ಬ್ರೇಕಿಂಗ್ ನ್ಯೂಸ್
03-05-22 04:35 pm Mangalore Correspondent ಕ್ರೈಂ
ಬಂಟ್ವಾಳ, ಮೇ 3 : ಬಿ.ಸಿ.ರೋಡ್ ನಲ್ಲಿ ಮಕ್ಕಳ ತಜ್ಞರಾಗಿರುವ ಡಾ.ಅಶ್ವಿನ್ ಬಾಳಿಗಾ ಅವರನ್ನು ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ಮೈ ಜಿಯೋ ಏಪ್ ಡೌನ್ಲೋಡ್ ಮಾಡುವ ಹೆಸರಲ್ಲಿ ವೈದ್ಯರ ಖಾತೆಯಿಂದ 1.65 ಲಕ್ಷ ರೂಪಾಯಿ ಹಣ ದೋಚಿದ ಘಟನೆ ಬಗ್ಗೆ ಪೊಲೀಸ್ ದೂರು ನೀಡಲಾಗಿದೆ.
ಡಾ.ಅಶ್ವಿನ್ ಬಾಳಿಗಾ ಅವರಿಗೆ ಎ.28 ರಂದು ಸಂಜೆ 5.30 ಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದು ನಿಮ್ಮ ಜಿಯೋ ನಂಬರನ್ನು ಅಪ್ಡೇಟ್ ಮಾಡುವುದಾಗಿ ತಿಳಿಸಿದ್ದಾನೆ. ಅಲ್ಲದೆ, ಗೂಗಲ್ ಪ್ಲೇ ಸ್ಟೋರ್ ನಿಂದ ಕ್ವಿಕ್ ಈಝೀ ಏಪ್ ಡೌನ್ಲೋಡ್ ಮಾಡಲು ಹೇಳಿದ್ದಾನೆ. ಆನಂತರ, ಅಶ್ವಿನ್ ಬಾಳಿಗಾ ಅವರಿಗೆ ಮೈ ಜಿಯೋ ಏಪ್ ನಲ್ಲಿ ಮೊಬೈಲ್ ನಲ್ಲಿ ಹತ್ತು ರೂಪಾಯಿ ರಿಚಾರ್ಜ್ ಮಾಡಲು ತಿಳಿಸಿದ್ದ. ಅದರಂತೆ, ಅಶ್ವಿನ್ ಬಾಳಿಗಾ ಅವರು ತನ್ನ ಎಚ್ ಡಿಎಫ್ ಸಿ ಬ್ಯಾಂಕ್ ಖಾತೆ ಮತ್ತು ಎಟಿಎಂ ಕಾರ್ಡ್ ವಿವರಗಳನ್ನು ಮೈ ಜಿಯೋ ಏಪ್ ನಲ್ಲಿ ದಾಖಲಿಸಿ, ಹತ್ತು ರೂ. ರಿಚಾರ್ಜ್ ಮಾಡಿದ್ದಾರೆ.

ಕೂಡಲೇ ವೈದ್ಯರ ಬ್ಯಾಂಕ್ ಖಾತೆಯುಳ್ಳ ಎಚ್ ಡಿಎಫ್ ಸಿ ಖಾತೆಯಿಂದ ಹತ್ತು ಸಾವಿರ ರೂ. ಮೂರು ಬಾರಿ ಕಟ್ ಆಗಿದೆ. ಆನಂತರ ರೂ.45 ಸಾವಿರದಂತೆ ಮೂರು ಬಾರಿ ಕಟ್ ಆಗಿದ್ದು ಅಪರಿಚಿತನ ಖಾತೆಗೆ ಹಣ ವರ್ಗಾವಣೆ ಆಗಿದೆ. ಒಟ್ಟು 1.65 ಲಕ್ಷ ರೂ. ಹಣ ಖಾತೆಯಿಂದ ಬೇರೆ ಖಾತೆಗೆ ಜಮಾ ಆಗಿದ್ದು ವೈದ್ಯರು ಮೋಸ ಹೋಗಿದ್ದಾರೆ. ಈ ಬಗ್ಗೆ ವೈದ್ಯ ಡಾ.ಅಶ್ವಿನ್ ಬಾಳಿಗಾ ಮಂಗಳೂರಿನ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.
Mangalore Fraud in the name of My Jio app update, doctor looted of 1.65 lakh in Bantwal.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm