ಬ್ರೇಕಿಂಗ್ ನ್ಯೂಸ್
03-05-22 04:35 pm Mangalore Correspondent ಕ್ರೈಂ
ಬಂಟ್ವಾಳ, ಮೇ 3 : ಬಿ.ಸಿ.ರೋಡ್ ನಲ್ಲಿ ಮಕ್ಕಳ ತಜ್ಞರಾಗಿರುವ ಡಾ.ಅಶ್ವಿನ್ ಬಾಳಿಗಾ ಅವರನ್ನು ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ಮೈ ಜಿಯೋ ಏಪ್ ಡೌನ್ಲೋಡ್ ಮಾಡುವ ಹೆಸರಲ್ಲಿ ವೈದ್ಯರ ಖಾತೆಯಿಂದ 1.65 ಲಕ್ಷ ರೂಪಾಯಿ ಹಣ ದೋಚಿದ ಘಟನೆ ಬಗ್ಗೆ ಪೊಲೀಸ್ ದೂರು ನೀಡಲಾಗಿದೆ.
ಡಾ.ಅಶ್ವಿನ್ ಬಾಳಿಗಾ ಅವರಿಗೆ ಎ.28 ರಂದು ಸಂಜೆ 5.30 ಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದು ನಿಮ್ಮ ಜಿಯೋ ನಂಬರನ್ನು ಅಪ್ಡೇಟ್ ಮಾಡುವುದಾಗಿ ತಿಳಿಸಿದ್ದಾನೆ. ಅಲ್ಲದೆ, ಗೂಗಲ್ ಪ್ಲೇ ಸ್ಟೋರ್ ನಿಂದ ಕ್ವಿಕ್ ಈಝೀ ಏಪ್ ಡೌನ್ಲೋಡ್ ಮಾಡಲು ಹೇಳಿದ್ದಾನೆ. ಆನಂತರ, ಅಶ್ವಿನ್ ಬಾಳಿಗಾ ಅವರಿಗೆ ಮೈ ಜಿಯೋ ಏಪ್ ನಲ್ಲಿ ಮೊಬೈಲ್ ನಲ್ಲಿ ಹತ್ತು ರೂಪಾಯಿ ರಿಚಾರ್ಜ್ ಮಾಡಲು ತಿಳಿಸಿದ್ದ. ಅದರಂತೆ, ಅಶ್ವಿನ್ ಬಾಳಿಗಾ ಅವರು ತನ್ನ ಎಚ್ ಡಿಎಫ್ ಸಿ ಬ್ಯಾಂಕ್ ಖಾತೆ ಮತ್ತು ಎಟಿಎಂ ಕಾರ್ಡ್ ವಿವರಗಳನ್ನು ಮೈ ಜಿಯೋ ಏಪ್ ನಲ್ಲಿ ದಾಖಲಿಸಿ, ಹತ್ತು ರೂ. ರಿಚಾರ್ಜ್ ಮಾಡಿದ್ದಾರೆ.

ಕೂಡಲೇ ವೈದ್ಯರ ಬ್ಯಾಂಕ್ ಖಾತೆಯುಳ್ಳ ಎಚ್ ಡಿಎಫ್ ಸಿ ಖಾತೆಯಿಂದ ಹತ್ತು ಸಾವಿರ ರೂ. ಮೂರು ಬಾರಿ ಕಟ್ ಆಗಿದೆ. ಆನಂತರ ರೂ.45 ಸಾವಿರದಂತೆ ಮೂರು ಬಾರಿ ಕಟ್ ಆಗಿದ್ದು ಅಪರಿಚಿತನ ಖಾತೆಗೆ ಹಣ ವರ್ಗಾವಣೆ ಆಗಿದೆ. ಒಟ್ಟು 1.65 ಲಕ್ಷ ರೂ. ಹಣ ಖಾತೆಯಿಂದ ಬೇರೆ ಖಾತೆಗೆ ಜಮಾ ಆಗಿದ್ದು ವೈದ್ಯರು ಮೋಸ ಹೋಗಿದ್ದಾರೆ. ಈ ಬಗ್ಗೆ ವೈದ್ಯ ಡಾ.ಅಶ್ವಿನ್ ಬಾಳಿಗಾ ಮಂಗಳೂರಿನ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.
Mangalore Fraud in the name of My Jio app update, doctor looted of 1.65 lakh in Bantwal.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm