರೂಪಿನಲ್ಲಿ ಷೇರ್ ಮಾಡಿದ್ದಾರೆ.
Police arrested a youth for behaving indecently with women at Thokottu. The arrested person is identified as Sujith Shetty (26), a resident of Nitte, Karkala. As per the complaint filed by the victim, she and two other women were attending a special programme organised by the Huda Jumma Masjid in Thokottu at around 11.30 pm on Thursday April 28.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 01:58 pm
HK News Desk
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm